ಚಿಕ್ಕೋಡಿ: ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್ ವ್ಯವಸ್ಥೆಯೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳಿಂದ ತಾಲ್ಲೂಕಿನ ಸದಲಗಾ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಬಳಲುತ್ತಿದೆ. ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಇಲ್ಲಿ ಸುಸಜ್ಜಿತ ಕಟ್ಟಡ ತಲೆ ಎತ್ತಿ, …
Read More »Monthly Archives: ಜುಲೈ 2024
ರಾಹುಲ್ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ
ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಕುಮಾರ ಹೀರೆಮಠ ಒತ್ತಾಯಿಸಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆ ಆದರ್ಶ ಸೈನಿಕನನ್ನು ರೂಪಿಸುತ್ತದೆ. ಬಹಳಷ್ಟು ಯುವಕ-ಯುವತಿಯರು ಇದರ ಲಾಭ ಪಡೆದಿದ್ದಾರೆ. ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಹುಲ್ ಗಾಂಧಿ ಈ ಯೋಜನೆ ವಿರೋಧಿಸಬಾರದು. ಇದರ …
Read More »ವಸತಿ ಶಾಲೆಯಲ್ಲಿ ಅವಕಾಶ ಮೀರಿ ಪ್ರವೇಶ: ಅಧಿಕಾರಿಗಳ ಅಮಾನತಿಗೆ ಭೀಮಪ್ಪ ಗಡಾದ ಆಗ್ರಹ
ಬೆಳಗಾವಿ: ‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ 39 ವಸತಿ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 141 ವಿದ್ಯಾರ್ಥಿಗಳಿಗೆ ನಿಯಮ ಉಲ್ಲಂಘಿಸಿ ಪ್ರವೇಶ ಕಲ್ಪಿಸಿದ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಲಕ್ಷ್ಮಣ ಬಬಲಿ ಮತ್ತು …
Read More »ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆ ಪಕ್ಕದ ಅಕ್ರಮ ಕಟ್ಟಡ ತೆರವು
ಪುಣೆ: ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಐಷಾರಾಮಿ ಮನೆಯ ಪಕ್ಕದಲ್ಲಿದ್ದ ಅಕ್ರಮ ಕಟ್ಟಡವನ್ನು ಪುಣೆ ಮಹಾನಗರ ಪಾಲಿಕೆಯು ಬುಧವಾರ ತೆರವುಗೊಳಿಸಿದೆ. ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡ ತೆರವುಗೊಳಿಸುವಂತೆ ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಕುಟುಂಬಕ್ಕೆ ಸೂಚಿಸಿ, ಜುಲೈ 13ರಂದು ನೋಟಿಸ್ ನೀಡಲಾಗಿತ್ತು. ಈ ಕುರಿತು ಬುಧವಾರ ಪ್ರತಿಕ್ರಿಯಿಸಿದ ಪುಣೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು, ‘ಏಳು ದಿನಗಳಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿ ಅವರ ಕುಟುಂಬಕ್ಕೆ …
Read More »ಬೈಂದೂರು: ಕುಸಿಯುತ್ತಿದೆ ಸೋಮೇಶ್ವರ ಗುಡ್ಡ
ಬೈಂದೂರು: ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡದಲ್ಲಿ ಖಾಸಗಿ ಕಟ್ಟಡಕ್ಕೆ ರಸ್ತೆ ನಿರ್ಮಿಸಿದ ಪರಿಣಾಮ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ನಿರಂತರ ಸುರಿಯುತ್ತಿರುವ ಮಳೆಯ ಅಬ್ಬರದ ಪರಿಣಾಮವಾಗಿ ಸೊಮೇಶ್ವರ-ದೊಂಬೆ ರಸ್ತೆಗೆ ಮಣ್ಣು ಕುಸಿಯುತ್ತಿದೆ ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು. ಗುಡ್ಡವು ಯಾವುದೇ ಕ್ಷಣದಲ್ಲೂ ಕುಸಿಯುವ ಸಾಧ್ಯತೆ ಇದ್ದು, ಒಂದೊಮ್ಮೆ ಕುಸಿದರೆ ರಸ್ತೆಯ ಇನ್ನೊಂದು ಪಾರ್ಶ್ವದ ಗುಡ್ಡವು ಸೋಮೇಶ್ವರ ದೇವಾಲಯದ ಆವರಣ, ಕೆರೆ ಹಾಗೂ ಸುತ್ತಮುತ್ತ ಜರಿದು ಬೀಳಲಿದೆ ಎಂದಿದ್ದಾರೆ. …
