ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗುತ್ತಿದ್ದು, ಪ್ರಮುಖ ಐದು ರಸ್ತೆಗಳ ಮೇಲೆ ನದಿಯ ನೀರು ಹರಿಯುತ್ತಿದ್ದರಿಂದ ಸಂಚಾರ ಬಂದ್ ಮಾಡಲಾಗಿದೆ. ತಾಲ್ಲೂಕಿನ ಅಥಣಿ-ಕಾತ್ರಾಳ, ಉಗಾರ ಬಿ.ಕೆ. ಕುಸುನಾಳ, ಉಗಾರ ಬಿ.ಕೆ- ಶಿರಗುಪ್ಪಿ,ಕಾತ್ರಾಳ-ಬಣಜವಾಡ, ಮೋಳವಾಡ-ಇಂಗಳಿ ರಸ್ತೆಗಳು ಜಲಾವೃತ ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾಗವಾಡ ಪಿಎಸ್ಐ ಎಂ.ಬಿ. ಬಿರಾದಾರ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿ ಸಂಚಾರ ಬಂದ್ ಮಾಡಿದ್ದಾರೆ. ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಕಾತ್ರಾಳ, ಐನಾಪುರ, …
Read More »Monthly Archives: ಜುಲೈ 2024
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹3,252 ಕೋಟಿ ನಿವ್ವಳ ಲಾಭ
ನವದೆಹಲಿ: 2024-25ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ), ₹3,252 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಎರಡು ಪಟ್ಟು ಏರಿಕೆಯಾಗಿದೆ. 2023-24ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹1,255 ಕೋಟಿ ಲಾಭಗಳಿಸಲಾಗಿತ್ತು. ವಸೂಲಾಗದ ಸಾಲದ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೊತೆಗೆ, ಬಡ್ಡಿ ವರಮಾನದಲ್ಲಿ ಏರಿಕೆಯಾಗಿದೆ. ಹಾಗಾಗಿ, ಈ ತ್ರೈಮಾಸಿಕದಲ್ಲಿ ಲಾಭ ಹೆಚ್ಚಳವಾಗಿದೆ ಎಂದು ಬ್ಯಾಂಕ್, ಶನಿವಾರ ತಿಳಿಸಿದೆ. …
Read More »ಮಾರುತಿ ಸುಜುಕಿಗೆ 779 ಕೋಟಿ ಐ.ಟಿ ಇಲಾಖೆ ನೋಟಿಸ್
ನವದೆಹಲಿ: 2019-20ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ₹779 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ಗೆ, ಆದಾಯ ತೆರಿಗೆ ಇಲಾಖೆಯು ಷೋಕಾಸ್ ನೋಟಿಸ್ ನೀಡಿದೆ. ‘ಈ ಮೊತ್ತದಲ್ಲಿ ಬಡ್ಡಿಯೂ ಸೇರಿದೆ. ತೆರಿಗೆ ಪಾವತಿ ಬಾಕಿ ಸಂಬಂಧ ಕಂಪನಿ ವಿರುದ್ಧ ದಂಡಾರ್ಹ ಪ್ರಕ್ರಿಯೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಈ ನೋಟಿಸ್ ನೀಡಲಾಗಿದೆ’ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.
Read More »ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ. ಆರೋಪಿ ಕಾಲಿಗೆ ಗುಂಡೇಟು
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ರಮೇಶ ಭವನ ಬಳಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಮುಂಬೈ ಮೂಲದ ಫರ್ಹಾನ್ ಶೇಖ್ ಎನ್ನಲಾಗಿದೆ. ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್ನಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ …
Read More »ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ. ಬಾಲಕಿಯು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಎಂಬ ಬಾಲಕಿಯನ್ನು ಅವಳ ಪಾಲಕರು ಮೊದಲು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಂಕಿತ …
Read More »ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಆ ಪಕ್ಷದ ಹಿರಿಯ ನಾಯಕರ ಅಸಮಾಧಾನದ ಸರಣಿ ಮುಂದುವರಿದಿದ್ದು ಇದೀಗ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮತ್ತು ಪಕ್ಷದ ವಿಧಾನ ಮಂಡಲ ಕಾರ್ಯತಂತ್ರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯದ ಹತ್ತು ಹಲವು ಸಮಸ್ಯೆಗಳ ಬಗ್ಗೆ ವಿಧಾನ …
Read More »ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ತೆಗೆದುಕೊಂಡಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದುವರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್ ಅವರ ಪತಿ ರಜನೀಶ್ ಗೋಯಲ್ ಜುಲೈ 31ರಂದು ಸೇವಾ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯಲ್ಲಿ ರಜನೀಶ್ ಗೋಯಲ್ …
Read More »10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
ಹುಬ್ಬಳ್ಳಿ/ಬೆಂಗಳೂರು: ನಿರಂತರ ಮಳೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿ ಕಾವೇರಿ ಕೊಳ್ಳದ 11 ಜಿಲ್ಲೆಗಳಲ್ಲಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಸೇತುವೆಗಳು ಮುಳುಗಡೆಯಾಗಿದೆ. ನೂರಾರು ಗ್ರಾಮಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಆಯಾ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ನೂರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜಲಾಶಯಗಳ ಮೂಲಕ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಗೊಳಿಸುತ್ತಿರುವುದರಿಂದ …
Read More »ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ ಲಾರಿ ಚಾಲಕ ಅರ್ಜುನ ಸೇರಿದಂತೆ ನಾಪತ್ತೆಯಾದವರ ಪತ್ತೆಗೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ ಕಾರವಾರ/ಅಂಕೋಲಾ: ಜುಲೈ 16 ರಂದು ಉತ್ತರಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಲಾರಿ ಸಮೇತ ಚಾಲಕ ಅರ್ಜುನ್ ಸೇರಿದಂತೆ ಮೂವರು ನಾಪತ್ತೆಯಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದಿದ್ದು ಇನ್ನೂ ಹುಡುಕಾಟ ಮುಂದುವರೆದಿದೆ, ಅದರಂತೆ ಇಂದು ಮಲ್ಪೆ ಈಶ್ವರ್ ತಂಡ ಶಿರೂರಿಗೆ ಬಂದಿದ್ದು ನಾಪತ್ತೆಯಾದ ಕಾರ್ಯಾಚರಣೆ ನಡೆಸಲಿದ್ದಾರೆ …
Read More »ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ …
Read More »