Breaking News

Daily Archives: ಜೂನ್ 11, 2024

ಡಿ. ಕೆ. ಶಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದ ಪ್ರಿಯಂಕಾ ಜಾರಕಿಹೊಳಿ

ಬೆಂಗಳೂರು : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು. ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌ ಅವರು, ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ …

Read More »

ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ

ಮುನವಳ್ಳಿ : ನಿಸರ್ಗದ ಮಡಿಲಲ್ಲಿರುವ ವರವಿಕೊಳ್ಳ ಜಲಪಾತ ಮಳೆಗಾಲದಲ್ಲಿ ಮೈತುಂಬಿ ಸುಮಾರು 200 ಅಡಿ ಎತ್ತರದಿಂದ ಎತ್ತರದಿಂದ ಧುಮ್ಮಿಕ್ಕುವ ನಯನ ಮನೋಹರ ದೃಶ್ಯ ಅದ್ಭುತವಾಗಿದೆ. ಜಲಪಾತದ ಅಡಿಯ ಗವಿಯಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನವಿದೆ. ತಿಂಡಿ, ಊಟ, ವಸತಿಗಾಗಿ ಮುನವಳ್ಳಿಯಲ್ಲಿ ಉತ್ತಮವಾದ ಹೊಟೇಲ್, ಲಾಡ್ಜ್ ಗಳ ಅನುಕೂಲತೆ ಇದೆ. ಜಲಪಾತಕ್ಕೆ ಹೋಗುವ ದಾರಿ : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಿಂದ ನರಗುಂದ ಮಾರ್ಗವಾಗಿ 4 ಕಿಮೀ ಕ್ರಮಿಸಬೇಕು, ನಂತರ ವರವಿಕೊಳ್ಳ ಜಲಪಾತದ ಮಾರ್ಗಸೂಚಿ …

Read More »

ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಸಚಿವ ಕೆ.ಎನ್‌.ರಾಜಣ್ಣ

ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ ಆಗಲ್ಲ’ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ನುಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಬದಲಾಗುತ್ತಾರೆ? ಒಂದು ವರ್ಷ ಕೆಲಸ ಮಾಡೋದ್ರಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿದ್ದಾರಾ? ಅಥವಾ ಯಾವುದಾದರೂ ಹಗರಣ ಇದೆಯಾ? ಇಲ್ಲ ಅಂದ ಮೇಲೆ ಯಾವ ಆಧಾರದ ಮೇಲೆ ಅವರನ್ನು ಬದಲಾಯಿಸಲು ಹೋಗುತ್ತಾರೆ ಎಂದರು. ಗ್ಯಾರಂಟಿ …

Read More »

ಮತ್ತೆ ಮೂವರು ಡಿಸಿಎಂ ಬೇಡಿಕೆ ಮುಂದಿಟ್ಟ ಸಚಿವ ಕೆ.ಎನ್‌.ರಾಜಣ್ಣ

ತುಮಕೂರು (ಗ್ರಾಮಾಂತರ): ಮೂವರು ಉಪಮುಖ್ಯಮಂತ್ರಿ ಆಗಬೇಕು ಎಂಬ ನನ್ನ ನಿರಂತರ ವಾದ ಇದ್ದೇ ಇದೆ. ಈಗ ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಹೀಗಾಗಿ 3 ಡಿಸಿಎಂ ಬೇಕು. ಲೋಕಸಭಾ ಚುನಾವಣೆ ಇದ್ದಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸುಮ್ಮನಿರಲು ಹೇಳಿದ್ದರು. ಹೀಗಾಗಿ ಇಷ್ಟು ದಿನ ಸುಮ್ಮನಿದ್ದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈ ಬಗ್ಗೆ ಸದ್ಯದಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತೆ ಖುದ್ದಾಗಿ ಭೇಟಿ ಮಾಡಿ ಈ …

Read More »

ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

ಮೈಸೂರು: ವಿಶ್ವ ಮನ್ನಣೆ ಗಳಿಸಿರುವ ಸಂಗೀತ ಧ್ರುವತಾರೆ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇಂದು ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್ ತಾರಾನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.   ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದ ರಾಜೀವ್ ತಾರಾನಾಥ್ ಅವರು ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಅವರ ಸಂಗೀತ ಸೇವೆಗಾಗಿ ಪದ್ಮಶ್ರೀ, …

Read More »

ಜೇವರ್ಗಿ: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ಜೇವರ್ಗಿ: ತಾಲ್ಲೂಕಿನ ಬಳ್ಳುಂಡಗಿ ಗ್ರಾಮದ ಹೊಲಕ್ಕೆ ಸೋಮವಾರ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್‌ ತಂತಿ ತಗುಲು ಮೃತಪಟ್ಟಿದ್ದಾರೆ, ಮೃತಳನ್ನು ರೇಣುಕಾಬಾಯಿ ಭಾಗಣ್ಣ ನಾಟೀಕಾರ (37) ಬಳ್ಳುಂಡಗಿ ಎಂದು ಗುರುತಿಸಲಾಗಿದೆ. ರೇಣುಕಾಬಾಯಿ ಅವರು ಗ್ರಾಮದ ಹೊಲಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಮಳೆ-ಗಾಳಿಯಿಂದ ಹರಿದು ನೆಲಕ್ಕೆ ಬಿದ್ದ ವಿದ್ಯುತ್ ಎಲ್‌ಟಿ ಲೈನ್‌ ತುಳಿದು ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಪರಿಹಾರಕ್ಕೆ ಆಗ್ರಹ: ಮೃತ ರೇಣುಕಾಬಾಯಿ ನಾಟೀಕಾರ ಅವರ ನಿಧನದಿಂದ ಕುಟುಂಬಸ್ಥರು …

