ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ ಮುಂಬಯಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಕಾರು ಚಾಲಕ ಕಾರಿಗೆ ಪೆಟ್ರೋಲ್ ಹಾಕಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ವೇಗವಾಗಿ ಬರುತಿದ್ದ ಮತ್ತೊಂದು ಕಾರು …
Read More »Monthly Archives: ಜೂನ್ 2024
ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ
ಕುಷ್ಟಗಿ: ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಕೋತಿಯ ಹುಚ್ಚಾಟಕ್ಕೆ ಜನ ಆತಂಕಗೊಂಡಿದ್ದಾರೆ. ಕೋತಿ ಕಚ್ಚುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ಜೂ.29ರ ಶನಿವಾರ ಶಾಲೆಗೆ ರಜೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಜೂನ್ 27 ರಿಂದ ಕೋತಿಯ ಉಪಟಳ ಜಾಸ್ತಿಯಾಗಿದೆ. ಗಿಡ, ಮನೆಯ ಮಾಳಿಗೆಯ ಮೇಲೆ ಕೂರುವ ಕೋತಿ ಜನರ ಮೇಲೆ ಏಕಾಏಕಿ ದಾಳಿ ಮಾಡಿ ಸಿಕ್ಕ ಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ಕೋತಿಯ ದಾಳಿಗೆ ಮಕ್ಕಳಿಂದ ಹಿಡಿದು ವೃದ್ದರವರೆಗೆ ಒಟ್ಟು 15 …
Read More »ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ
ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ. ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. …
Read More »ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ
ಬೆಳಗಾವಿ: ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಕನ್ನಡ ಮಾಧ್ಯಮ ಶಾಲೆಗಳಿಗೆ ಗಡಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತ್ತ ತಾಲ್ಲೂಕಿನ ಬೋರಗಿ, ಕರಜಗಿ, ಭೇವರ್ಗಿ, ಬಾಲಗಾಂವ, ಅಂಕಲಗಿ, ಸಂಖ, ರಾವಳಗುಂಡವಾಡಿ, ಮೇಂಡಿಗೇರಿ ಗ್ರಾಮಗಳಲ್ಲಿನ ವಿವಿಧ ಕನ್ನಡ ಮಾಧ್ಯಮ ಶಾಲೆಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದರು. ಈ ಪ್ರದೇಶಗಳಲ್ಲಿನ ಕೆಲವು ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಮರಾಠಿ ಶಿಕ್ಷಕರನ್ನು ಕನ್ನಡ …
Read More »ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶೆಟ್ಟರ್ ಮನವಿ
ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ …
Read More »ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ
ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ ಸೇರಿ ಒಟ್ಟು ಜನ ಹೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೂರುವರೆ ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಲ್. ವಿಜಯಲಕ್ಷ್ಮೀ ದೇವಿ ಅವರು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದರು. ಮೈಸೂರಿನ ಬೆಸ್ಕಾಂ ಸಹಾಯಕ ಅಭಿಯಂತೆ ಬಿ.ವಿ. …
Read More »ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು …
Read More »ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ
ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನದಂದು ಸಹೋದರಿಯರು ತಮ್ಮ ಸಹೋದರನ ಕೈಗೆ ರಾಖಿ ಕಟ್ಟುತ್ತಾರೆ. ಈ ಮೂಲಕ ರಕ್ಷಣೆಯ ಭರವಸೆಯನ್ನು ಪಡೆಯುತ್ತಾರೆ. ಈ ಹಬ್ಬ ಸಹೋದರ ಸಹೋದರಿಯರ ನಡುವಿನ ಸಂಬಂಧವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬ ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ವಿಶ್ವಾಸವನ್ನು ಬಲಪಡಿಸುತ್ತದೆ. ಹಾಗಾದರೆ ಈ ವರ್ಷ ರಕ್ಷಾಬಂಧನ ಹಬ್ಬವನ್ನು …
Read More »ಆಡಳಿತದಲ್ಲಿ ಪಾರದರ್ಶಕತೆ ಕೊರತೆ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಬೇಸರ
ಬೆಳಗಾವಿ: ‘ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದೆ. ಇದನ್ನು ನಿವಾರಿಸಬೇಕಿದೆ’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು. ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು …
Read More »ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
ನವದೆಹಲಿ: ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ರೀಚಾರ್ಜ್ ಮತ್ತು ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ, ಇನ್ನೊಂದು ಪ್ರಮುಖ ಕಂಪೆನಿ ಭಾರ್ತಿ ಏರ್ಟೆಲ್ ಸಹ ತನ್ನ ಮೊಬೈಲ್ ರೀಚಾರ್ಜ್, ಪ್ಲಾನ್ ಗಳ ದರಗಳನ್ನು ಏರಿಕೆ ಮಾಡಿದೆ. ಈ ದರಗಳು ಜುಲೈ 3ರಿಂದ ಜಾರಿಗೆ ಬರಲಿವೆ. 179 ರೂ. ಗಳಿಗೆ 28 ದಿನ ವ್ಯಾಲಿಡಿಟಿ 2ಜಿಬಿ ಡಾಟಾ, ಅನಿಯಮಿತ ಕರೆ ಇದ್ದ ಪ್ಲಾನ್ 199 ರೂ.ಗಳಿಗೆ ಏರಿಕೆಯಾಗಿದೆ. …
Read More »