Breaking News

Monthly Archives: ಜುಲೈ 2024

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ …

Read More »

ಅಂದು ಕಾನ್‌ಸ್ಟೆಬಲ್, ಇಂದು ರಾಣೆಬೆನ್ನೂರು ಪೌರಾಯುಕ್ತ

ಹಾವೇರಿ: ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಫಕ್ಕೀರಪ್ಪ ಇ. ಇಂಗಳಗಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಇಂಗಳಗಿ ಅವರನ್ನು ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.   ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದ ಫಕ್ಕೀರಪ್ಪ, ಸ್ವಂತ ಊರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದಾರೆ. ನಂತರ, ಕುಂದಗೋಳ …

Read More »

ರಾಣೆಬೆನ್ನೂರು | ಯೂರಿಯಾ ಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ; ರೈತರ ಆಕ್ರೋಶ

ರಾಣೆಬೆನ್ನೂರು: ‘ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡಲು ಯೂರಿಯಾ ಗೊಬ್ಬರ ಅತ್ಯವಶ್ಯ. ಸರ್ಕಾರ ಯೂರಿಯಾ ಗೊಬ್ಬರ ಪೂರೈಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ನಗರದ ಆಗ್ರೋ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರ ₹266 ಇದ್ದರೂ, ವ್ಯಾಪಾರಸ್ಥರು ₹ 300 ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕೃಷಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ’ ಎಂದು ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಜಗದೀಶ ಕೆರೂಡಿ ಆರೋಪಿಸಿದ್ದಾರೆ. …

Read More »

ಮಹದಾಯಿ ಯೋಜನೆ ಜಾರಿಗೆ ಮನವಿ

ಹುಬ್ಬಳ್ಳಿ: ‘ಕೇಂದ್ರ ಸರ್ಕಾರವು ಮಹದಾಯಿ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ರೈತ ಹೋರಾಟಗಾರ ವೀರೇಶ ಸೊಬರದಮಠ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನಮಂತ್ರಿ, ರಾಷ್ಟ್ರಪತಿ, ವಿರೋಧ ಪಕ್ಷದ ನಾಯಕರ ಕಚೇರಿಗೆ, ರಾಜ್ಯದ 28 ಸಂಸದರಿಗೆ ಹಾಗೂ ದೆಹಲಿಯಲ್ಲಿ ಈಚೆಗೆ ಮನವಿ ಸಲ್ಲಿಸಲಾಗಿದೆ. ಈ ಯೋಜನೆ ಜಾರಿಗೆ ಕೇಂದ್ರ …

Read More »

ಹುಬ್ಬಳ್ಳಿ | ಪಾಲಿಕೆಯ ವ್ಯಾಯಾಮ ಶಾಲೆ ಕಟ್ಟಡ ಶಿಥಿಲ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಚೆನ್ನಪೇಟೆಯಲ್ಲಿನ ನಾರಾಯಣ ಸೋಪಾದಲ್ಲಿರುವ ಮಹಾನಗರ ಪಾಲಿಕೆಯ ವ್ಯಾಯಾಮ ಶಾಲೆ ಕಟ್ಟಡವು ಸಂಪೂರ್ಣವಾಗಿ ಶಿಥಿಲವಾಗಿದ್ದು, ಇಡೀ ಕಟ್ಟಡ ಕುಸಿಯುವ ಸ್ಥಿತಿಯಲ್ಲಿದೆ. ಅರವಿಂದ ನಗರದ ಸೇರಿದಂತೆ ಚೆನ್ನಪೇಟೆ, ನಾರಾಯಣ ಸೋಪಾ, ಪಾಂಡುರಂಗ ಕಾಲೊನಿಯ ಯುವಕರ ವ್ಯಾಯಾಮಕ್ಕೆ ಅನುಕೂಲವಾಗಲಿ ಎಂದು 40 ವರ್ಷಗಳ ಹಿಂದೆ 50X50 ಅಳತೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ವ್ಯಾಯಾಮ ಶಾಲೆ ಕಟ್ಟಡ ನಿರ್ಮಿಸಲಾಗಿತ್ತು. ಕಟ್ಟಡವು ಕ್ರಮೇಣ ಶಿಥಿಲ ಹಂತ ತಲುಪಿದಂತೆ, ನಿರ್ವಹಣೆ ಇಲ್ಲದೇ ಪಾಳು ಬಿದ್ದಿತು. …

Read More »

