ರಾಯಚೂರು: ರಾಜ್ಯದಲ್ಲಿ ಯಾವ ಸರ್ಕಾರ ಬಂದರೇನು?, ಹೋದರೇನು? ಸರ್ಕಾರದ ಮಾತಿಗೆ ಜಿಲ್ಲೆಯಲ್ಲಿ ಕವಡೆ ಕಾಸಿನ ಬೆಲೆ ಇಲ್ಲ. ಜಿಲ್ಲೆಯ ಹಲವೆಡೆ ನೀರಿಗಾಗಿ ಪರಿತಪಿಸುತ್ತ ವರ್ಷ ಕಳೆದರೂ ಜಿಲ್ಲಾಡಳಿತ ಗಂಭೀರವಾಗಿಲ್ಲ. ಚುನಾಯಿತ ಪ್ರತಿನಿಧಿಗಳೂ ತಲೆಕೆಡಿಸಿಕೊಂಡಿಲ್ಲ. ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನರ ಗೋಳು ಹೆಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವರು ಇದ್ದರೂ ಯಾವ ಲೆಕ್ಕಕ್ಕೂ ಇಲ್ಲ. ಅವರು ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ರಾಜ್ಯ …
Read More »Daily Archives: ಜೂನ್ 10, 2024
ಮದುವೆಯಾಗುವುದಾಗಿ ನಂಬಿಸಿ ₹ 1.69 ಲಕ್ಷ ವಂಚನೆ
ಧಾರವಾಡ: ಸಂಗೀತಾ ಎಂಬುವರು ‘ಜೀವನ್ ಸಾಥಿ’ ಮ್ಯಾಟ್ರಿಮೋನಿ ಆಯಪ್ ಮೂಲಕ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಆನ್ಲೈನ್ನಲ್ಲಿ ₹1.69 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಕುರಿತು ‘ಸೆನ್’ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಗೋಳದ ಕುಶಾಲ್ ಅವರು ದೂರು ನೀಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ಸಂಗೀತಾ ಮತ್ತು ಶಿವರಾಜಕುಮಾರ ವಿರುದ್ಧ ದೂರು ನೀಡಿದ್ಧಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ (2008), ವಂಚನೆ (ಐಪಿಸಿ 419 ಹಾಗೂ …
Read More »ಮೋದಿ ಗೆದ್ದಿರುವುದು 1.5 ಲಕ್ಷ ಮತಗಳ ಅಂತರದಲ್ಲಿ ಮಾತ್ರ: ಸಂತೋಷ್ ಲಾಡ್
ಧಾರವಾಡ: ‘ಮೋದಿ ಅಲೆ ಕೆಲವು ಕಡೆ ಮಾತ್ರ ಇದೆ, ಎಲ್ಲ ಕಡೆ ಇಲ್ಲ. ಮೋದಿ ಅವರು ಗೆದ್ದಿರುವುದೇ 1.5 ಲಕ್ಷ ಮತಗಳ ಅಂತರದಲ್ಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕುಟುಕಿದರು. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಧಾನಿಗಳು 5 ಲಕ್ಷಕ್ಕೂ ಹೆಚ್ಚು ಅಂತರ ಪಡೆದವರೇ ಹೆಚ್ಚು. ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಎರಡನೇ ಪ್ರಧಾನಿ ಮೋದಿ. ಚಂದ್ರಶೇಖರ್ ಅವರು 1.5 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು ಎಂದರು. …
