Breaking News

Monthly Archives: ಜೂನ್ 2024

ಹೊಸದಾಗಿ ಆಯ್ಕೆಯಾದ 251 ಸಂಸದರಿಗೆ ಕ್ರಿಮಿನಲ್ ನಂಟು: ಎಡಿಆರ್ ವರದಿ

ನವದೆಹಲಿ: ಹೊಸದಾಗಿ ಆಯ್ಕೆಯಾದ 543 ಲೋಕಸಭಾ ಸದಸ್ಯರಲ್ಲಿ 251 (ಶೇ 46) ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದವರು ಸೇರಿದ್ದಾರೆ ಎಂದು ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ (ಎಡಿಆರ್) ವರದಿ ಮಾಡಿದೆ. 2019ರಲ್ಲಿ 233 (ಶೇ 43), 2014ರಲ್ಲಿ 185 (ಶೇ 34 ), 2009ರಲ್ಲಿ 162 (ಶೇ 30) ಮತ್ತು 2004ರಲ್ಲಿ 125 (ಶೇ 23 ) ಸಂಸದರ ವಿರುದ್ಧ …

Read More »

BREAKING: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಜೂನ್.12ಕ್ಕೆ

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಜೂನ್ 8 ರಂದು ನಿಗದಿಯಾಗಿರುವ ಪ್ರಧಾನಿ ಮೋದಿ ಮತ್ತು ಎನ್ಡಿಎ ಕ್ಯಾಬಿನೆಟ್ ಪ್ರಮಾಣವಚನ ಸಮಾರಂಭದಿಂದಾಗಿ ನಾಯ್ಡು ಅವರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮತ್ತು ಇತರ ಹಿರಿಯ ಎನ್ಡಿಎ ನಾಯಕರು ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಜೂನ್ 6 ರ ಗುರುವಾರ, …

Read More »

ಯಾರಾಗಲಿದ್ದಾರೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು..?

ಬೆಂಗಳೂರು, ಜೂ.6-ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು ಯಾರಾಗಲಿದ್ದಾರೆ ಎಂಬ ಚರ್ಚೆ ಪ್ರಾರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನ ತೆರವಾಗಲಿದೆ. ಜೆಡಿಎಸ್‌‍ನಲ್ಲಿ ಮಾಜಿ ಸಚಿವರಾದ ಹೆಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ ಹಾಗೂ ಶ್ರೀನಿವಾಸಪುರ ಕ್ಷೇತ್ರದ ವೆಂಕಟಶಿವಾರೆಡ್ಡಿ ಅವರು ಹಿರಿಯ ಶಾಸಕರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸಂಸದರಾಗಿದ್ದ ಸಂದರ್ಭದಲ್ಲೂ ರೇವಣ್ಣ ಅವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. …

Read More »

ರಾಜಕಾರಣದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ ಜಾರಕಿಹೊಳಿ ಕುಟುಂಬ

ಬೆಂಗಳೂರು, ಜೂ.6- ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದ್ದು, ಜಾರಕಿಹೊಳಿ ಕುಟುಂಬ ಮತ್ತೆ ಚರ್ಚೆಯಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಅಭ್ಯರ್ಥಿಯಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಗೆಲುವು ಕಂಡಿದ್ದಾರೆ. ಬೆಳಗಾವಿಯಿಂದ ಅಭ್ಯರ್ಥಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಸೋಲು ಕಂಡಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಮತ್ತೆ ಜಾರಕಿಹೊಳಿ ಕುಟುಂಬದ ಅಧಿಪತ್ಯ ಹೆಚ್ಚಾಗಿದೆ ಎಂಬ ಅಭಿಪ್ರಾಯಗಳಿವೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ …

Read More »

ಉಪ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಸ್ಪರ್ಧೆ ಖಚಿತ?

ಬೆಂಗಳೂರು: ಲೋಕಸಭೆಗೆ ಮೂವರು ಶಾಸಕರು ಹಾಗೂ ವಿಧಾನ ಪರಿಷತ್ತಿನಿಂದ ಒಬ್ಬರು ಆಯ್ಕೆಯಾಗಿರುವುದರಿಂದ ಅವರ ಸ್ಥಾನಗಳಿಗೆ 6 ತಿಂಗಳ ಒಳಗೆ ಉಪ ಚುನಾವಣೆ ಘೋಷಣೆಯಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಕೂಟದ ಮಧ್ಯೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಹೋರಾಟ ನಡೆಯುವುದು ಗ್ಯಾರಂಟಿಯಾಗಿದೆ. ಚನ್ನಪಟ್ಟಣ ಶಾಸಕರಾಗಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ, ಶಿಗ್ಗಾವಿ ಶಾಸಕರಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ, ಸಂಡೂರು ಶಾಸಕ ತುಕಾರಾಂ ಅವರು ಬಳ್ಳಾರಿ …

