Breaking News

Daily Archives: ಜೂನ್ 19, 2024

ಬೆಳಗಾವಿ | ಉದ್ಯೋಗ ಮೇಳ 22ರಂದು

ಬೆಳಗಾವಿ: ‘ಇಲ್ಲಿನ ಭಾವುರಾವ್‌ ಕಾಕತಕರ ಕಾಲೇಜಿನಲ್ಲಿ ರೋಟರಿ ಕ್ಲಬ್‌ ಬೆಲಗಮ್‌-ವೇಣುಗ್ರಾಮ ಹಾಗೂ ಬೆಂಗಳೂರಿನ ಸ್ಪೆಕ್ಟ್ರಂ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್‌ ಲಿಮಿಟೆಡ್ ಸಹಯೋಗದಲ್ಲಿ ಜೂನ್‌ 22ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಎರಡನೇ ಆವೃತ್ತಿಯ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಕ್ಲಬ್ ಅಧ್ಯಕ್ಷ ಸಂಜೀವ್‌ ದೇಶಪಾಂಡೆ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಭಾಗದ ಉದ್ಯೋಗಕಾಂಕ್ಷಿಗಳಿಗೆ ನೆರವಾಗುವ ದೃಷ್ಟಿಯಿಂದ ಆಯೋಜಿಸಿದ ಮೇಳದಲ್ಲಿ 50ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. …

Read More »

ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್

ಬೆಂಗಳೂರು: ಆನ್‌ ಲೈನ್‌ ವಸ್ತುಗಳು ಡೆಲಿವರಿ ಮಾಡಿದ ನಂತರ ತಾವು ಆರ್ಡರ್‌ ಮಾಡಿದ ವಸ್ತುವಿನ ಬದಲು ಬೇರೇನೊ ಬಂದಿರುವುದು ಸಾಮಾನ್ಯವಾಗಿದ್ದು, ಈಗಾಗಲೇ ಇಂತಹ ಹಲವು ಘಟನೆ ನಡೆದಿತ್ತು. ಆದರೆ ಈ ಬಾರಿ ಅಮೆಜಾನ್‌ ಕಳುಹಿಸಿದ್ದ ವಸ್ತು ಕಂಡು ಬೆಂಗಳೂರಿನ ಮಹಿಳೆಯೊಬ್ಬರು ಕಂಗಾಲಾಗಿ ಹೋದ ಘಟನೆ ನಡೆದಿದೆ.   ಉದ್ಯಾನನಗರಿಯ ಸರ್ಜಾಪುರ್‌ ರಸ್ತೆ ನಿವಾಸಿಯಾಗಿರುವ ಮಹಿಳೆ ಅಮೆಜಾನ್‌ ನಲ್ಲಿ Xbox ಕಂಟ್ರೋಲರ್‌ ಅನ್ನು ಆರ್ಡರ್‌ ಮಾಡಿದ್ದರು. ಕೆಲವು ದಿನಗಳ ನಂತರ ಅಮೆಜಾನ್‌ ನಿಂದ …

Read More »

ದರ್ಶನ್‌ಗೆ ಜಾಮೀನು ಸಿಗೋ ಹಿಂದಿನ ದಿನ ಎಲ್ಲಾ ಊರು ಬಿಟ್ಬಿಡಿ; ವಾರ್ನಿಂಗ್ ಕೊಟ್ಟ ಅಭಿಮಾನಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಶಾಕ್ ಮೇಲೆ ಶಾಕ್ ಕೊಡುತ್ತಿದ್ದಾರೆ. ಪ್ರಕರಣದಲ್ಲಿ ಯಾರೊಬ್ಬರು ತಪ್ಪಿಸಿಕೊಳ್ಳದಂತೆ ಎಲ್ಲಾ ಸಾಕ್ಷಿಗಳನ್ನು ಕಲೆಹಾಕುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಮಾತ್ರ ತಮ್ಮ ಬಾಸ್ ತಪ್ಪೇ ಮಾಡಿಲ್ಲ, ಇದೆಲ್ಲಾ ಕುತಂತ್ರ ಎಂದು ನೆಚ್ಚಿನ ನಟನ ಬೆಂಬಲಕ್ಕೆ ನಿಂತಿದ್ದಾರೆ. ನಿರ್ಮಾಪಕ ಉಮಾಪತಿ ಗೌಡ ದರ್ಶನ್‌ರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದವರು. ಬಳಿಕ ಇಬ್ಬರ ಜೊತೆ ಮನಸ್ತಾಪವಾಗಿ ದೂರವಾಗಿದ್ದರು. ದರ್ಶನ್ ಉಮಾಪತಿಗೆ ಬಹಿರಂಗವಾಗಿಯೇ ವಾರ್ನಿಂಗ್ ಮಾಡಿದ್ದರು. ತಗಡು …

Read More »

ದರ್ಶನ್​ ಅಭಿಮಾನಿಗಳಿಂದ ಜೀವ ಬೆದರಿಕೆ: ಪ್ರಥಮ್​

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ​ ಬಿಗ್​ಬಾಸ್​ ವಿಜೇತ ಹಾಗೂ ನಟ ಪ್ರಥಮ್​ ಜ್ಞಾನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ನೀಡಿರುವ ಬಗ್ಗೆ ಪ್ರಥಮ್ ಅವರು​ ತಮ್ಮ ಎಕ್ಸ್​ ಖಾತೆಯ ಮೂಲಕ ಖಚಿತಪಡಿಸಿದ್ದಾರೆ. ಅಲ್ಲದೆ, ದರ್ಶನ್​ ಅಭಿಮಾನಿಗಳಿಗೆ ಬುದ್ಧಿಮಾತು ಸಹ ಹೇಳಿದ್ದಾರೆ. ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ ‘ಕರ್ನಾಟಕದ …

