ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …
Read More »Daily Archives: ಜೂನ್ 21, 2024
ಕಾಗವಾಡ: ಮದ್ಯಪಾನ ಮಾಡುತ್ತ ವಾಹನ ಚಲಾಯಿಸಿದ ಆರ್ಟಿಓ ಚಾಲಕ
ಕಾಗವಾಡ: ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತೀಚಿಗೆ ಅಥಣಿ ಆರ್ಟಿಒ ಇಲಾಖೆಯ ಅಧಿಕಾರಿಗಳ ವಾಹನದ ಚಾಲಕ ಸಾರಿಗೆ ಇಲಾಖೆ ಇನ್ಸ್ಪೆಕ್ಟರ್ ಅವರ ಉಪಸ್ಥಿತಿಯಲ್ಲಿ ಮದ್ಯಸೇವನೆ ಮಾಡುತ್ತ ವಾಹನ ಚಾಲನೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್ಟಿಓ ಇನ್ಸ್ಪೆಕ್ಟರ್ ಅವರ ಮುಂದೆಯೇ ಇಂತಹ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರಿದ ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ನಿಯಮ ಪಾಲನೆ ಮಾಡುವ ಇಲಾಖೆಯ ಅಧಿಕಾರಿಗಳೇ ಈ ರೀತಿ ನಿಯಮ ಉಲ್ಲಂಘನೆ ಮಾಡಿರುವುದು ಎಷ್ಟು ಸರಿ? ಎಂದು ಜನರು …
Read More »ಕೊಲೆಗೆ ಸಂಚು; ಆರು ಮಂದಿ ಬಂಧನ
ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆಗೆ ಸಂಚು ರೂಪಿಸಿದ್ದ ತಂಡವೊಂದನ್ನು ಹಳೇಹುಬ್ಬಳ್ಳಿ ಪೊಲೀಸರು ಬಂಧಿಸಿ, ಎರಡು ತಲ್ವಾರ್, ಎರಡು ಚಾಕು, ಎರಡು ಬೈಕ್ ಹಾಗೂ ಆಟೊ ವಶಪಡಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಹಳೇಹುಬ್ಬಳ್ಳಿ ನಿವಾಸಿಗಳಾದ ಮಂಜುನಾಥ ಪಾಂಚಾನ, ಪವನ ಗಬ್ಬೂರ, ವಿನಾಯಕ ದುಂಡಿ, ನಾಗರಾಜ ಮೀರಜಕರ, ರಾಜಪ್ಪ ಹನಮನಹಳ್ಳಿ ಬಂಧಿತರು. ಮತ್ತೊಬ್ಬ ಆರೋಪಿ ಗಣೇಶ ಬಿಲಾನಾ ತಲೆಮರೆಸಿಕೊಂಡಿದ್ದಾನೆ. ಹಳೇಹುಬ್ಬಳ್ಳಿಯ ಸಿಕ್ಕಲಗಾರ ಓಣಿಯ ನಿವಾಸಿ ದೀಪಕ ಧಾರವಾಡ ಅವರನ್ನು …
Read More »ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್ಗೆ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು. ‘ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ …
Read More »ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್ ರೇವಣ್ಣನ ಮೇಲೆ ಅತ್ಯಾಚಾರ ಆರೋಪ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ. ಸೂರಜ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್ …
Read More »ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು
ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಶುಕ್ರವಾರ ಆರೋಪಿಸಿದ್ದಾರೆ. ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಹೇಳಿದ್ದಾರೆ. ಇಂದು ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ …
Read More »ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು
ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನಂತೆ. ಇದೀಗ ಆ ಯುವಕನ ವಿರುದ್ಧ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ದೂರು (Police Complaint) ನೀಡಿದ್ದಾರೆ. ಸೂರಜ್ ರೇವಣ್ಣಗೆ ಯುವಕನಿಂದ ಬ್ಲಾಕ್ ಮೇಲ್ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣ: 40 ಲಕ್ಷ ರೂಪಾಯಿ ಕೈ ಸಾಲ ಕೊಟ್ಟ ಮೋಹನ್ರಾಜ್ ನಾಪತ್ತೆ!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿ ಹಾಕಲು ದರ್ಶನ್ ಏನೆಲ್ಲಾ ಮಾಡಲು ಯತ್ನಿಸಿದ್ದರು ಎಂಬ ಸ್ಪೋಟಕ ವಿಚಾರ ಬಯಲಾಗಿದೆ. ಮೊನ್ನೆಯಷ್ಟೇ ಆರ್ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಮತ್ತೆ 37 ಲಕ್ಷದ 40 ಸಾವಿರ ಹಣವನ್ನು, ಪತ್ನಿ ವಿಜಯಲಕ್ಷ್ಮಿ ಬಳಿಯಿಂದ 3 ಲಕ್ಷ ರೂ.ಹಣವನ್ನು ಸೀಜ್ ಮಾಡಲಾಗಿದೆ. ದರ್ಶನ್ ಮನೆಯ ಬೆಡ್ ರೂಮ್ ನಲ್ಲಿ ಕಬೋಡ್ ನಲ್ಲಿ 37 ಲಕ್ಷ ಹಣ ಸೀಜ್ ಆಗಿದೆ ಎಂದು ವರದಿ ಆಗಿದೆ. ಬ್ಯಾಗ್ ಒಳಗೆ …
Read More »ಜಿಎಸ್ಟಿ ಮಂಡಳಿ ಸದಸ್ಯರಾಗಿ ಕೃಷ್ಣ ಬೈರೇಗೌಡ ನೇಮಕ
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿರುವ ಏಳು ಸಚಿವರನ್ನು ಒಳಗೊಂಡ ಸಮಿತಿಯನ್ನು ಪುನರ್ ರಚಿಸಲಾಗಿದೆ. ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಈ ಸಮಿತಿಯ ಸಂಚಾಲಕರಾಗಿ ನೇಮಕವಾಗಿದ್ದಾರೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಮಂಡಳಿಯ ವೆಬ್ಸೈಟ್ನಲ್ಲಿ ಈ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿದೆ. ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ, ಗೋವಾದ ಸಾರಿಗೆ ಸಚಿವ ಮೌವಿನ್ …
Read More »ಚಿನ್ನದ ಬೆಲೆ ₹800, ಬೆಳ್ಳಿ ₹1,400 ಏರಿಕೆ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರವು ₹800 ಏರಿಕೆಯಾಗಿ, ₹73,350ಕ್ಕೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1,400 ಹೆಚ್ಚಳವಾಗಿ, ₹93,700ಕ್ಕೆ ಮುಟ್ಟಿದೆ. ‘ಅಮೆರಿಕದಲ್ಲಿ ಚಿಲ್ಲರೆ ಹಣದುಬ್ಬರವು ಅಂದಾಜಿಗೂ ಮೀರಿ ಇಳಿಕೆಯಾಗಿದೆ. ಹಾಗಾಗಿ, ಪ್ರಸಕ್ತ ವರ್ಷದಲ್ಲಿ ಅಮೆರಿಕದ ಫೆಡರಲ್ ರಿಸರ್ವ್ ಎರಡು ಬಾರಿ ಬಡ್ಡಿದರ ಕಡಿತಗೊಳಿಸಲಿದೆ ಎಂಬ ನಿರೀಕ್ಷೆ ಹೆಚ್ಚಿದೆ. ಇದು ಹಳದಿ ಲೋಹದ ಬೆಲೆ ಏರಿಕೆಗೆ ಕಾರಣವಾಗಿದೆ’ …
Read More »