ಧಾರವಾಡ, ಜೂನ್.10: ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಚನ್ನಾಗಿ ಆಗಿದ್ದರಿಂದ ಜಿಲ್ಲೆಯ ರೈತರು ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು …
Read More »Monthly Archives: ಜೂನ್ 2024
ಪುನೀತ್ ರಾಜ್ಕುಮಾರ್ ಇದ್ದಿದ್ದರೆ ಹಿಂಗೆ ಆಗ್ತಿರಲಿಲ್ಲ ಅಂತಿದ್ದಾರೆ ಅಭಿಮಾನಿಗಳು!
ಪುನೀತ್ ರಾಜ್ಕುಮಾರ್ ಅಂದ್ರೆ ಕೋಟ್ಯಂತರ ಅಭಿಮಾನಿಗಳ ಎದೆಯಲ್ಲಿ ದೇವರು ಅಂತಾ ಕರೆಸಿಕೊಳ್ಳುತ್ತಿದ್ದಾರೆ. ಡಾ. ರಾಜ್ಕುಮಾರ್ ಅವರ ಕುಟುಂಬದ ಹೆಸರನ್ನು ಜಗತ್ತಿನಾದ್ಯಂತ ಪಸರಿಸುವ ರೀತಿ ಮಾಡಿದ್ದರು ಅಪ್ಪು ಪುನೀತ್ ರಾಜ್ಕುಮಾರ್. ಆದರೆ ಇಂದು ಇದೇ ಪುನೀತ್ ಅವರ ಹೋಲಿಕೆ ಇರುವ ಯುವ ರಾಜ್ಕುಮಾರ್ ಅವರು ಡಿವೋರ್ಸ್ ಪಡೆಯಲು ಮುಂದೆ ಬಂದಿರುವುದು ಸಂಚಲನ ಸೃಷ್ಟಿ ಮಾಡಿದೆ. ಈ ಬಗ್ಗೆ ಅಭಿಮಾನಿಗಳು ಏನ್ ಹೇಳುತ್ತಿದ್ದಾರೆ ಗೊತ್ತಾ? ಮುಂದೆ ಓದಿ. ಅಂದಹಾಗೆ ಯುವ ರಾಜ್ಕುಮಾರ್ ಅವರು …
Read More »ಮೋದಿ ಪ್ರಮಾಣವಚನದ ಬೆನ್ನಲ್ಲೇ ಬಿಜೆಪಿ ನಾಯಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಪತ್ರಿಕಾಗೋಷ್ಠಿ ನಡೆಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೆತ್, ‘ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ನೀಚ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಪಂಚತಾರಾ ಹೋಟೆಲ್ಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೂ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಬಿಜೆಪಿ ನಾಯಕ ರಾಹುಲ್ …
Read More »ಅಪ್ಪನಿದ್ದ ಸೆಲ್ಗೆ ಮಗ: ಅತ್ಯಾಚಾರ ಕೇಸ್ನಲ್ಲಿ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನ
ಬೆಂಗಳೂರು, ಜೂನ್ 10: ಹಾಸನ ಅಶ್ಲೀಲ ವಿಡಿಯೋಗಳಿದ್ದ ಪೆನ್ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ. ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ …
Read More »ಆಪ್ತ ಸಹಾಯಕನಿಂದಲೇ ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ
ಮೈಸೂರು, ಜೂ.10- ಆಪ್ತ ಸಹಾಯಕನೇ ಅನ್ನದಾನೇಶ್ವರ ಮಠದ ಸ್ವಾಮೀಜಿಯವರನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಜರ್ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶಿವಾನಂದ ಸ್ವಾಮೀಜಿ(90) ಕೊಲೆಯಾದ ಹಿರಿಯ ಶ್ರೀಗಳು. ಕಳೆದ ಹಲವಾರು ವರ್ಷಗಳಿಂದ ರವಿ ಎಂಬಾತ ಸ್ವಾಮೀಜಿಯವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಶ್ರೀಗಳ ಕೆಲಸ ಕಾರ್ಯಗಳಿಗೆ ನೆರವಾಗಿದ್ದ ಸಿದ್ದಾರ್ಥ ನಗರದಲ್ಲಿರುವ ಮಠದಲ್ಲೇ ನೆಲೆಸಿದ್ದು, ಶ್ರೀಗಳ ಯೋಗಕ್ಷೇಮ, ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದ. ಆದರೆ ಇದ್ದಕ್ಕಿದ್ದಂತೆ ಶ್ರೀಗಳನ್ನು ಕೊಲೆ ಮಾಡಿರುವುದು ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸಿದೆ. …
Read More »ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು : ಬಹಿರಂಗವಾಗಿ ವಾರ್ನ್ ಕೊಟ್ಟ ಡಿಸಿಎಂ
