ಚಿತ್ರದುರ್ಗ: ಮುರುಘಾಮಠ ಪ್ರಾಂಗಣದ ಮೇಲ್ಬಾಗದಲ್ಲಿನ ದರ್ಬಾರ್ ಹಾಲ್ನಲ್ಲಿದ್ದ 22 ಕೆಜಿ ತೂಕದ 16 ಲಕ್ಷ ರೂ. ಮೌಲ್ಯದ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ. ಪುತ್ಥಳಿಯನ್ನು ಜು. 4ರಂದು ಕಡೆಯದಾಗಿ ನೋಡಿದ್ದ ಶ್ರೀಮಠದ ವಿಜಯದೇವರು ಕಳ್ಳತನ ಆಗಿರುವ ವಿಚಾರವನ್ನು 10ರಂದು ಮೊದಲು ಶ್ರೀ ಬಸವಪ್ರಭು ಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಅಂದು ಸಂಜೆ 7ಕ್ಕೆ ಬಾಗಿಲು ತೆರೆದು ನೋಡಿದರೆ, ಪುತ್ಥಳಿ ಇರಲಿಲ್ಲ. ಪರಿಶೀಲಿಸಿದಾಗ ಎಲ್ಲಿಯೂ ಕಾಣದ ಕಾರಣ ಕಳ್ಳತನ …
Read More »Monthly Archives: ಜುಲೈ 2024
ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ
ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವುಗಳನ್ನ ಜಾರಿಗೆ ತಂದು ನಿರ್ವಹಣೆ ಮಾಡುವುದು ಚುನಾವಣೆಗೂ ಮುಂಚೆ ಹೇಳಿದಷ್ಟು ಸುಲಭವಾಗಿಲ್ಲ. ಕಾಂಗ್ರೆಸ್ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಬಿದ್ದಿದೆ. ಇದನ್ನ ಹೀಗಾಗಲೇ ಸ್ವತಃ ಕಾಂಗ್ರೆಸ್ ನಾಯಕರೇ ಒಪ್ಪಿಕೊಂಡಿದ್ದಾರೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರೇ (Basavaraj Rayareddy) ಗ್ಯಾರಂಟಿ ಯೋಜನೆಯಿರುವುದರಿಂದ ಅಭಿವೃದ್ಧಿ …
Read More »NEP’ ಜಾರಿಗೆ ಸೂಚಿಸಲು ಕೋರಿ ಅರ್ಜಿ ಸಲ್ಲಿಕೆ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್ 1ಕ್ಕೆ ಮುಂದೂಡಿತು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ …
Read More »ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ
ಬೆಳಗಾವಿ : ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ** ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ, ತಂದೆ, ಡೆಂಗಿ ಜ್ವರದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರೇಯಾ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾಗಿದ್ದು, ಥೈಪಾಡ್ನಿಂದ ಬಳಲುತ್ತಿದ್ದಳು. ಈ ಕುರಿತು, ಡಿಹೆಚ್ಒ ಮಹೇಶ ಕೋಣಿ, ಜಿ ಬಿ ಏನ್ 7 …
Read More »ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಎಇಇ ಮಹಾದೇವ ಬನ್ನೂರರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯತ್ ಎಇಇ ಬನ್ನೂರರ ಮನೆಯು ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿದ್ದು, ದಾಳಿ ನಡೆಯಿತು. ದಾಳಿಯು ಹೊನಗಾ ಗ್ರಾಮದ ಫಾರ್ಮ್ಹೌಸ್, ಹಿಂಡಲಗಾ ಬಳಿಯ ಅಪಾರ್ಟ್ಮೆಂಟ್, ಮತ್ತು ಗೋಕಾಕದ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಜರುಗಿತು. …
Read More »132 ಕೋಟಿ ರೂ. GST ವಂಚನೆ
