ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಜೀಂ ಸಿಂಗ್ ಮತ್ತು ಮನಾಲಿ ಶಾ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ರೀತಿಯ ವಂಚನೆ ಜನವರಿ 17 ರಿಂದ ಫೆಬ್ರವರಿ 8ರ ಅವಧಿಯಲ್ಲಿ ನಡೆಯಿತು. ಆರೋಪಿಗಳು ತಾವು ಜೋಸ್ಕಾ ಎಂಬ ಆನ್ಲೈನ್ ಸಂಸ್ಥೆಯ ಪ್ರಮುಖರು ಮತ್ತು ಸಹಾಯಕ ಪ್ರಾಧ್ಯಾಪಕರು ಮತ್ತು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಷೇರುಗಳನ್ನು …
Read More »Daily Archives: ಜೂನ್ 17, 2024
“ಅವನು ಜೈಲಿನೊಳಗೆ ಇದ್ದಾನೆ, ನೀನು ಹೊರಗೆ ಇದ್ದೀಯ ಅಷ್ಟೇ”; ಮತ್ತೆ ಕಿಚ್ಚನ ವಿರುದ್ಧ ತಿರುಗಿಬಿದ್ದ ಅಹೋರಾತ್ರ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ದೇಶಾದ್ಯಂತ ಈ ಕೊಲೆ ಬಗ್ಗೆನೇ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕಿಚ್ಚ ಸುದೀಪ್ ಮೌನ ಮುರಿದಿದ್ದರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದ್ದರು. ಈ ಹೇಳಿಕೆ ಕೂಡ ಈಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಕಿಚ್ಚ ಸುದೀಪ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಹೋರಾತ್ರ ಕಿಡಿಕಾರುವುದಕ್ಕೆ ಶುರು ಮಾಡಿದ್ದಾರೆ. ವಿಡಿಯೋ ಮಾಡಿ ಈ ಹಿಂದೆ ಸುದೀಪ್ ಅಭಿಮಾನಿಗಳು ಅವರ ಮೇಲೆ ಹಲ್ಲೆ …
Read More »ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು
ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ವೇಳೆ ಮೈಸೂರಿನ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಕೂಡ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. …
Read More »ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು
ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಎತ್ತು ಹಾಗೂ ರೈತ ಬಸವರಾಜ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ ಕೂಡ ಭೇಟಿ ನೀಡಿ …
Read More »ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ
ಡಾರ್ಜಿಲಿಂಗ್,ಜೂ.17- ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿ ಇತರ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಸ್ಸಾಂನ ಸಿಲ್ಚಾರ್ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕಾಂಚನ್ಜುಂಗಾ ಎಕ್ಸ್ ಪ್ರೆಸ್ ರೈಲಿಗೆ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
Read More »ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ …
Read More »ಹೊಲಗಳತ್ತ ಮುಖ ಮಾಡಿದ ಅನ್ನದಾತ: ಬಿತ್ತನೆ ಕಾರ್ಯ ಚುರುಕು
ಮುದ್ದೇಬಿಹಾಳ: ತಾಲ್ಲೂಕಿನ ಮೂರು ಹೋಬಳಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಬಿತ್ತನೆಗೆ ಸಿದ್ಧ ಮಾಡಿಕೊಂಡ ಕೃಷಿಪರಿಕರಗಳೊಂದಿಗೆ ಹೊಲಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಲ್ಲಿ ತೊಗರಿ, ಹೆಸರು, ಸಜ್ಜೆ,ಹ ತ್ತಿ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೃಷಿ ಇಲಾಖೆಯಿಂದ ಈಗಾಗಲೇ ಮುದ್ದೇಬಿಹಾಳ, ಢವಳಗಿ, ನಾಲತವಾಡ ಹೋಬಳಿ ವ್ಯಾಪ್ತಿಯ ರೈತರಿಗೆ ತೊಗರಿ, ಹೆಸರು ಬೀಜಗಳನ್ನು ವಿತರಣೆ ಮಾಡಿದೆ. ಅದರಲ್ಲಿ ಮುಸುಕಿನ ಜೋಳ, ಬಿಜಿಎಸ್-9 ಹೆಸರು, ಟಿಎಸ್ಆರ್3ಆರ್ ತೊಗರಿ …
Read More »ಅಕಾಲಿಕ ಮಳೆ, ಅತಿವೃಷ್ಟಿಯಿಂದ ತೇವಾಂಶ ಹೆಚ್ಚಳ, ಬೆಳೆ ನಿರ್ವಹಣೆಗೆ ಹೇಗೆ?
ಧಾರವಾಡ, ಜೂನ್ 17: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಸಹ ಬಿರುಸುಗೊಂಡಿವೆ. ಧಾರವಾಡದ ಕೃಷಿ ಇಲಾಖೆ ಅಕಾಲಿಕ ಮಳೆ ಮತ್ತು ಅತಿವೃಷ್ಟಿಯಿಂದ ತೇವಾಂಶ ಹೆಚ್ಚಾದ ಅಥವಾ ನೀರು ನಿಂತ ಹೊಲದಲ್ಲಿ ಬೆಳೆಗಳ ನಿರ್ವಹಣೆ ಕುರಿತು ರೈತರಿಗೆ ಸಲಹೆಗಳನ್ನು ನೀಡಿದೆ. ಮೆಕ್ಕೆಜೋಳ, ಸೋಯಾಅವರೆ, ಹೆಸರು, ಶೇಂಗಾ, ಭತ್ತ ಮತ್ತು ಹತ್ತಿ ಬೆಳೆಗಳ ಬಿತ್ತನೆ ಕೈಗೊಂಡ ಹೊಲಗಳಲ್ಲಿ ಮುಂಜಾಗೃತ ಕ್ರಮವಾಗಿ ಇಳಿಜಾರಿಗೆ ಅಡ್ಡವಾಗಿ ಬೇಸಾಯ ಕ್ರಮಗಳನ್ನು …
Read More »ಪೋಕ್ಸೋ ಕೇಸ್ : ‘CID’ ವಿಚಾರಣೆಗೆ ಹಾಜರಾದ B. S. Y.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಿಐಡಿಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ. 17ರಂದು ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು.ಇಂದು .ಎಸ್. ಯಡಿಯೂರಪ್ಪ ಸೋಮವಾರ …
Read More »ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ
ಬೆಂಗಳೂರು, ಜೂನ್ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸುತ್ತದೆ? ಎಂದು ಕಾಯುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡುತ್ತಲೇ ಇದೆ. ಲೋಕಸಭೆ ಚುನಾವಣೆ 2024, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡಿದೆ. ನೀತಿ ಸಂಹಿತೆ ತೆರವಾದ ಬಳಿಕ ಕರ್ನಾಟಕ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯನ್ನು ಸಹ …
Read More »