ಬೆಂಗಳೂರು, ಜೂನ್ 30: ಅಬಕಾರಿ ಇಲಾಖೆ (Excise Department) ಬೆಂಗಳೂರು ವ್ಯಾಪ್ತಿಯ ಎಂಟು ಜನ ಉಪ ಆಯಕ್ತರ ಪೈಕಿ ನಾಲ್ವರನ್ನು ತಮ್ಮದೇ ಜಾತಿಯ ಅಧಿಕಾರಿಗಳನ್ನು ನೇಮಿಸಿದ್ದನ್ನು ರಾಜ್ಯ ಬಿಜೆಪಿ (BJP) ವಿರೋಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಗಂಭೀರ ಆರೋಪ ಮಾಡಿದೆ. ಅಬಕಾರಿ ಇಲಾಖೆಯಲ್ಲಿ ಜಾತಿ ತಾರತಮ್ಯ ಮಾಡಲಾಗಿದೆ. ಒಂದೇ ಸಮುದಾಯದ ನಾಲ್ವರಿಗೆ ಸ್ಥಾನಮಾನ ನೀಡಲಾಗಿದೆ. ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ಕೆಲ ಸಚಿವರ ಆಪ್ತರಿಗೆ ಮಣೆ ಹಾಕಲಾಗಿದೆ. ಈ ಹಿಂದೆಯೂ …
Read More »Daily Archives: ಜೂನ್ 30, 2024
ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್ ಮಂಜುಳಾ ನಾಯಿಕ
ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು. ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ …
Read More »ತಿರಸ್ಕಾರದಿಂದ ಪುರಸ್ಕಾರ
ಚಪ್ಪಾಳೆ ತಟ್ಟಿ ಭಿಕ್ಷೆ ಬೇಡುತ್ತಿದ್ದ ಕೈಗಳು ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿವೆ. ಕೀಳಾಗಿ ಕಾಣಲಾಗುತ್ತಿದ್ದ ದೇಹಗಳಿಗೆ ಹೊಸ ಮೈಮಾಟ ಬಂದಿದೆ. ಗೇಲಿಗೆ ಗುರಿಯಾಗಿದ್ದ ನಡಿಗೆ ‘ಕ್ಯಾಟ್ವಾಕ್’ ಆಗಿದೆ. ಮೂದಲಿಕೆಗೆ ಕಾರಣವಾಗಿದ್ದ ಮುಖದ ಮೇಲೆ ಮಾದಕ ಕಳೆ ಬಂದಿದೆ. ವಿರೂಪಿ ಎಂದು ಕರೆಸಿಕೊಳ್ಳುತ್ತಿದ್ದವರು ಈಗ ರೂಪದರ್ಶಿಗಳು… ಹೌದು. ಲಿಂಗತ್ವ ಅಲ್ಪಸಂಖ್ಯಾತರ ಬಾಳಲ್ಲಿ ಪರಿವರ್ತನೆಯ ಸಮಯ ಬಂದಿದೆ. ಅವಮಾನಕ್ಕೆ ಒಳಗಾದವರು ಮುಖ್ಯವಾಹಿನಿಯಲ್ಲಿ ಸಾಗುವ ಯತ್ನ ನಡೆಸಿದ್ದಾರೆ. ಕೀಳಾಗಿ ಕಾಣುತ್ತಿದ್ದ ಕಣ್ಣುಗಳು ಹುಬ್ಬೇರಿಸಿ ದಿಟ್ಟಿಸುವಂತೆ ಅವರು ಬದಲಾಗುತ್ತಿದ್ದಾರೆ. …
Read More »