Read More »ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ- ಇಬ್ಬರ ಸಾವು
ಹಂದಿಗುಂದ: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಗ್ರಾಮದ ಹೊರವಲಯದಲ್ಲಿ ಶನಿವಾರ ಸಂಜೆ ನಡೆದಿದೆ. ಸಮೀಪದ ಪಾಲಬಾವಿಯ ಮಹಾಲಿಂಗ ನಿಂಗನೂರ(47), ಈರಪ್ಪ ಉಗಾರೆ(32) ಮೃತಪಟ್ಟವರು. ಈ ಘಟನೆಯಲ್ಲಿ ಇಮಾಮ್ ಸನದಿ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಚಿಕಿತ್ಸೆಗಾಗಿ ಹಾರೂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಸದ್ದಾಮ್ ಪಠಾಣ ಪರಾರಿಯಾಗಿದ್ದಾರೆ. ‘ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ …
Read More »ಹುಕ್ಕೇರಿ: ಬಕ್ರೀದ್ ಶಾಂತಿ ಸಭೆ
ಹುಕ್ಕೇರಿ: ಬಕ್ರೀದ್ ಹಾಗೂ ಅಕಾನಿಬಾಷಾ ಉರುಸ್ ಶಾಂತಿಪಾಲನಾ ಪೂರ್ವಭಾವಿ ಸಭೆ ಪಾಶ್ಚಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆಯಿತು. ಯಮಕನಮರಡಿ ಪಿ.ಐ. ಮಹಾದೇವ ಶಿರಹಟ್ಟಿ, ಎ.ಎಸ್.ಐ. ಎಸ್.ಬಿ. ಮುರಗೋಡ, ಪೊಲೀಸ್ ಸಿಬ್ಬಂದಿ ಗ್ರಾಮಸ್ಥರ ಕುರಿತು ಚರ್ಚಿಸಿ, ಸಲಹೆ, ಸೂಚನೆ ನೀಡಿದರು. ಪಾಶ್ಚಾಪುರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅಬ್ದುಲಗಣಿ ದರ್ಗಾ, ನಜೀರ ಮೊಮೀನ, ರಫೀಕ್ ಪೀರಜಾದೆ, ಅಣ್ಣಾಸಾಹೇಬ ಮಹಾಜನಶೆಟ್ಟಿ, ಅಮರ ಮಹಾಜನಶೆಟ್ಟಿ, ಹಯಾತಚಾಂದ ಸನದಿ, ಮಹೇಶ ಹೂಗಾರ, ಮಹಾಂತೇಶ …
Read More »ಜಗದೀಶ್ ಶೆಟ್ಟರ್ ಮುಂದೆ ಸವಾಲುಗಳ ಸಾಲು…
ಬೆಳಗಾವಿ: ಸಂಸದ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ‘ಮನೆಯ ಸದಸ್ಯ’ ಎಂದು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕವೇ ಅವರು ಈ ಮಾತಿಗೆ ‘ಠಸ್ಸೆ’ ಹೊಡೆಯಬೇಕಿದೆ. ‘ಬೆಳಗಾವಿಯಲ್ಲಿ ಶೆಟ್ಟರ್ಗೆ ಅಡ್ರೆಸ್ಸೇ ಇಲ್ಲ’ ಎಂಬ ಆರೋಪಕ್ಕೆ, ‘ಬೀಗರ ಮನೆಗೆ ಬಂದಿದ್ದೀರಿ ಶೆಟ್ಟರೇ, ಉಂಡು ವಾಪಸ್ ಹೋಗಿ’ ಎಂಬ ಮೂದಲಿಕೆಗೆ, ‘ಬೆಳಗಾವಿಗೆ ಮೋಸ ಮಾಡಿದವರಿಗೆ ಮತ ಕೊಡಬೇಕೆ?’ ಎಂಬ ಪ್ರಶ್ನೆಗಳಿಗೆ ಮತದಾರ ಈಗ ಉತ್ತರ ಕೊಟ್ಟಿದ್ದಾನೆ. ಶೆಟ್ಟರ್ ರಾಜಕೀಯ ಹೆಜ್ಜೆಯೊಂದನ್ನು …
Read More »ದಾರಿ ಯಾವುದಯ್ಯ ಹೊಲಕ್ಕೆ?