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯದೆ ಇದದರಿಂದ ಇದೀಗ ಕಾಂಗ್ರೆಸ್ ಹಲವು ಶಾಸಕರು ನಾಲಿಗೆ ಹರಿಬಿಡುತ್ತಿದ್ದಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 14 ಇಲ್ಲ 15 ಸೀಟ್ ಬರುತ್ತೆ ಅಂತ ನಮಗೆ …
Read More »ಹೆಬ್ಬಾಳ್ಕರ್ ಕಡೆಗೆ ನೋಡಿ ಸ್ವಾರಿ ಎಂದ ಸಿಎಂ
ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ಸಿನ ಕೆಲ ನಾಯಕರಲ್ಲಿ ಖುಷಿ ತಂದಿದ್ದರೆ ಇನ್ನೂ ಅನೇಕರಲ್ಲಿ ನೋವುಂಟು ಮಾಡಿದೆ. ಈ ಮಧ್ಯೆ ಬೆಳಗಾವಿಯಿಂದ ತಮ್ಮ ಪುತ್ರನನ್ನು ಕಣಕ್ಕೆ ಇಳಿಸಿದ್ದ ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿರುವ ವೀಡಿಯೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೌದು ಚುನಾವಣಾ ಫಲಿತಾಂಶದ ನಂತರ ಬೆಂಗಳೂರಿಗೆ ತೆರಳಿರುವ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದೆ. ಈ …
Read More »ಬಗೆಹರಿಯದ ನೀರಿನ ಸಮಸ್ಯೆ: ಸರ್ಕಾರದ ಮಾತಿಗೆ ಇಲ್ಲಿ ಕವಡೆ ಕಾಸಿನ ಬೆಲೆ ಇಲ್ಲ
ರಾಯಚೂರು: ರಾಜ್ಯದಲ್ಲಿ ಯಾವ ಸರ್ಕಾರ ಬಂದರೇನು?, ಹೋದರೇನು? ಸರ್ಕಾರದ ಮಾತಿಗೆ ಜಿಲ್ಲೆಯಲ್ಲಿ ಕವಡೆ ಕಾಸಿನ ಬೆಲೆ ಇಲ್ಲ. ಜಿಲ್ಲೆಯ ಹಲವೆಡೆ ನೀರಿಗಾಗಿ ಪರಿತಪಿಸುತ್ತ ವರ್ಷ ಕಳೆದರೂ ಜಿಲ್ಲಾಡಳಿತ ಗಂಭೀರವಾಗಿಲ್ಲ. ಚುನಾಯಿತ ಪ್ರತಿನಿಧಿಗಳೂ ತಲೆಕೆಡಿಸಿಕೊಂಡಿಲ್ಲ. ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನರ ಗೋಳು ಹೆಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವರು ಇದ್ದರೂ ಯಾವ ಲೆಕ್ಕಕ್ಕೂ ಇಲ್ಲ. ಅವರು ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ರಾಜ್ಯ …
Read More »ಮದುವೆಯಾಗುವುದಾಗಿ ನಂಬಿಸಿ ₹ 1.69 ಲಕ್ಷ ವಂಚನೆ
ಧಾರವಾಡ: ಸಂಗೀತಾ ಎಂಬುವರು ‘ಜೀವನ್ ಸಾಥಿ’ ಮ್ಯಾಟ್ರಿಮೋನಿ ಆಯಪ್ ಮೂಲಕ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಆನ್ಲೈನ್ನಲ್ಲಿ ₹1.69 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಕುರಿತು ‘ಸೆನ್’ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಗೋಳದ ಕುಶಾಲ್ ಅವರು ದೂರು ನೀಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ಸಂಗೀತಾ ಮತ್ತು ಶಿವರಾಜಕುಮಾರ ವಿರುದ್ಧ ದೂರು ನೀಡಿದ್ಧಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ (2008), ವಂಚನೆ (ಐಪಿಸಿ 419 ಹಾಗೂ …
Read More »ಮೋದಿ ಗೆದ್ದಿರುವುದು 1.5 ಲಕ್ಷ ಮತಗಳ ಅಂತರದಲ್ಲಿ ಮಾತ್ರ: ಸಂತೋಷ್ ಲಾಡ್
ಧಾರವಾಡ: ‘ಮೋದಿ ಅಲೆ ಕೆಲವು ಕಡೆ ಮಾತ್ರ ಇದೆ, ಎಲ್ಲ ಕಡೆ ಇಲ್ಲ. ಮೋದಿ ಅವರು ಗೆದ್ದಿರುವುದೇ 1.5 ಲಕ್ಷ ಮತಗಳ ಅಂತರದಲ್ಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕುಟುಕಿದರು. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಧಾನಿಗಳು 5 ಲಕ್ಷಕ್ಕೂ ಹೆಚ್ಚು ಅಂತರ ಪಡೆದವರೇ ಹೆಚ್ಚು. ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಎರಡನೇ ಪ್ರಧಾನಿ ಮೋದಿ. ಚಂದ್ರಶೇಖರ್ ಅವರು 1.5 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು ಎಂದರು. …
Read More »