Read More »

ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯ

ಬೆಂಗಳೂರು: ಹಾಸನದಲ್ಲಿ ನಡೆದಿದೆ ಎನ್ನಲಾದ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ವಿಶೇಷ ತನಿಖಾ ದಳದಿಂದ (ಎಸ್‌ಐಟಿ) ಡ್ರಿಲ್‌ ಮುದುವರಿದಿದೆ. ಹೆಚ್ಚಿನ ವಿಚಾರಣೆಗಾಗಿ ಇಂದು (ಜೂ.6) ಪ್ರಜ್ವಲ್‌ರನ್ನು ಎಸ್‌ಐಟಿಯು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವ ಎಸ್‌ಐಟಿಯು ಮಾಹಿತಿ ಕಲೆ ಹಾಕಿ ಸಾಕ್ಷ್ಯಾಧಾರ …

Read More »

ಗ್ಯಾರಂಟಿಗಳು ಇನ್ನೂ ಇರುತ್ತಾ? ಇರಲ್ವಾ! ಪರಾಮರ್ಶೆಗೆ ಮುಂದಾಗುವುದೇ ಸರ್ಕಾರ ?

ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶದಲ್ಲಿ ಅನಿರೀಕ್ಷಿತ ಆಘಾತಕ್ಕೆ ಒಳಗಾಗಿರುವ ಆಡಳಿತಾರೂಢ ಕಾಂಗ್ರೆಸ್‌, ಸೋಲು-ಗೆಲುವಿನ ಲೆಕ್ಕಾಚಾರಗಳ ಜತೆಗೇ ತನ್ನ ಜನಪ್ರಿಯ “ಗ್ಯಾರಂಟಿ’ ಯೋಜನೆಗಳನ್ನೂ ಪರಾಮರ್ಶೆಗೊಳಪಡಿಸಲು ಮುಂದಾಗಿದೆ. ವಿಧಾನಸಭಾ ಚುನಾವಣೆ ಪೂರ್ವ ಘೋಷಿಸಿದ ಗ್ಯಾರಂಟಿಗಳು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ನಿಜ. ನಂತರದಲ್ಲಿ ಜಾರಿಗೊಳಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೂ ಅಷ್ಟೇ ಸತ್ಯ. ಆದರೆ, ಅದೇ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ “ಕೈ’ ಹಿಡಿಯಲಿಲ್ಲ ಎಂಬುದು ವಾಸ್ತವ. ಹೀಗಿರುವಾಗ, ಗ್ಯಾರಂಟಿಗಳನ್ನು ಮುಂದುವರಿಸುವುದು ಸೂಕ್ತವೇ ಎಂಬ …

Read More »

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ: ಅಂಗಡಿ

ಬೆಳಗಾವಿ: ಚುನಾವಣೆ ಸಮಯದಲ್ಲಿ ಕೇವಲ ಅಪಪ್ರಚಾರ ಮಾಡಿ ಸುಳ್ಳು ಹೇಳುತ್ತಲೇ ಬಂದ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಂಸದೆ ಮಂಗಲಾ ಸುರೇಶ ಅಂಗಡಿ ತಿರುಗೇಟು ನೀಡಿದ್ದಾರೆ. ಕ್ಷೇತ್ರಕ್ಕೆ ಹಿಂದಿನ ಸಂಸದರಾಗಿದ್ದ ಸುರೇಶ ಅಂಗಡಿ ಏನು ಮಾಡಿಲ್ಲ. ಯಾವ ಯೋಜನೆಯನ್ನು ತಂದಿಲ್ಲ ಎಂದು ತಾಯಿ ಮತ್ತು ಮಗ ಸುಳ್ಳು ಅಪಪ್ರಚಾರ ಮಾಡಿದರು. ಈ ರೀತಿಯ ಅಪಪ್ರಚಾರಕ್ಕೆ ಮತದಾರರೇ ಸರಿಯಾದ …

Read More »

ಚಿಕ್ಕ ವಯಸ್ಸಿನಲ್ಲಿ ಸಂಸತ್‌ಗೆ ಆಯ್ಕೆ ಆಗಿದ್ದಕ್ಕೆ ಖುಷಿ ಆಗುತ್ತಿದೆ ;ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿಗೆ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗುತ್ತಿದ್ದು ಈ ಆಯ್ಕೆಗೆ ಕಾರಣರಾದ ಮತದಾರರಿಗೆ, ಸಹಕರಿಸಿದ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಚಿರಋಣಿಯಾಗಿದ್ದೇನೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ಕಡಿಮೆ ಸಮಯದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವುದು ಸವಾಲಿನ ಕಾರ್ಯವಾಗಿತ್ತು. ಆದರೆ ತಂದೆಯ ಮಾರ್ಗದರ್ಶನ, ಸಹೋದರನ ಸಹಕಾರ, …

Read More »

ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯೋದು ಫಿಕ್ಸ್?

ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು …

Read More »