Read More »

ಇಳಕಲ್ | ಶೌಚಾಲಯ ನಿರ್ಮಾಣಕ್ಕೆ ಆಗ್ರಹ: ಚೊಂಬು ಹಿಡಿದು ಪ್ರತಿಭಟನೆ

ಇಳಕಲ್: ಇಲ್ಲಿಯ ಗೌಳೇರಗುಡಿ (ನವನಗರ ) ಯಲ್ಲಿ ವೈಯಕ್ತಿಕ ಶೌಚಾಲಯ ಹಾಗೂ ಸಾರ್ವಜನಿಕ ಶೌಚಾಲಯಗಳಿಲ್ಲ. ಹೀಗಾಗಿ ಬಹಿರ್ದೆಸೆಗೆ ತೊಂದರೆಯಾಗಿದೆ ಎಂದು ಪ್ಲಾಸ್ಟಿಕ್‌ ಚೊಂಬು (ತಂಬಿಗೆ) ಹಿಡಿದು ಮಹಿಳೆಯರು ಮಂಗಳವಾರ ಪ್ರತಿಭಟನೆ ಮಾಡಿದರು. ಈವರೆಗೆ ನವನಗರದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗುತ್ತಿದ್ದರು. ಈಗ ಆ ಸ್ಥಳದ ಮಾಲೀಕ ಅಲ್ಲಿ ನಿವೇಶನಗಳನ್ನು ಮಾಡಿ, ಬೇಲಿ ಹಾಕಿದ್ದರಿಂದ ಬಹಿರ್ದೆಸೆಗೆ ಹೋಗಲು ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಲು …

Read More »

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಬರದ ಹಿನ್ನೆಲೆಯಲ್ಲಿ …

Read More »

ಗಜೇಂದ್ರಗಡ ಬೆಟ್ಟಗಳ ಮೇಲಿದೆ ಮಿನಿ ಮರುಭೂಮಿ?

ಗದಗ: ಬೆಂಗಳೂರಿನ ಇಬ್ಬರು ಸೇರಿದಂತೆ ಪ್ರಕೃತಿ ಪ್ರೇಮಿಗಳ ತಂಡವೊಂದು ಇತ್ತೀಚೆಗೆ ಗಜೇಂದ್ರಗಡದ ಗುಡ್ಡದ ಮೇಲಿನ ಸಣ್ಣ ಮರುಭೂಮಿಗೆ ತೆರಳಿತ್ತು. 30 ಎಕರೆ ಪ್ರದೇಶದಲ್ಲಿ ಹರಡಿರುವ ಈ ಮರುಭೂಮಿಯ ಕುರಿತು ಅಧ್ಯಯನ ನಡೆಸಲು ಈ ತಂಡ ಭೂವಿಜ್ಞಾನಿಗಳು ಮತ್ತು ಸಂಶೋಧಕರೊಂದಿಗೆ ಕೈಜೋಡಿಸಿದೆ. ಸಂಶೋಧಕರ ಪ್ರಕಾರ, ಅಲ್ಲಿನ ಮರಳು ಮರುಭೂಮಿಗಳಲ್ಲಿ ಕಂಡುಬರುವ ಮರಳನ್ನು ಹೋಲುತ್ತದೆ ಮತ್ತು ಕಟ್ಟಡ ಅಥವಾ ನಿರ್ಮಾಣ ಉದ್ದೇಶಗಳಿಗಾಗಿ ಬಳಸಲಾಗುವುದಿಲ್ಲ. ಇದು ನದಿ ಮರಳಿನಂತೆ ಸಾಂದ್ರವಾಗಿಲ್ಲ. ಇದು ಮರುಭೂಮಿ ಮರಳಿನಂತೆ ಸಡಿಲವಾಗಿದೆ. …

Read More »

ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೆ ಗೆಲ್ಲುತ್ತಾರೆ ಅಂತ 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಟ್ಟಿಂಗ್ ಕಟ್ಟಿ 50 ಲಕ್ಷ ರೂಪಾಯಿ ಕಟ್ಟಿ ಸೋತು ಸಾಲದ ಸುಳಿಗೆ ಸಿಲುಕಿದ್ದ ರಾಮನಗರ ಜಿಲ್ಲೆಯ ಕೆಂಚನಕುಪ್ಪೆ ನಿವಾಸಿ 44 ವರ್ಷದ ಶಿವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಿಡದಿ ಠಾಣಾ …

Read More »