Breaking News

Monthly Archives: ಜುಲೈ 2024

ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು

ಹುಬ್ಬಳ್ಳಿ,ಜು.14- ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಆತಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಉಳಿಸಿ ಕಲಘಟಗಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಶಂಭುಲಿಂಗಯ್ಯ ಹುಲಸೋಗಿ ಕುಡಿದ ಮತ್ತಿನಲ್ಲಿ ನೇಣಿ ಹಾಕಿಕೊಳ್ಳಲು ಮುಂದಾಗಿದ್ದ,ಮನೆಯಲ್ಲಿ ನೇಣು ಬಿಗಿದು ಆತಹತ್ಯೆ ಮಾಡಿಕೊಳ್ಳುತ್ತಿದ್ದಾಗ ಏಕಾಏಕಿ 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ಅವರು ಸ್ಥಳಕ್ಕೆ ದೌಡಾಯಿಸಿ ನೇಣಿಗೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. ಸದ್ಯ ಕಲಘಟಗಿ …

Read More »

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲು ಓಪನ್

ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ …

Read More »

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ …

Read More »

ನಾಳೆಯಿಂದ ವಿಧಾನ ಕಲಾಪ: ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ ಸರಕಾರದ ವಿರುದ್ಧ ಮುಗಿಬೀಳಲು ಬಿಜೆಪಿ-ಜೆಡಿಎಸ್‌ ಸಜ್ಜಾಗಿವೆ. ಇದರ ನಡುವೆ ಹಲವು ಮಸೂದೆಗಳಿಗೆ ಸದನದಲ್ಲಿ ಸರಕಾರ ಅಂಗೀಕಾರ ಪಡೆಯುವ ಸಾಧ್ಯತೆಯಿದೆ.   ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್‌ ವಿಪಕ್ಷ ಸ್ಥಾನದಲ್ಲಿದ್ದರೂ ಲೋಕಸಭೆ ಚುನಾವಣ ಫ‌ಲಿತಾಂಶದಿಂದ ಹೊಸ ಹುರುಪು ಪಡೆದಿವೆ. ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ …

Read More »

ರೇಷನ್‌ ಕಾರ್ಡ್‌ʼ ಹೊಂದಿರುವ ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ.ಹಣ!

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು …

Read More »

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ’

ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ …

Read More »

ಡೊನಾಲ್ಡ್‌ ಟ್ರಂಪ್‌ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ

ವಾಷಿಂಗ್ಟನ್‌ : ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ …

Read More »

ಘಟಪ್ರಭಾ | ಮೊಹರಂ: ಶಾಂತಿಯುತ ಆಚರಣೆಗೆ ಸಲಹೆ

ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …

Read More »

ಲೆಜೆಂಡ್ಸ್ ಕ್ರಿಕೆಟ್: ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಗೆದ್ದು ಬೀಗಿದ ಭಾರತ

ಬರ್ಮಿಂಗ್‌ಹ್ಯಾಮ್: ‘ವರ್ಲ್ಡ್ ಚಾಂಪಿಯನ್‌ಷಿಪ್ ಆಫ್ ಲೆಜೆಂಡ್ಸ್ 2024’ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಇಲ್ಲಿನ ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್‌, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 156 ರನ್ ಗಳಿಸಿತು. ಈ ಗುರಿಯನ್ನು ಭಾರತ 19.1 ಓವರ್‌ಗಳಲ್ಲಿ ತಲುಪಿತು. ಯುವರಾಜ್ ಸಿಂಗ್‌ ನಾಯಕತ್ವದ ಟೀಂ …

Read More »

ಗ್ಯಾರಂಟಿ ಯೋಜನೆʼಗಳಿಗೆ ʻSCP, TSPʼ ಅನುದಾನ ಬಳಸಿದ್ದು ನಿಜ : ಪಲ್ಲವಿ.ಜಿ

ಬೆಳಗಾವಿ : ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ ಸಿಪಿ, ಟಿಎಸ್‌ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಹೇಳಿದ್ದಾರೆ.   ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಜು.13) ನಡೆದ ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ …

Read More »