Breaking News

Daily Archives: ಜೂನ್ 19, 2024

ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. …

Read More »

ದೈಹಿಕ ಶಿಕ್ಷಣ ಶಿಕ್ಷಕರ ಒತ್ತಾಯ ಮುಂಬಡ್ತಿಗೆ

ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ. ಶಿಕ್ಷಣ ಸಚಿವ ಮಧು.ಎಸ್. ಬಂಗಾರಪ್ಪ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೆಂಗಳೂರಿನಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ ಒತ್ತಾಯಿಸಿದರು.   ಬರುವ ಜುಲೈ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರಸ್ತುತ ವರ್ಷದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ …

Read More »

ಭತ್ತ ಸೇರಿ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ಮುಂಗಾರು ಬೆಳೆಯಾಗಿ ಬೆಳೆದ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದ್ದು, ಪ್ರತಿ ಕ್ವಿಂಟಾಲ್‌ಗೆ ಶೇ 5.35ರಂತೆ ₹2,300ಕ್ಕೆ ಬುಧವಾರ ಹೆಚ್ಚಿಸಿದೆ. ಇದರಂತೆ ಇತರ 13 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನೂ ಸರ್ಕಾರ ಹೆಚ್ಚಿಸಿದೆ.   ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ, ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ ₹117ರಷ್ಟು ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿ ವಿಧಾನಸಭಾ ಚುನಾವಣೆಯ …

Read More »

ದರ್ಶನ್‌ ಸ್ವಂತ ಮಗ ಅಂತಿದ್ದ ಸುಮಲತಾ ಅಂಬರೀಶ್‌ ಸೈಲೆಂಟ್‌ ಆಗಿರುವುದೇಕೆ?

ಚಿತ್ರದುರ್ಗ ಮುಳದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್‌ ಆಗಿದ್ದಾನೆ. ಇನ್ನು ಬಗ್ಗೆ ಈಗಾಗಲೇ ನಟಿ ರಮ್ಯ, ರಚಿತಾ ರಾಮ್‌, ಕಿಚ್ಚ ಸುದೀಪ್‌, ಉಪೇಂದ್ರ, ಉಮಾಶ್ರೀ ಸೇರಿದಂತೆ ಚಿತ್ರರಂಗದ ಹಲವು ನಟ, ನಟಿಯರು, ರಾಜಕಾರಣಿಗಳು ಪ್ರತಿಕ್ರಿಯಿಸಿದ್ದಾರೆ. ಆದರೆ ವೇದಿಕೆಗಳೆಲ್ಲ ತನ್ನ ಸ್ವಂತ ಮಗ ದರ್ಶನ್‌ ಎನ್ನುವವರೇ ಈ ವಿವಾರದಲ್ಲಿ ಇನ್ನೂ ಸೈಲೆಂಟ್‌ ಆಗಿರುವುದು …

Read More »

NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ: ಜೂನ್​ 18ರಂದು (ಮಂಗಳವಾರ) ನಡೆದಿದ್ದ ಯುಜಿಸಿ ನೆಟ್​ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್​ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.   ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ …

Read More »

ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ …

Read More »

6 ವರ್ಷದ ಬಾಲಕನೊಂದಿಗೆ ಇಬ್ಬರು ಮಕ್ಕಳ ತಾಯಿ ಪರಾರಿ!

ವಿಜಯಪುರ: 16 ವರ್ಷದ ಯುವಕನೊಬ್ಬನನ್ನು ಪುಸಲಾಯಿಸಿ ಕರೆದುಕೊಂಡು, 28 ವರ್ಷದ ಗೃಹಿಣಿಯೊಬ್ಬಳು ಪರಾರಿಯಾಗಿರುವ (Woman Eloped with boy) ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ವಿವಾಹಿತೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಒಂದು ಮಗುವನ್ನು ಎತ್ತಿಕೊಂಡು (Viral News) ಇನ್ನೊಂದನ್ನು ಬಿಟ್ಟು ಆಕೆ ಪರಾರಿಯಾಗಿದ್ದಾಳೆ! ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಹಿರೇಮಠ (16) ಹಾಗೂ ಮಲ್ಲಮ್ಮ (28) ಓಡಿಹೋದವರು. ಇವರಿಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, …

