ಬೆಳಗಾವಿ: ಸ್ನೇಹಿತನನ್ನು ಬರ್ತ್ಡೇ (Birthday) ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಬಸವರಾಜ್ ಮುದ್ದಣ್ಣವರ (23) ಎಂದು ಗುರುತಿಸಲಾಗಿದೆ. ಬಸವರಾಜ್ ಎಂಎಸ್ಡಬ್ಲ್ಯೂ (MSW) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆತನನ್ನು ಸ್ನೇಹಿತ ಮಲ್ಲಿಕಾರ್ಜುನ್ ಬರ್ತ್ ಡೇ ಪಾರ್ಟಿಗೆ ಕರೆದಿದ್ದ. ಬಳಿಕ ಆತ ಬರುತ್ತಿದ್ದಂತೆ ಗಲಾಟೆ ಆರಂಭಿಸಿ, ಐವರು ಸ್ನೇಹಿತರು ಸೇರಿ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
Read More »Daily Archives: ಜೂನ್ 7, 2024
ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ
ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ …
Read More »