ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಿನ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ. ಹದಗೆಟ್ಟ ಗ್ರಾಮೀಣ ರಸ್ತೆಗಳು: ತಾಲ್ಲೂಕಿನ ತಂಗೋಡ, ಕೊಗನೂರು, …
Read More »Monthly Archives: ಜೂನ್ 2024
14 ತಿಂಗಳಾದರೂ ಪುಸ್ತಕಗಳೇ ಪ್ರಕಟವಾಗಿಲ್ಲ
ಬಾಗಲಕೋಟೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 29 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಈ ಬಾರಿ ಹತ್ತು ಪುಸ್ತಕಗಳ ಪ್ರಕಟಣೆಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮುಂದಾಗಿದೆ. ಆದರೆ, 16 ತಿಂಗಳ ಹಿಂದೆ ನಡೆದಿದ್ದ ಸಮ್ಮೇಳನದಲ್ಲಿ ಘೋಷಿಸಿದ್ದ ಪುಸ್ತಕಗಳೇ ಹೊರ ಬಂದಿಲ್ಲ. ಬೀಳಗಿಯಲ್ಲಿ ಅದ್ದೂರಿಯಾಗಿ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿ ಪುಸ್ತಕಗಳ ಬಿಡುಗಡೆಯೂ ನಡೆದಿತ್ತು. ಬಿಡುಗಡೆಗಾಗಿ ಕೇವಲ ಐದು ಪ್ರತಿಗಳನ್ನು ತರಲಾಗಿತ್ತು. ನಂತರ ಅವುಗಳ ಪ್ರಕಟಣೆಗೆ ಕನ್ನಡ …
Read More »ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ
ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾಜಿಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಿಟಿ ರವಿ,ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, …
Read More »ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್
ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …
Read More »ಕ್ಲಾಸ್ರೂಮ್ನಲ್ಲಿ ವಿದ್ಯಾರ್ಥಿಗಳು ಮಾಡಿದ ಕೆಲಸ ನೋಡಿ ಕಣ್ಣೀರಿಟ್ಟ ಶಿಕ್ಷಕಿ! ವಿಡಿಯೋ ವೈರಲ್
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸಂಬಂಧಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ತಮ್ಮ ಬೋಧನೆಯಿಂದ ವಿದ್ಯಾರ್ಥಿಗಳ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸುತ್ತಾರೆ. ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪರಿಗಣಿಸಿ, ಒಳ್ಳೆಯದು ಮತ್ತು ಕೆಟ್ಟದ್ದನ್ನು ತಿಳಿ ಹೇಳಿ, ಸರಿದಾರಿಯಲ್ಲಿ ನಡೆಸುತ್ತಾರೆ. ಹೀಗಾಗಿಯೇ ವಿದ್ಯಾರ್ಥಿಗಳು ಸಹ ಇಂತಹ ಶಿಕ್ಷಕರ ಮೇಲೆ ಅಪಾರ ಪ್ರೀತಿಯನ್ನು ತೋರಿಸುತ್ತಾರೆ. ಇತ್ತೀಚಿಗೆ ಕೆಲವು ವಿದ್ಯಾರ್ಥಿಗಳು ಮಾಡಿದ ಕೆಲಸವನ್ನು ನೋಡಿ ಶಿಕ್ಷಕಿಯೊಬ್ಬರು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …
Read More »ಭಾರತದಲ್ಲಿ ಅತಿ ಹೆಚ್ಚು ಅವಳಿ ಮಕ್ಕಳು ಜನಿಸುವ ಅಪರೂಪದ ಗ್ರಾಮ…!
ಅವಳಿ ಮಕ್ಕಳನ್ನು ಹೊಂದುವುದು ಅಪರೂಪ. ಆದರೆ ಭಾರತದ ಹಳ್ಳಿಯೊಂದರಲ್ಲಿ ಅವಳಿ ಮಕ್ಕಳ ಜನನ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿರುವ ಕೊಡಿನ್ಹಿ ಗ್ರಾಮವನ್ನು ಅವಳಿಗಳ ಗ್ರಾಮ ಎಂದೂ ಕರೆಯುತ್ತಾರೆ. ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಪ್ರತಿ 1000 ಮಕ್ಕಳಲ್ಲಿ ಕೇವಲ 9 ಅವಳಿ ಮಕ್ಕಳು ಜನಿಸುತ್ತಾರೆ. ಆದರೆ ಕೇರಳದ ಈ ಹಳ್ಳಿಯಲ್ಲಿ ಪ್ರತಿಯೊಂದು ಮನೆಯಲ್ಲೂ ಅವಳಿ ಮಕ್ಕಳಿದ್ದಾರೆ. 2008ರ ಮಾಹಿತಿ ಪ್ರಕಾರ ಎರಡು ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಅವಳಿ ಮಕ್ಕಳ ಸಂಖ್ಯೆ …
Read More »ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್ ಪ್ರಯಾಣತರ ಹೆಚ್ಚಳ ಬಗ್ಗೆ ಸಾರಿಗೆ ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೂನ್ 15ರಂದು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ …
Read More »ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. …
Read More »ದೈಹಿಕ ಶಿಕ್ಷಣ ಶಿಕ್ಷಕರ ಒತ್ತಾಯ ಮುಂಬಡ್ತಿಗೆ
ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ. ಶಿಕ್ಷಣ ಸಚಿವ ಮಧು.ಎಸ್. ಬಂಗಾರಪ್ಪ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೆಂಗಳೂರಿನಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ ಒತ್ತಾಯಿಸಿದರು. ಬರುವ ಜುಲೈ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರಸ್ತುತ ವರ್ಷದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ …
Read More »ಭತ್ತ ಸೇರಿ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ
ನವದೆಹಲಿ: ಪ್ರಸಕ್ತ ಸಾಲಿನ ಮುಂಗಾರು ಬೆಳೆಯಾಗಿ ಬೆಳೆದ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದ್ದು, ಪ್ರತಿ ಕ್ವಿಂಟಾಲ್ಗೆ ಶೇ 5.35ರಂತೆ ₹2,300ಕ್ಕೆ ಬುಧವಾರ ಹೆಚ್ಚಿಸಿದೆ. ಇದರಂತೆ ಇತರ 13 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನೂ ಸರ್ಕಾರ ಹೆಚ್ಚಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ, ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ ₹117ರಷ್ಟು ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿ ವಿಧಾನಸಭಾ ಚುನಾವಣೆಯ …
Read More »