ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸಹಿತ ಪ್ರಮುಖರು ಜತೆಗಿದ್ದರು. ಬಳಿಕ ಕ್ಷೇತ್ರದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ತಂಗಿದ ಯಡಿಯೂ ರಪ್ಪ ಅವರು ಸೋಮವಾರ ಬೆಳಗ್ಗೆ 6.30ಕ್ಕೆ …
Read More »Monthly Archives: ಜೂನ್ 2024
ಕೈ, ಬಿಜೆಪಿ ಟಿಕೆಟ್ ಈ ವಾರವೇ ಅಂತಿಮ?
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಬೇಕಿರುವ ಉಪ ಚುನಾ ವಣೆಗಳಿಗೆ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ತಾಲೀಮು ಆರಂಭಿಸಿವೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಗಾಗಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮಿತ್ರಪಕ್ಷಗಳಾದ ಬಿಜೆಪಿ-ಜೆಡಿಎಸ್ ಇನ್ನಷ್ಟೇ ತಾಲೀಮು ಆರಂಭಿಸಬೇಕಿದೆ. 2 ದಿನಗಳಲ್ಲಿ ಹೊಸದಿಲ್ಲಿಗೆ ತೆರಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದರೆ, ರಾಜ್ಯ …
Read More »CID; ಒಂದೇ ತಂಡದಿಂದ ಅಣ್ಣ-ತಮ್ಮನ ವಿಚಾರಣೆ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲಿದ್ದಾರೆ. ಅಂದರೆ ಅಣ್ಣ-ತಮ್ಮನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಒಂದೇ ತಂಡ ತನಿಖೆ ನಡೆಸಲಿದೆ. ಈಗಾಗಲೇ ಪ್ರಜ್ವಲ್ ವಿರುದ್ಧ ಬಿ.ಕೆ. ಸಿಂಗ್ ಮುಖ್ಯಸ್ಥರಾಗಿದ್ದು, ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ. …
Read More »ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ
ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ ತಡೆಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ಮೊದಲು ಸಹಿ ಹಾಕಿ ಅನುಮತಿ ಪ್ರಸ್ತಾವನೆಗೆ ಹಿನ್ನಡೆಯಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಕೆಐಒಸಿಎಲ್ ಕಂಪನಿಯವರು ಹಿಂದೆ ಗಣಿಗಾರಿಕೆ ನಡೆಸುವಾಗ ಅನೇಕ ಷರತ್ತು …
Read More »ಬಗೆದಷ್ಟು ಹೊರಬರುತ್ತಿದ್ದೆ ನೀಟ್ ಪರೀಕ್ಷೆಯ ಕರ್ಮಕಾಂಡ
ನವದೆಹಲಿ, ಜೂನ್. 24: ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ನೀಟ್-ಯುಜಿ (NEET-UG exam) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ವಹಿಸಿಕೊಂಡಿದೆ. ತನಿಖೆಗಾಗಿ ತನ್ನ ತಂಡಗಳನ್ನು ಹಲವು ರಾಜ್ಯಗಳಿಗೆ ಕಳುಹಿಸಿದೆ. ಇತ್ತ, ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ಬಿಹಾರ ಪೊಲೀಸ್ನ ಆರ್ಥಿಕ ಅಪರಾಧಗಳ ಘಟಕವು ಐವರನ್ನು ಬಂಧಿಸಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ರದ್ದತಿ ಮತ್ತು ಮುಂದೂಡಿಕೆಗೆ ಸಂಬಂಧಿಸಿದಂತೆ ಫ್ಲಾಕ್ ಸ್ವೀಕರಿಸುತ್ತಿರುವ ರಾಷ್ಟ್ರೀಯ ಪರೀಕ್ಷಾ …
Read More »ಫಿಟ್ನೆಸ್ ಮೇಂಟೇನೂ ಇಲ್ಲ, ಚಿಕನ್, ಮಟನ್ನೂ ಇಲ್ಲ! ಒಗ್ಗದ ಜೈಲೂಟ ತಿನ್ನಲು ದರ್ಶನ್ ಪರದಾಟ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ನಟ ದರ್ಶನ್ (Actor Darshan and Gang) ಮತ್ತು ಸಹಚರರು ಜೈಲು ಪಾಲಾಗಿದ್ದಾರೆ. ಆದರೆ ನಟ ದರ್ಶನ್ ಜೈಲೂಟ ತಿನ್ನಲು ಒಗ್ಗದೆ ಪರದಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಿಂದ ಹೊರಗಿದ್ದಾಗ ಐಷಾರಾಮಿ ಜೀವನದ ಜೊತೆಗೆ ಬಿಂದಾಸ್ ಆಗಿ ಇರುತ್ತಿದ್ದ ದರ್ಶನ್, ಫಿಟ್ನೆಸ್ ಮೇಂಟೈನ್ ಮಾಡಲು ಚಿಕನ್, ಮಟನ್, ಪ್ರೂಟ್ಸ್ ಜೊತೆಗೆ ಜ್ಯೂಸ್ ಸೇವಿಸುತ್ತಿದ್ದರು. ಆದರೆ ಈಗ ಜೈಲಿನಲ್ಲಿ ಸರಿಯಾಗಿ …