Read More »

ಕೆಎಲ್‌ಇ ಆಸ್ಪತ್ರೆಯಲ್ಲಿ ಮಗುವಿಗೆ ಮರುಜನ್ಮ

ಬೆಳಗಾವಿ: ಜನ್ಮತಃವಾಗಿ ‘ಕರೋನರಿ ಕ್ಯಾಮೆರಾಲ ಫಿಸ್ತುಲಾ’ ಎಂಬ ಹೃದ್ರೋಗದಿಂದ ಬಳಲುತ್ತಿದ್ದ 20 ತಿಂಗಳ ಮಗುವಿಗೆ ಮರುಜನ್ಮ ನೀಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದ ಹೃದ್ರೋಗ ತಜ್ಞರು ಯಶಸ್ವಿಯಾಗಿದ್ದಾರೆ. ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಮೂಲದ 20 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಸುಮಾರು 2,000 ಮಕ್ಕಳಲ್ಲಿ ಒಬ್ಬರಿಗೆ ಇಂಥ ಕಾಯಿಲೆ ಕಂಡುಬರುತ್ತದೆ. ಮಗುವಿಗೆ ಮೇಲಿಂದ ಮೇಲೆ ಶೀತ, ಕೆಮ್ಮು, ಉಸಿರಾಟದ ತೊಂದರೆ, ಆಯಾಸ ಮತ್ತು …

Read More »

77 ಮಕ್ಕಳಿದ್ದರೂ ಪ್ರೌಢಶಾಲೆ ಇಲ್ಲ

ರಾಯಬಾಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ 77 ವಿದ್ಯಾರ್ಥಿಗಳಿದ್ದರೂ ಪ್ರೌಢಶಾಲೆ ಇಲ್ಲ. ಪ್ರೌಢಶಿಕ್ಷಣಕ್ಕಾಗಿ ಮಕ್ಕಳು ಪಕ್ಕದ ನಿಪನಾಳ ಗ್ರಾಮಕ್ಕೆ ಅಲೆಯಬೇಕಾದ ಪರಿಸ್ಥಿತಿ ಇದೆ. ಇದು ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.   ಗ್ರಾಮಕ್ಕೆ ಒಂದು ‍ಪ್ರೌಢಶಾಲೆ ಮಂಜೂರು ಮಾಡುವಂತೆ ಗ್ರಾಮಸ್ಥರು ಶಾಸಕರಿಗೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಯಾರೊಬ್ಬರೂ ಕಿವಿಗೊಟ್ಟಿಲ್ಲ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಮಕ್ಕಳ ಸಂಕಷ್ಟ ದೂರು ಮಾಡುವ …

Read More »

ಬೆಳಗಾವಿ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್‌ಗಳು

ಬೆಳಗಾವಿ: ಇಲ್ಲಿನ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್‌ಗಳು ದೂಳು ತಿನ್ನುತ್ತಿವೆ. ಕೆಲವು ವಾಹನಗಳ ಕಿಟಕಿ, ಬಾಗಿಲು ಮುರಿದಿದ್ದರೆ, ಹಲವು ವಾಹನಗಳು ತುಕ್ಕು ಹಿಡಿಯುತ್ತಿವೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ ಜನರಿಗೆ ಈ ಆಂಬುಲೆನ್ಸ್‌ಗಳು ಉತ್ತಮ ಸೇವೆ ಒದಗಿಸಿದ್ದವು. ತ್ವರಿತವಾಗಿ ರೋಗಿಗಳು ಆಸ್ಪತ್ರೆ ಸೇರಲು ನೆರವಾಗಿದ್ದವು. ಇದರೊಂದಿಗೆ ಬೇರೆ ಐದು ವಾಹನಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಲಾಗುತ್ತಿತ್ತು. ಆದರೆ, …

Read More »