ಮಲಪ್ರಭಾ ನದಿ ದಡದಲ್ಲಿ ಮೊಸಳೆಗಳು

ಬೈಲಹೊಂಗಲ: ಸಮೀಪದ ಮಾಟೊಳ್ಳಿ, ಮಲ್ಲೂರ, ಹೊಸೂರ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಬೃಹತ್ ಗಾತ್ರದ ಮೊಸಳೆಗಳು ಶನಿವಾರ ಪ್ರತ್ಯಕ್ಷವಾಗಿವೆ. ಖಾನಾಪೂರ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲಪ್ರಭಾ ನದಿಯ ಒಡಲು ದಿನೇ, ದಿನೇ ಹೆಚ್ಚುತ್ತಿದೆ. ಹರಿಯುವ ನದಿಯ ನೀರಿನಲ್ಲಿ ಸರಾಗ ಹರಿದು ಬರುತ್ತಿರುವ ಬೃಹತ್ ಗಾತ್ರದ ಮೊಸಳೆಗಳು ನದಿ ಪಾತ್ರದ ಗ್ರಾಮಸ್ಥರಲ್ಲಿ, ರೈತರಲ್ಲಿ ಆತಂಕ ಉಂಟು ಮಾಡಿವೆ. ನದಿಯ ದಂಡೆಯ ಮೇಲೆ ಆಗಾಗ ಕಾಣಿಸಿಕೊಳ್ಳುತ್ತಿರುವ ಬೃಹತ್ ಗಾತ್ರದ ಮೊಸಳೆಗಳನ್ನು ಯುವಕರು …

Read More »

ಬೆಳಗಾವಿ | ಮನೆಗಳು ಜಲಾವೃತ: ಕಾಳಜಿ ಕೇಂದಲ್ಲಿ ಆಶ್ರಯ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಶನಿವಾರ ಮಳೆ ಅಬ್ಬರ ತುಸು ತಗ್ಗಿದೆ. ಅಣೆಕಟ್ಟೆಗಳಿಂದ ನಿರಂತರ ನೀರು ಹರಿಸುತ್ತಿರುವ ಕಾರಣ, ಜಿಲ್ಲೆಯ 41 ಸೇತುವೆಗಳು ಇನ್ನೂ ನೀರಿನಲ್ಲಿ ಮುಳುಗಿವೆ. ಅಂದಾಜು 700ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲ್ಲೂಕಿನ ಹೆಬ್ಬಾಳ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಮೇಲೆ ಅಪಾರ ಪ್ರಮಾಣ ನೀರು ಹರಿಯಿತು. ಇದರಿಂದ ಕೆಲ ಸಮಯ ಸಂಚಾರ ಬಂದ್ ಆಯಿತು. ಹೆದ್ದಾರಿ ಮೇಲೆಯೇ ಮಣ್ಣು-ಕಲ್ಲು ಸುರಿದು ಅದರ ಮೇಲೆ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕೊಡೆ ಹಿಡಿದು ಕೆಲಸ

ಹಾವೇರಿ: ಇಲ್ಲಿಯ ತಹಶೀಲ್ದಾರ್‌ ಕಚೇರಿಯು ಹಲವು ವರ್ಷಗಳಿಂದ ಶಿಥಿಲ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿದೆ. ಕಂದಾಯ ದಾಖಲೆಗಳು ಒದ್ದೆಯಾಗುವ ಭೀತಿ ಒಂದೆಡೆಯಿದ್ದರೆ, ಮತ್ತೊಂದೆಡೆ ಬಕೆಟ್ ಇರಿಸಿ ನೀರು ಸಂಗ್ರಹಿಸಿ ಚೆಲ್ಲಬೇಕಿದೆ. ಕೊಡೆ ಹಿಡಿದು ಕೆಲಸ ಮಾಡಬೇಕಿದೆ. ‘ಪ್ರತಿ ವರ್ಷ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಕಚೇರಿ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಸೋರುವಕಡೆಯಲ್ಲ ಬಕೆಟ್‌ ಇಡುತ್ತೇವೆ. ಕಂದಾಯ ದಾಖಲೆಗಳು ಒದ್ದೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ನೌಕರರು …

Read More »

ಗದಗ: ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಜಿಲ್ಲಾ ಪ್ರವಾಸ

ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.   ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ …

Read More »

ನವಿಲುತೀರ್ಥ ಭರ್ತಿಗೆ ಕಾಲ ಸನ್ನಿಹಿತ

ಸವದತ್ತಿ: ಪಶ್ಚಿಮ ಘಟ್ಟದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಯ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನವಿಲುತೀರ್ಥ (ಇಂದಿರಾ) ಅಣೆಕಟ್ಟು 10ನೇ ಬಾರಿ ಭರ್ತಿಯಾಗುವ ಕಾಲ ಸನ್ನಿಹಿತವಾಗಿದೆ. ಇದರಿಂದ ಆಣೆಕಟ್ಟೆ ಕೆಳಭಾಗದ ಮತ್ತು ನದಿ ಪಾತ್ರದ ಜನತೆಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ. ನವಿಲುತೀರ್ಥ ಅಣೆಕಟ್ಟೆ ಗರಿಷ್ಠ ಮಟ್ಟ 2079.50 ಅಡಿ. ಇದೀಗ 2069.60 ಅಡಿ ನೀರು ಸಂಗ್ರಹವಾಗಿದೆ. ಸದ್ಯ 21 ಸಾವಿರ ಕ್ಯುಸೆಕ್‌ಗೂ ಅಧಿಕ ಒಳಹರಿವಿದೆ. 10 ಸಾವಿರ ಕ್ಯುಸೆಕ್‌ನಷ್ಟು ನೀರನ್ನು …

Read More »