ಬೆಳಗಾವಿ : ನಕಲಿ ಫೆಡರಲ್ ಲಾಜಿಸ್ಟಿಕ್ಸ್ ಕಂಪನಿ ಸ್ಥಾಪಿಸಿ ತೆರಿಗೆ ವಂಚನೆಯಲ್ಲಿ ತೊಡಗಿದ್ದ ತೆರಿಗೆ ಸಲಹೆಗಾರ ನಕೀಬ್ ನಜೀಬ್ ಮುಲ್ಲಾ ಎಂಬಾತನನ್ನು ಜಿಎಸ್ಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೃತ್ತಿಯಲ್ಲಿ ತೆರಿಗೆ ಸಲಹೆಗಾರನಾಗಿದ್ದ ಆರೋಪಿ ನಕೀಬ್ ಮುಲ್ಲಾ ಎಂಬಾತ ನಕಲಿ ಫೆಡರಲ್ ಲಾಜಿಸ್ಟಿಕ್ಸ್ ಕಂಪನಿ ನಡೆಸುತ್ತಿದ್ದ. ಜೊತೆಗೆ ಅನೇಕ ಸಂಸ್ಥೆಗಳ ಐಟಿ ರಿಟರ್ನ್ಸ್ ಮತ್ತು ಇತರ ಜಿಎಸ್ಟಿ ಸಂಬಂಧಿತ ಸಮಸ್ಯೆಗಳ ಫೈಲಿಂಗ್ ನಿರ್ವಹಿಸುತ್ತಿದ್ದ. ನಕಲಿ ಇನ್ ವಾಯಿಸ್ ಸೃಷ್ಟಿಸಿ ತೆರಿಗೆ ವಂಚನೆ …
Read More »ವರ್ಗಾವಣೆ ಎಲ್ಲ ಸರ್ಕಾರದಲ್ಲೂ ದಂಧೆ: ರಾಯರಡ್ಡಿ
ಕೊಪ್ಪಳ: ‘ಅಧಿಕಾರಿಗಳ ವರ್ಗಾವಣೆ ಎಂಬುದು ಎಲ್ಲ ಸರ್ಕಾರಗಳಲ್ಲಿಯೂ ದಂಧೆಯೇ ಆಗಿದೆ’ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಧಿಕಾರಿಗಳು ತಮ್ಮ ವರ್ಗಾವಣೆಗೆ ಶಾಸಕರು, ಸಚಿವರ ಮೊರೆ ಹೋಗುತ್ತಿದ್ದು, ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ದಂಧೆ ನಡೆಯುತ್ತಿದೆ’ ಎಂದರು. ‘ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯಲ್ಲಿ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ …
Read More »ಗುರುಸಿದ್ಧದೇವ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ 17ರಂದು
ಬಾದಾಮಿ: ಶಿವಯೋಗಮಂದಿರ ಸಮೀಪದ ಮಲಪ್ರಭಾ ನದಿ ದಂಡೆಯ ಬಸವೇಶ್ವರ ಪುಣ್ಯಕ್ಷೇತ್ರದಲ್ಲಿ ಜುಲೈ 17ರಂದು ಬಂದಗದ್ದೆ, ಕೆಳದಿ ಸಂಸ್ಥಾನ ರಾಜಗುರು ಹಿರೇಮಠ ಮತ್ತು ಮಂಗಳೂರ ಮಠದ ಗುರುಸಿದ್ಧದೇವ ಶಿವಾಚಾರ್ಯರ 15ನೇ ಪುಣ್ಯಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಸಂಸ್ಥಾನ ಹಿರೇಮಠ ಬಂದಗದ್ದೆ, ಕೆಳದಿ ಮಂಗಳೂರು ಮಠದ ಮೃತ್ಯುಂಜಯ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಗುಳೇದಗುಡ್ಡ ಮುರುಘಾಮಠದ ಕಾಶಿನಾಥ ಸ್ವಾಮೀಜಿ ಷಟ್ ಸ್ಥಲ ಧ್ವಜಾರೋಹಣ ನೆರವೇರಿಸುವರು. ಲಿಂ. ಗುರುಸಿದ್ಧದೇವ …
Read More »ಕೋತಿ ಕಚ್ಚಿ 8 ಮಂದಿಗೆ ಗಾಯ
ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಇಳಕಲ್: ‘ಬಡವರಿಗೆ, ಕೂಲಿಕಾರರಿಗೆ ರಿಯಾಯ್ತಿ ದರದಲ್ಲಿ ಊಟ, ಉಪಹಾರ ನೀಡುವ ಇಂದಿರಾ ಕ್ಯಾಂಟಿನ್ ಹುನಗುಂದದಲ್ಲಿ ಮಂಜೂರಾಗಿದ್ದರೂ, ಹಿಂದಿನ ಸರ್ಕಾರ ಹಾಗೂ ಆಗಿನ ಶಾಸಕರು ದುರುದ್ದೇಶದಿಂದ ಆರಂಭಿಸಿರಲಿಲ್ಲ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದರು. ಅವರು ಮಂಗಳವಾರ ಇಲ್ಲಿಯ ಪೊಲೀಸ್ ಠಾಣೆಯ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಕೆಲವೇ ತಿಂಗಳುಗಳಲ್ಲಿ ಕ್ಯಾಂಟಿನ್ ಅರಂಭವಾಗಲಿದೆ. ಕೇವಲ ₹ 5 ಮತ್ತು …
Read More »