Breaking News

Daily Archives: ಜೂನ್ 12, 2024

ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ‌. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ …

Read More »

ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ …

Read More »

ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಕೆಲ ವರ್ಷಗಳ ಹಿಂದೆ ಹಾರ್ಟ್ ಆಪರೆಷನ್ ಗೆ ಒಳಗಾಗಿದ್ದರು. ಈ ವೇಳೆ ಹಾರ್ಟ್ ಗೆ ಸ್ಟಂತ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ನಿಂದಾಗಿ ಕರುಳಿನ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಶಸ್ತ್ರಚಿಕಿತ್ಸೆಗೆ …

Read More »

ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೀಗಾಗಿ ಇಲ್ಲಿ ತೆರವಾಗುವ ಜಾಗಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತಿಸಿದೆ. ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರೇ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಾಗ, ಸುರೇಶ್‌ ಈ ಹೇಳಿಕೆಯನ್ನು ನೀಡಿದರು. ತಾಲೂಕಿನ ಕೆಂಗಲ್‌ ಬಳಿಯ ತಿಮ್ಮಮ್ಮ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ತಾಲೂಕು …

Read More »

ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್‌ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ.   ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ. ಸಾಲ ಮಾಡಿ ಸಂಬಳ ಕೊಡುವ …

Read More »