Read More »ಮೂಲ ಸೌಕರ್ಯ ವಲಯದಲ್ಲಿ ಹೂಡಿಕೆ ವರದಾನ: LICಗೆ ಶೇ 79ರಷ್ಟು ಗಳಿಕೆ
ಮುಂಬೈ: ದೇಶದ ಮೂಲ ಸೌಕರ್ಯ ವಲಯದ ಷೇರುಗಳಲ್ಲಿನ ಹೂಡಿಕೆಯು ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಪಾಲಿಗೆ ವರದಾನವಾಗಿದೆ. ಒಂದು ವರ್ಷದಲ್ಲಿ ನಿಗಮದ ಷೇರಿನ ಮೌಲ್ಯದಲ್ಲಿ ಶೇ 79ರಷ್ಟು ಏರಿಕೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಎಚ್ಡಿಎಫ್ಸಿ ಲೈಫ್ ಮತ್ತು ಐಸಿಐಸಿಐ ಪ್ರುಡೆನ್ಶಿಯಲ್ ಲೈಫ್ ಕಂಪನಿಯು ಮಾಹಿತಿ ತಂತ್ರಜ್ಞಾನ, ಗ್ರಾಹಕ, ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (ಬಿಎಫ್ಎಸ್ಐ) ವಲಯಗಳಲ್ಲಿ ಹೆಚ್ಚು ಹೂಡಿಕೆ ಮಾಡಿವೆ. ಆದರೆ, …
Read More »ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದ ಸರ್ಕಾರ
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಕನ್ನಡಿಗರ ಮೀಸಲಾತಿ ನೀಡುವ ವಿಧೇಯಕ ಪುನರ್ ಪರಿಶೀಲಿಸಲಾಗುವುದು. ಹೀಗಾಗಿ ತಕ್ಷಣಕ್ಕೆ ಮಸೂದೆ ಮಂಡಿಸದಿರಲು ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ನಾಲ್ಕು ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಸೂಕ್ತ …
Read More »ಹುಬ್ಬಳ್ಳಿ | ಇಂಗ್ಲಿಷ್ ಮಾಧ್ಯಮ; ಶಿಕ್ಷಕರ ಕೊರತೆ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಇನ್ನೂ ಆರು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವವೂ ಸಲ್ಲಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದದಲ್ಲಿ ತಲಾ ಒಂದೊಂದು ಶಾಲೆ ಸೇರಿ ಒಟ್ಟು 8 ಕರ್ನಾಟಕ ಪಬ್ಲಿಕ್ ಶಾಲೆಗಳಿವೆ (ಕೆಪಿಎಸ್). ಇಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಬೋಧಿಸಲಾಗುತ್ತದೆ. ‘ಪೋಷಕರು ಹಾಗೂ ವಲಯ ವ್ಯಾಪ್ತಿಯ …
Read More »270ಕ್ಕೂ ಹೆಚ್ಚು ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ: ಪೊಲೀಸ್ ಬಲೆಗೆ ಸೈಬರ್ ವಂಚಕರು
ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ. ದೆಹಲಿಯ ನಿಖಿಲಕುಮಾರ್ ರೌನಿ ಮತ್ತು ಸಚಿನ್ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, …
Read More »ಪೊಲೀಸ್ ಬಲೆಗೆ ಸೈಬರ್ ವಂಚಕರು
ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ. ದೆಹಲಿಯ ನಿಖಿಲಕುಮಾರ್ ರೌನಿ ಮತ್ತು ಸಚಿನ್ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ …
Read More »