Breaking News

Daily Archives: ಜೂನ್ 11, 2024

ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ: ವಕೀಲರ ಮುಂದೆ ನಟ ದರ್ಶನ್ ಕಣ್ಣೀರು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ …

Read More »

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮೃಣಾಲ್ ಬಿಜೆಪಿಯ ಜಗದೀಶ್ ಶೆಟ್ಟರ್ ವಿರುದ್ಧ 1.78 ಲಕ್ಷ ಮತಗಳ ಅಂತರದಿಂದ …

Read More »

ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು: ಸಿಎಂ

ಬೆಂಗಳೂರು, ಜೂನ್ 11: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು …

Read More »

ವಿನಯ ಕುಲಕರ್ಣಿ ವಿರುದ್ಧದ ದೋಷಾರೋಪ ರದ್ದತಿಗೆ ಸುಪ್ರೀಂ ನಕಾರ

ಹುಬ್ಬಳ್ಳಿ,ಜೂ.11- ಬಿಜೆಪಿ ಕಾರ್ಯಕರ್ತ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಿಗದಿಯಾಗಿರುವ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. 2016ರಲ್ಲಿ ಧಾರವಾಡದಲ್ಲಿ ಯೋಗೇಶ್‌ ಅವರನ್ನು ಹತ್ಯೆ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಂಜಯ್‌ಕುಮಾರ್‌ ಮತ್ತು ಆಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರು ಇದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತ್ತು. ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ …

Read More »

ಶಕ್ತಿ ಯೋಜನೆಗೆ 1 ವರ್ಷ ಪೂರ್ಣ, ಶೂನ್ಯ ಟಿಕೆಟ್ ಮೊತ್ತ ₹1352.68 ಕೋಟಿ, ಅಪ್ಡೇಟ್ಸ್

ಹುಬ್ಬಳ್ಳಿ, ಜೂನ್ 11: ಕರ್ನಾಟಕದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಒಂದು ವರ್ಷ (ಜೂನ್ 11) ಪೂರ್ಣಗೊಂಡಿದೆ. ಯೋಜನೆಯಿಂದ ರಾಜ್ಯದ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ 52.12 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಶೂನ್ಯ ಟಿಕೆಟ್ ಮೊತ್ತ 1352.68 ಕೋಟಿ ರೂ. ಗಳಾಗಿವೆ ಎಂದು NWKRTC ಸಂಸ್ಥೆಯ …

Read More »

ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು

ತೆಲಸಂಗ: ರಸ್ತೆಗಳ ಬದಿಗಳಲ್ಲಿ ಅಳವಡಿಸುವ ಗ್ರಾಮಗಳ ಮಾರ್ಗಸೂಚಿ ಫಲಕಗಳು ಮಾರ್ಗಸೂಚಿಯಾಗಿರಬೇಕು. ಆದರೆ ಅಥಣಿ ತಾಲೂಕಿನ ಕಕಮರಿಯಿಂದ ತೆಲಸಂಗ ಸಾವಳಗಿವರೆಗೆ ಅಭಿವೃದ್ಧಿ ಪಡಿಸಿರುವ ಕರ್ನಾಟಕ ಎಸ್‌.ಎಚ್‌ 260 ರಸ್ತೆ ಬದಿಯಲ್ಲಿ ಅಳವಡಿಸಿರುವ ಗ್ರಾಮಗಳ ಕಿ.ಮೀ ಮಾರ್ಗಸೂಚಿ ಫಲಕಗಳು ಪ್ರಯಾಣಿಕರಿಗೆ ದಾರಿ ತಪ್ಪಿಸುತ್ತಿವೆ. ಫಲಕಗಳಲ್ಲಿ ಕಿ.ಮೀ. ಲೋಪದೋಷಗಳಾಗಿವೆ. ಹಾಲಳ್ಳಿ ಮಾರ್ಗದಿಂದ ತೆಲಸಂಗ ಕ್ರಾಸ್‌ ರಸ್ತೆ ದಾಟುವ ಮುನ್ನ ಹಾಕಿರುವ ಫಲಕದಲ್ಲಿ ತೆಲಸಂಗ 2 ಕಿ.ಮೀ. ಬರೆಯುವ ಬದಲು 3 ಕಿ.ಮೀ ಅಂತ ಬರೆಯಲಾಗಿದೆ. ಆಶ್ಚರ್ಯವೆಂದರೆ …

Read More »

ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ

ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ 10.25 ಇಳುವರಿಗೆ 3400 ನ್ಯಾಯ ಸಮ್ಮತವಲ್ಲ. ಬೆಳಗಾವಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಆರೋಪ. ಕಬ್ಬಿನ ಬಾಕಿ ಬಡ್ಡಿ ಹಣ ಸಮೇತ ರೈತರಿಗೆ ಕೂಡಲೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯ.   ಬರಗಾಲದಿಂದ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವಾಗಲೇ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿ ಕಬ್ಬಿನ ಎಪ್‌ಆರ್‌ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ …

Read More »

ಜೈಲಿನ ಕೈದಿಗಳಿಗೆ ಅಕ್ಷರ ಪಾಠ

ಹಾವೇರಿ: ಅಪರಾಧ ಮಾಡಿ ಜೈಲು ಸೇರಿರುವ ಅನಕ್ಷರಸ್ಥ ಕೈದಿಗಳಿಗೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯು ಅಕ್ಷರ ಕಲಿಸುತ್ತಿದೆ. ಪ್ರತಿ ದಿನವೂ ನಡೆಯುವ ವಿಶೇಷ ತರಗತಿಗೆ 29 ವಿಚಾರಣಾಧೀನ ಕೈದಿಗಳು ಹಾಜರಾಗುತ್ತಾರೆ. ಅವರಿಗೆ ಕಲಿಕಾ ಸಾಮಗ್ರಿಗಳನ್ನೂ ಉಚಿತವಾಗಿ ನೀಡಲಾಗುತ್ತದೆ. ಶಾಲೆ ಮೆಟ್ಟಿಲು ಹತ್ತದ ಮತ್ತು ಶಿಕ್ಷಣದಿಂದ ವಂಚಿತರಾದ ವಿಚಾರಣಾಧೀನ ಕೈದಿಗಳನ್ನು ಗುರುತಿಸಿರುವ ಇಲಾಖೆ, ಅವರಿಗೆ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿ, ನುರಿತ ಶಿಕ್ಷಕರಿಂದ ಪಾಠ ಮಾಡಿಸುತ್ತಿದೆ. ಕಾರಾಗೃಹದಲ್ಲಿ ಗ್ರಂಥಾಲಯವಿದ್ದು, 3 ಸಾವಿರಕ್ಕೂ ಹೆಚ್ಚು …

Read More »

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಚುನಾವಣೆ: ಇಲ್ಲಿ ಪಕ್ಷ, ಅಲ್ಲಿ ವ್ಯಕ್ತಿ ನಿಷ್ಠ

ಬೆಳಗಾವಿ: ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲೂ ಸಾಂಪ್ರದಾಯಿಕ ಮತಗಳು ಇರುತ್ತವೆ. ನಾವು ಏನೇ ತಿಪ್ಪರಲಾಗ ಹಾಕಿದರೂ ಆ ಮತದಾರರು ನಂಬಿಕೊಂಡ ಪಕ್ಷ ಹಾಗೂ ನಂಬಿಕೊಂಡ ವ್ಯಕ್ತಿಗೇ ಬೆಂಬಲ ನೀಡುತ್ತಾರೆ… ಶಾಸಕ ಲಕ್ಷ್ಮಣ ಸವದಿ ಅವರ ಮಾತು ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕನ್ನಡಿ ಹಿಡಿದಂತಿದೆ. ಈ ಹಿಂದಿನ ಎಲ್ಲ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದರೆ; ಬೆಳಗಾವಿಯಲ್ಲಿ ಪಕ್ಷನಿಷ್ಠೆ- ಚಿಕ್ಕೋಡಿಯಲ್ಲಿ ವ್ಯಕ್ತಿನಿಷ್ಠೆ ಗೆಲುವು ಕಂಡಿದ್ದು ಸ್ಪಷ್ಟವಾಗುತ್ತದೆ. ಬೆಳಗಾವಿಯಲ್ಲಿ ಬಿಜೆಪಿ ಪರ, ಚಿಕ್ಕೋಡಿಯಲ್ಲಿ …

Read More »

ಶಕ್ತಿ’ ಪ್ರಯಾಣಿಕರ ಕಾಯುವ ಫಜೀತಿ!

ಕಲಬುರಗಿ: ಬಸ್‌ ನಿರ್ವಾಹಕರು (ಕಂಡಕ್ಟರ್‌) ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಟಿಕೆಟ್‌ ಕೊಡುವ ಜೊತೆಗೆ ಅವರು ಟೆಕೆಟ್‌ ಪಡೆದ ಸ್ಥಳ ಅಥವಾ ಊರಿನಲ್ಲಿಯೇ ಇಳಿಯುವವರೆಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಶಕ್ತಿ’ ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಚಾರ ಹೆಚ್ಚಾಗಿದೆ. ಈ ಯೋಜನೆಯ ಸದುಪಯೋಗದ ಜೊತೆಗೆ ದುರುಪಯೋಗವೂ ಆಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆಧಾರ್‌ ಕಾರ್ಡ್‌ ಪ್ರದರ್ಶಿಸಿ ಉಚಿತವಾಗಿ …

Read More »