ಬೈಲಹೊಂಗಲ: ಮುಂಗಾರು ಬಂತೆಂದರೆ ರೈತರಿಗೆ ಜಮೀನುಗಳಿಗೆ ಹೇಗೆ ಹೋಗಬೇಕು, ಹೇಗೆ ಬಿತ್ತನೆ ಮಾಡಬೇಕು ಎಂಬುದೇ ಚಿಂತೆಯಾಗುತ್ತದೆ. ಈ ಬಾರಿ ಕೂಡ ಬೈಲಹೊಂಗಲ ಮತಕ್ಷೇತ್ರದ ಮಾಟೊಳ್ಳಿ ಗ್ರಾಮದ ರೈತರು ಹೊಲಕ್ಕೆ ಹೋಗುವ ದಾರಿ ಇಲ್ಲದೇ ಪರದಾಡುವಂತಾಗಿದೆ. ಗ್ರಾಮದ ಅಂಗಡಿ ಅವರ ಹೊಲದಿಂದ ಗುಡಿ ಅವರ ಹೊಲದವರೆಗೆ ಈ ಭಾಗದ ರೈತರ ಹೊಲಗಳಿಗೆ ಹೋಗುವ ರಸ್ತೆ ತೀರ ಹದಗೆಟ್ಟಿದ್ದು, ರೈತರ ಗೋಳು ಕೇಳುವರು ಯಾರು ಎಂಬತಾಗಿದೆ. ಮಳೆ ಆಗಿದ್ದರಿಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಿ …
Read More »ವರುಣನ ಅಬ್ಬರ: ಆರಂಭದಲ್ಲೇ ಅವಾಂತರ
ಬೆಳಗಾವಿ: ಮುಂಗಾರು ಚುರುಕುಗೊಂಡಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದ ಜನರು ತುಸು ನಿರಾಳವಾಗಿದ್ದಾರೆ. ಆದರೆ, ಮಳೆ ಸೃಷ್ಟಿಸಿದ ಅವಾಂತರಗಳು ನಗರದಲ್ಲಿ ಜನರನ್ನು ಮತ್ತೆ ಸಂಕಷ್ಟಕ್ಕೆ ತಳ್ಳುತ್ತಿವೆ. ಒಂದು ಸಮಸ್ಯೆ ನೀಗಿತು ಎನ್ನುಷ್ಟರಲ್ಲಿ ಮತ್ತೊಂದು ಧುತ್ತೆಂದು ಎದುರಾಗಿದೆ. ಒಂದು ತಾಸು ಧಾರಾಕಾರ ಮಳೆಯಾದರೆ ಸಾಕು; ವಿವಿಧ ಬಡಾವಣೆಗಳ ಮುಖ್ಯರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿದೆ. ಚರಂಡಿಗಳು ತುಂಬಿ ಕೊಳಚೆ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಮರಗಳು ನೆಲಕ್ಕುರುಳುವುದು, ವಿದ್ಯುತ್ ಪರಿಕರಗಳಿಗೆ ಹಾನಿಯಾಗುವುದು, ತಗ್ಗು …
Read More »ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ. ಸಂಸದ ಸಂಜಯ್ ಸಿಂಗ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪತನಗೊಳ್ಳಲಿದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಭವಿಷ್ಯ ನುಡಿದಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ಸರಕಾರ ರಚಿಸಿದ ಬಗ್ಗೆ ಪ್ರಯಾಗ್ರಾಜ್ನಲ್ಲಿರುವ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್, ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ. ಎನ್ಡಿಎ ಘಟಕಗಳ …
Read More »ಬರ ಮರೆಸಿದ ಮಳೆ; ಬಿತ್ತನೆಗೆ ಸಿದ್ಧತೆ
ನರಗುಂದ: ಬರದಿಂದ ತತ್ತರಿಸಿದ್ದ ತಾಲ್ಲೂಕಿನ ರೈತರಿಗೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಹೊಸ ಭರವಸೆ ಮೂಡಿಸಿದೆ. ಕೃಷಿ ಹೊಂಡಗಳು, ಕೆರೆ- ಕಟ್ಟೆಗಳು ಭರ್ತಿಯಾಗಿದ್ದು ಕೃಷಿಕರಲ್ಲಿ ಉತ್ಸಾಹ ತುಂಬಿದೆ. ಕಳೆದ ಮೂರು ವರ್ಷಗಳಿಂದ ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ ರೈತರು ತೊಂದರೆ ಅನುಭವಿಸಿದ್ದರು. ಆದರೆ, ಈ ಬಾರಿ ರೋಹಿಣಿ ಮಳೆ ಸ್ವಲ್ಪ ತಡವಾಗಿ ಸುರಿದರೂ ಬಿತ್ತನೆಗೆ ಅನುಕೂಲ ಕಲ್ಪಿಸಿದೆ. ಮೃಗಶಿರಾ ಆರಂಭದಿಂದಲೇ ಸುರಿಯುತ್ತಿದ್ದು ರೈತರಿಗೆ ನೆಮ್ಮದಿ ಕೊಟ್ಟಿದೆ. ಮಳೆಯಿಂದಾಗಿ ತಾಲ್ಲೂಕಿನ …
Read More »