Read More »

ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಪೊಲೀಸರು ಸತತ ವಿಚಾರಣೆ ಮಾಡುತ್ತಲೇ ಇದ್ದಾರೆ. ಸ್ಥಳ ಮಹಜರು, ಸಾಕ್ಷ್ಯಗಳ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.     ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೆ …

Read More »

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

ಹೊಸದಿಲ್ಲಿ: ನೀಟ್‌-ಯುಜಿ ಅಕ್ರಮದ ವಿಚಾರಣೆ ವೇಳೆ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. “ನೀಟ್‌-ಯುಜಿ 2024 ಪರೀಕ್ಷೆ ಸಂದರ್ಭ ಸಾಸಿವೆ ಕಾಳಿನಷ್ಟು ಲೋಪ ಆಗಿದ್ದರೂ ಆ ಕುರಿತು ಸಮಗ್ರ ತನಿಖೆ ನಡೆಸಬೇಕು. ಪರೀಕ್ಷೆಗಾಗಿ ವಿದ್ಯಾರ್ಥಿಗಳು ಭಾರೀ ಪರಿಶ್ರಮ ನಡೆಸಿರುತ್ತಾರೆ ಎಂಬುದನ್ನು ನಾವು ಮರೆಯುವ ಹಾಗಿಲ್ಲ. ಒಂದು ವೇಳೆ ನಿಮ್ಮಿಂದ ತಪ್ಪಾಗಿದ್ದರೆ ಒಪ್ಪಿಕೊಳ್ಳಿ’ ಎಂದು ಎನ್‌ಟಿಎಗೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕಕ್ಕೆ ತಕರಾರು, …

Read More »

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ಇಳಿಕೆಯಾದರೆ ಅನುಭೋಗ ಪ್ರಮಾಣದಲ್ಲಿ ಏರಿಕೆಯಾಗಲಿದ್ದು, ಮಧ್ಯಮ ವರ್ಗಕ್ಕೆ ವರದಾನವಾಗುತ್ತದೆ. ಇದು ಸಬ್ಸಿಡಿ, ಕಲ್ಯಾಣ ಯೋಜನೆಗಳಿಗಿಂತ ಮಿಗಿಲಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿರುವುದರಿಂದ ಎಂದಿನಂತೆ ಈ ಬಾರಿ ಬಜೆಟ್ ಇರುವುದಿಲ್ಲ. ಮಿತ್ರ ಪಕ್ಷಗಳ ಸಲಹೆಯನ್ನು ಕೂಡ ಪರಿಗಣಿಸಬೇಕಿದೆ. ಈ ಬಾರಿ ವೈಯಕ್ತಿಕ ಆದಾಯ ತೆರಿಗೆ ಮಿತಿ ಹೆಚ್ಚಿಸಲಾಗುವುದು …

Read More »

ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

ನವದೆಹಲಿ: ದೇಶದಾದ್ಯಂತ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ದೇಶದ ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ತೀವ್ರ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ. ಮುಂಗಾರು ಮಳೆ ಕುರಿತು ಮುನ್ಸೂಚನೆ ನೀಡಿರುವ ಐಎಂಡಿ, ‘ಜೂನ್‌ ತಿಂಗಳಲ್ಲಿ ಸುರಿಯುವ ಒಟ್ಟಾರೆ ಮಳೆ ಪ್ರಮಾಣವು, ದೇಶದ ದೀರ್ಘಕಾಲದ ಸರಾಸರಿ (ಎಲ್‌ಪಿಎ) 92 ಸೆಂಟಿ ಮೀಟರ್‌ಗಿಂತಲೂ ಕಡಿಮೆ ಇರಲಿದೆ’ ಎಂದು ಅಂದಾಜಿಸಿದೆ.   ಮೇ 30ರಂದು ಕೇರಳದಲ್ಲಿ ನೈಋತ್ಯ …

Read More »

ದರ್ಶನ್, ಪವಿತ್ರಾಗೌಡ ರಕ್ಷಣೆಗೆ ಮುಂದಾಯ್ತಾ ಸರ್ಕಾರ.? SPP ಬದಲಾವಣೆಗೆ ಸಿಎಂ ಮೇಲೆ ಮೂವರು ಪ್ರಭಾವಿ ಸಚಿವರ ಒತ್ತಡ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಅವರನ್ನು ಗ್ಯಾಂಗ್ ನಿಂದ ಎಸ್.ಪಿ.ಪಿ. ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಎಸ್.ಪಿ.ಪಿ. ಪ್ರಸನ್ನಕುಮಾರ್ ಅವರನ್ನು ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ದರ್ಶನ್ ರಕ್ಷಣೆಗೆ ಸರ್ಕಾರ ಮುಂದಾಗಿದೆ ಆದರೆ, ಎಸ್.ಪಿ.ಪಿ. ಬದಲಾಯಿಸಿದರೆ ಮತ್ತಷ್ಟು ಅನುಮಾನ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಇನ್ನೂ ಸರ್ಕಾರ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ರಕ್ಷಣೆಗೆ ಮೂವರು ಪ್ರಭಾವಿ …

Read More »