Breaking News

Daily Archives: ಜುಲೈ 14, 2024

ಸೌಹಾರ್ದದ ಮೊರಬದ ಮೊಹರಂ

ರಾಯಬಾಗ: ಜಾತಿಯ ಹಂಗಿಲ್ಲದೇ ಮನುಕುಲ ಒಂದೇ ಎಂಬ ಸಂದೇಶ ಸಾರಿ, ಸರ್ವಧರ್ಮಗಳ ಭಾವೈಕ್ಯದ ಕೊಂಡಿಯಾಗಿರುವ ಮೊಹರಂ ಹಬ್ಬ ಆಚರಣೆ ಆಧುನಿಕ ಯುಗದಲ್ಲೂ ಸ್ನೇಹ, ಭ್ರಾತೃತ್ವದ ಸಂಕೇತವಾಗಿ ನಡೆದುಕೊಂಡು ಬಂದಿದೆ. ಮೊರಬದಲ್ಲಿ ಮೊಹರಂ ಸರ್ವ ಧರ್ಮೀಯರು ಆಚರಿಸುವ ವೈಶಿಷ್ಟ್ಯಪೂರ್ಣ ಹಬ್ಬವಾಗಿದೆ.   ಇದಕ್ಕೆ ಅಲಾಯಿ ಹಬ್ಬ ಅಂತಲೂ ಹೆಸರು. ಮೊರಬ ಗ್ರಾಮದಲ್ಲಿ ಈ ಹಬ್ಬವನ್ನು ಉತ್ಸಾಹದಿಂದ ಆಚರಿಸುತ್ತಾರೆ. ಈ ಹಬ್ಬದಲ್ಲಿ ಚಿಣ್ಣರನ್ನು ನೋಡುವುದೇ ಒಂದು ಮಜವಾಗಿರುತ್ತದೆ. ಐದು ದಿನಗಳ ಕಾಲ ಕೂರಿಸಲಾಗುವ …

Read More »

ರ್ಭಿಣಿ ಹಸುವಿಗೆ ಸೀಮಂತ ಸಂಭ್ರಮ

ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಗುರು ಮಡಿವಾಳೇಶ್ವರ ಮಠದ ಕಲ್ಯಾಣ ಮಂಟಪ ಆವರಣದಲ್ಲಿ ಶುಕ್ರವಾರ ಸಂಭ್ರಮ ಮನೆ ಮಾಡಿತ್ತು. ಬಂಧು-ಬಳಗದವರೆಲ್ಲ ಸೇರಿ ಕುಪ್ಪಸ ಕಾರ್ಯಕ್ರಮ (ಸೀಮಂತ) ನಡೆಸಿಕೊಟ್ಟರು. ತುಂಬು ಗರ್ಭಿಣಿಯ ಕಣ್ಣಲ್ಲಿ ಕರುಳ ಕುಡಿಯ ಕನಸು ಚಿಮ್ಮಿತು… ಅಂದಹಾಗೆ ಇದು ಯಾವುದೋ ಹೆಣ್ಣುಮಗಳಿಗೆ ಮಾಡಿದ ಸೀಮಂತವಲ್ಲ. ಗರ್ಭ ಧರಿಸಿದ ಹಸುವನ್ನು ತಮ್ಮ ತವರ ಮಗಳು ಎಂಬಂತೆ ಗ್ರಾಮಸ್ಥರೇ ಮಾಡಿದ ಕುಪ್ಪಸ ಕಾರ್ಯಕ್ರಮ. ಮಡಿವಾಳೇಶ್ವರ ಮಠದ ಗರ್ಭಿಣಿ ಆಕಳಿಗೆ ಮಂಟಪ ಹಾಕಿ, …

Read More »

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಲಬುರಗಿ : ಕೃಷಿ ಜಮೀನೊಂದರಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಇದೀಗ ಹಳೆ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರರಬಹುದೆಂದು ಶಂಕೆ ವ್ಯಕ್ತವಾಗುತ್ತಿದೆ. ಹೌದು ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ನಾಗೂರ ಗ್ರಾಮದ ಖಾಸಗಿ ಕೃಷಿ ಜಮೀನಿನ ದಂಡೆಯಲ್ಲಿ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಒಂದು ದಿನ ಹಿಂದೆ ಈ ಕೊಲೆ ನಡೆದಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. …

Read More »

ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗೆ 50 ಲಕ್ಷ ರೂ. ಬಿಡುಗಡೆ

ಬೆಂಗಳೂರು ಮಂಗಳುರು ವಿಶ್ವವಿದ್ಯಾಲಯದಲ್ಲಿ ‘ಕುಂದ ಕನ್ನಡ ಭಾಷೆಯ ಅಧ್ಯಯನ ಪೀಠ’ ಸ್ಥಾಪನೆಗೆ 50 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ. ಪೀಠ ಸ್ಥಾಪನೆಗೆ 2022ರ ಮೇ 16ರಂದು ನಡೆದಿದ್ದ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ವಿವಿ ಆಂತರಿಕ ಸಂಪನ್ಮೂಲದಿಂದ ಅಧ್ಯಯನ ಪೀಡ ಸ್ಥಾಪಿಸಲು 25 ಲಕ್ಷ ರೂ.ಗಳನ್ನು ಮೀಸಲಿಡಲು ನಿರ್ಣಯಿಸಲಾಗಿತ್ತು. ಬಳಿಕ ವಿವಿಗಳ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಮತ್ತು ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯ ನೀತಿಯನ್ನು ರೂಪಿಸುವ ಬಗ್ಗೆ …

Read More »

ರೌಡಿಗಳ ವಿಚಾರದಲ್ಲಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯಲ್ಲ: ಪೊಲೀಸ್ ಕಮಿಷನರ್

ಹುಬ್ಬಳ್ಳಿ, ಜುಲೈ 14: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು. ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಅವರು ರೌಡಿ ಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ …

Read More »

X ನಲ್ಲಿ 100 ಮಿಲಿಯನ್ ಫಾಲೋವರ್‌ಗಳ ಗಡಿ ದಾಟಿದ ಮೋದಿ! ಟಾಪ್ 10ರಲ್ಲಿ ಯಾರಾರು?

ಬೆಂಗಳೂರು: ಜನಪ್ರಿಯ ಸಾಮಾಜಿಕ ಜಾಲತಾಣ ‘ಎಕ್ಸ್‌’ (ಟ್ವಿಟರ್‌) ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಫಾಲೋವರ್‌ಗಳ ಸಂಖ್ಯೆ 100 ಮಿಲಿಯನ್ (10 ಕೋಟಿ) ಗಡಿ ದಾಟಿದೆ. ಕೇಂದ್ರ ಸಚಿವರು, ಬಿಜೆಪಿ ನಾಯಕರು, ಕಾರ್ಯಕರ್ತರು, ಅನೇಕ ಗಣ್ಯರು, ಅಭಿಮಾನಿಗಳು ಮೋದಿ ಅವರ ಈ ಸಾಧನೆಯನ್ನು ಕೊಂಡಾಡಿದ್ದಾರೆ. ಅಲ್ಲದೇ ಅನೇಕ ಸಾಮಾಜಿಕ ತಾಣಗಳಲ್ಲಿ ನೂರು ಮಿಲಿಯನ್ ಗಡಿ ದಾಟಿದ್ದರ ಸ್ಕ್ರೀನ್ ಶಾಟ್ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಬಗ್ಗೆ ಮೋದಿ ಅವರೂ ಸಹ ಟ್ವೀಟ್ …

Read More »

ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ವರುರ್ಣಾಭಟ ಮುಂದುವರಿದಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಗೋಣಿಕೊಪ್ಪ ಸೇರಿ ಕರಾವಳಿಯಲ್ಲಿ ಮಳೆ ತೀವ್ರತೆ ಇನ್ನಷ್ಟು ಜಾಸ್ತಿಯಾಗಿದ್ದು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ …

Read More »

ಚಿಂಚೋಳಿ | ಬ್ರಿಜ್‌ ಕಂ ಬ್ಯಾರೇಜ್‌ ಬಹುತೇಕ ಪೂರ್ಣ

ಚಿಂಚೋಳಿ: ತಾಲ್ಲೂಕಿನ ಅಣವಾರ ಗಂಗನಪಳ್ಳಿ ನಡುವೆ ಬ್ರಿಜ್‌ ಕಂ ಬ್ಯಾರೇಜ್‌ ಕನಸು ಕಾಣುತ್ತಿದ್ದ ಗ್ರಾಮಸ್ಥರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನೆರವಿಗೆ ಧಾವಿಸಿದ್ದು, ದಶಕಗಳ ಕನಸು ನನಸಾಗಲಿದೆ. ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಅಂದಾಜು ₹ 10 ಕೋಟಿ ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್‌ ಮಂಜೂರಾಗಿದ್ದು, ಹಗಲಿರುಳು ಕಾಮಗಾರಿ ನಡೆಸಿ, ಮೂರು ತಿಂಗಳಲ್ಲಿಯೇ ಬಹುತೇಕ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. 108 ಮೀಟರ್ ಉದ್ದ, 3 ಮೀಟರ್ ಎತ್ತರದ 5.5 ಮೀಟರ್ ಅಗಲದ …

Read More »

ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ

ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ. ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. …

Read More »

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು …

Read More »