Breaking News

Daily Archives: ಜೂನ್ 13, 2024

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ

ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದು ಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ …

Read More »

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ …

Read More »

ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಚೆನ್ನೈ: ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕಾಲಿವುಡ್‌ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಟನ ಸ್ನೇಹಿತ ಕಳೆದ ಎರಡು ದಿನಗಳಿಂದ ಪ್ರದೀಪ್ ವಿಜಯನ್ ಅವರಿಗೆ ಫೋನ್‌ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಕರೆಯನ್ನು ರಿಸೀವ್‌ ಮಾಡದ ಕಾರಣ ಒಬ್ಬ ಸ್ನೇಹಿತ ಮನೆಗೆ ಹೋಗಿ ನೋಡಿದಾಗ ಪ್ರದೀಪ್‌ ಶವವಾಗಿ ಪತ್ತೆಯಾಗಿದ್ದಾರೆ. ಆ ಬಳಿಕ …

Read More »

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

ವಿಜಯಪುರ: ಕಳೆದ ವರ್ಷದ ಭೀಕರ ಬರದಿಂದ ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರಿಗೆ ಈ ಬಾರಿಯ ಮುಂಗಾರು ಭಾರಿ ಆಶಾಭಾವ ಮೂಡಿಸಿದ್ದು, ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅನ್ನದಾತರಿಂದ ಬಿತ್ತನೆ ಕಾರ್ಯವೂ ಭರದಿಂದ ಸಾಗಿದೆ. ಜೂನ್ 1 ರಿಂದ 11 ವರೆಗೆ 35 ಮಿ.ಮೀ. ಸಾಮಾನ್ಯ ಮಳೆ ಆಗಬೇಕಿದ್ದರೂ 180 ಮಿ.ಮೀ. ಮಳೆ ಸುರಿದಿದ್ದು, ಭೂಮಿ ಉತ್ತಮ ಹದಗೊಂಡಿದ್ದು, ಬಿತ್ತನೆ ಕಾರ್ಯ ಚುರುಕು …

Read More »

ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಜೂ 10 ಸೋಮವಾರ …

Read More »

ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

ಮುದ್ದೇಬಿಹಾಳ: ಮತಕ್ಷೇತ್ರದ ಅಭಿವೃದ್ಧಿ ಸೇರಿ ರಾಜ್ಯದ ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಗುತ್ತಿಲ್ಲ. ಎಲ್ಲ ಹಿಂದುಳಿದ ಪ್ರದೇಶಗಳಿಗೆ ಸಮಾನವಾಗಿ, ಸಮತೋಲನ ಮಾಡಿ ಅಭಿವೃದ್ಧಿಗೆ ಮುಂದಾಗದಿದ್ದರೆ ನನಗೆ ರಾಜಕೀಯ ಮಾಡುವ ಇಚ್ಛೆ ಇಲ್ಲ. ರಾಜಕೀಯ ತ್ಯಾಗಕ್ಕೂ ನಾನು ಸಿದ್ದನಾಗಿದ್ದೇನೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಕೆಬಿಜೆಎನ್ನೆಲ್ ಅಧಿಕಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ …

Read More »

ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ನಟ ದರ್ಶನ್‌ ಸ್ನೇಹಿತ ಹಾಗೂ ಅವರೊಂದಿಗೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ, ಪ್ರದೋಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ ಎನ್ನಲಾಗಿದ್ದು, ದರ್ಶನ್ ಜೊತೆಗೆ ಸ್ನೇಹವನ್ನು ಹೊಂದಿದ್ದ ಎನ್ನಲಾಗಿದೆ

Read More »

ಚಾರ್ಮಾಡಿಯಲ್ಲಿ ಬಸ್ಸಿಗೆ ಅಡ್ಡ ಬಂದ ಕಾಡಾನೆ.

ಚಾರ್ಮಾಡಿ: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.   ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ …

Read More »

ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ

ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಇನ್ನಷ್ಟು ಕರಾಳ ಮುಖಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ ಮತ್ತಷ್ಟು ಹಳೆ ಪ್ರಕರಣಗಳು ಹೊರಬರುತ್ತಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಪರಿಹಾರ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟು ಹೆದರಿಸಿ ವಿಕೃತಿ ಮೆರೆದಿದ್ದರು. ಪರಿಣಾಮ ಬೇರೆ ಆಗುತ್ತದೇ ಎಂದು …

Read More »

ಅನೈತಿಕ ಚಟುವಟಿಕೆಗಳಿಗೆ ತಾಣವಾದ ಪಾಳು ಬಿದ್ದ ವಿದ್ಯಾರ್ಥಿ ವಸತಿ ನಿಲಯ!

ಹಿರೇಬಾಗೇವಾಡಿ: ಆರ್ಥಿಕವಾಗಿ, ಸಾಮಾಜಿಕವಾಗಿ, ಹಿಂದುಳಿದವರ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರವೂ ಸಾಕಷ್ಟು ಅನುದಾನವನ್ನು ಒದಗಿಸುತ್ತಿದ್ದು, ಹಲವಾರು ಯೋಜನೆಗಳನ್ನು ರೂಪಿಸಿ ಸಮುದಾಯದ ಪ್ರಗತಿಗೆ ಶ್ರಮಿಸುತ್ತಿದೆ. ಆದರೆ ಕೆಲ ಸಂದರ್ಭಗಳಲ್ಲಿ ಇಂಥಹ ಹಲವಾರು ಯೋಜನೆಗಳು ಕಾರಣಾಂತರಗಳಿಂದ ಇನ್ನೂ ತಳ ಸಮುದಾಯವನ್ನು ತಲುಪುವಲ್ಲಿ ತೀರಾ ವಿಳಂಬವಾಗುತ್ತಿದೆ.   ಸರ್ಕಾರಗಳು ಯಾವುದಾದರೂ ಅಷ್ಠೆ ! ಆಡಳಿತ ಶಾಹಿಯಲ್ಲಿನ ಜಿಡ್ಡುಗಳಾದ ಈ ಚಲತಾಹೈ ಎಂಬ ಧೋರಣೆ ಹಾಗು ಚುನಾಯಿತ ಜನಪ್ರತಿನಿಧಿಗಳ ಆಲಸೈತನಗಳೆ ಇದಕ್ಕೆ ಮುಖ್ಯ ಕಾರಣ ಎಂಬ ಆರೋಪಗಳು ತಳ …

Read More »