Read More »ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ ಹೊಡೆದು ಮಂಜುನಾಥ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ವಿಚಾರಕ್ಕೆ ಮಂಜುನಾಥನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Read More »ನವದೆಹಲಿ: ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಇಂದು ವಿಶೇಷ ಸಂಸತ್ ಅಧಿವೇಶನದ ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲ ಸೇರಿದಂತೆ ಹೊಸದಾಗಿ ಚುನಾಯಿತರಾದ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉಳಿದ 264 ಸಂಸದರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಆಯ್ಕೆ ಮತ್ತು ಜೂನ್ 27 ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ನೂತನ ಸ್ಪೀಕರ್ ಆಯ್ಕೆಯ ತನಕ ಸದನದ ಕಲಾಪಗಳನ್ನು ಕೈಗೊಳ್ಳಲು ಮಹತಾಬ್ಗೆ ಸಹಾಯ ಮಾಡಲು ಮೂವರು ವಿರೋಧ ಪಕ್ಷದ ಸಂಸದರು ಅಧ್ಯಕ್ಷರ ಸಮಿತಿಯಿಂದ ಹಿಂದೆ ಸರಿಯಲು ಪರಿಗಣಿಸಿರುವುದರಿಂದ ಹಂಗಾಮಿ ಸ್ಪೀಕರ್ ನೇಮಕ ಕುರಿತ ಗದ್ದಲ ಇಂದು ಸದನದಲ್ಲಿ ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಕಳೆದ ವಾರದ ಆರಂಭದಲ್ಲಿ ರಾಷ್ಟ್ರಪತಿಗಳು ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು. ಮಹತಾಬ್ ಅವರಿಗೆ ಸಹಾಯ ಮಾಡಲು ಕಾಂಗ್ರೆಸ್ನ ಕೋಡಿಕುನ್ನಿಲ್ ಸುರೇಶ್, ಡಿಎಂಕೆ ಸಂಸದ ಟಿ ಆರ್ ಬಾಲು, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಮತ್ತು ಬಿಜೆಪಿ ನಾಯಕರಾದ ರಾಧಾ ಮೋಹನ್ ಸಿಂಗ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸೇರಿದಂತೆ ಹಿರಿಯ ಸಂಸದರ ಸಮಿತಿಯನ್ನು ನಾಮನಿರ್ದೇಶನ ಮಾಡಿದರು. ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿಯೊಂದಿಗೆ ಮಾತನಾಡಿದ ಕೆ.ಸುರೇಶ್, ಸಮಿತಿಯನ್ನು ಬಹಿಷ್ಕರಿಸುವ ಕುರಿತು ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮಹತಾಬ್ ನೇಮಕದ ಬಗ್ಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಎಂಟನೇ ಅವಧಿಯ ಸಂಸದ ಕೆ.ಸುರೇಶ್ ಅವರ ಸ್ಥಾನದ ಹಕ್ಕನ್ನು ಸರ್ಕಾರ ಬೈಪಾಸ್ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಮಧ್ಯೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಮಹತಾಬ್ ಅವರು ಲೋಕಸಭೆ ಸದಸ್ಯರಾಗಿ ಏಳು ಬಾರಿ ಆಯ್ಕೆಯಾಗಿದ್ದು, ಹಂಗಾಮಿ ಲೋಕಸಭಾ ಹುದ್ದೆಗೆ ಅರ್ಹರಾಗಿದ್ದಾರೆ. ಕಾಂಗ್ರೆಸ್ ನವರು ಜನರ ದಾರಿತಪ್ಪಿಸುತ್ತಿದ್ದಾರೆ ಎಂದರು. ಸಭಾಧ್ಯಕ್ಷ ಮತ್ತು ಉಪಸಭಾಪತಿ ಹುದ್ದೆಗಳ ಆಯ್ಕೆ ವಿಚಾರದಲ್ಲಿ ಪ್ರತಿಪಕ್ಷಗಳು ಮತ್ತು ಸರಕಾರಗಳು ಜಟಾಪಟಿ ನಡೆಸುವ ಸಾಧ್ಯತೆ ಇದೆ. ಸರ್ಕಾರ ತನ್ನ ಸ್ಪೀಕರ್ ಅಭ್ಯರ್ಥಿಯ ಬಗ್ಗೆ ಗೌಪ್ಯವಾಗಿ ಉಳಿದಿದೆ, ಆದರೆ ಪ್ರತಿಪಕ್ಷಗಳು ಉಪಸಭಾಪತಿ ಹುದ್ದೆಗೆ ತನ್ನ ಹಕ್ಕನ್ನು ಪ್ರತಿಪಾದಿಸಲು ಮುಂದಾಗಿವೆ. ಜೂನ್ 28 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯು ಸದನದಲ್ಲಿ ಭಾರೀ ಗದ್ದಲ-ಕೋಲಾಹಲಕ್ಕೆ ಕಾರಣವಾಗಬಹುದು. NEET-UG ಮತ್ತು UGC-NET ಪರೀಕ್ಷೆಗಳು, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ. ಸಿದ್ಧತೆ ಮಾಡಿಕೊಂಡಿವೆ. ಜುಲೈ 2 ಅಥವಾ 3 ರಂದು ಪ್ರಧಾನ ಮಂತ್ರಿಗಳು ಸದನದಲ್ಲಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆಯಿದೆ. ನಂತರ ಸಂಸತ್ ಕಲಾಪ ಅಲ್ಪ ವಿರಾಮ ಪಡೆದು ಜುಲೈ 22ರಂದು ಬಜೆಟ್ ಮಂಡನೆ ವೇಳೆ ಮತ್ತೆ ಸೇರಲಿದೆ.
18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ ನವದೆಹಲಿ: ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಇಂದು ವಿಶೇಷ ಸಂಸತ್ ಅಧಿವೇಶನದ ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲ ಸೇರಿದಂತೆ …
Read More »ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ
ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …
Read More »ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ
ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …
Read More »