Breaking News

Daily Archives: ಆಗಷ್ಟ್ 3, 2024

ವೇಗದ ಮಿತಿಮೀರಿದ ಚಾಲನೆ: ಮೊದಲ ದಿನವೇ 770 ಚಾಲಕರಿಗೆ ದಂಡ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ ದಂಡ ವಿಧಿಸಲಾಗಿದೆ. ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿಗದಿತ ವೇಗದ ಮಿತಿ ಮೀರಿ ವಾಹನ ಚಾಲನೆ ಮಾಡಿದ 33 ವಾಹನ ಚಾಲಕರ ವಿರುದ್ಧ ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉಳಿದಂತೆ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು …

Read More »

ಮನೆ ಕೊಚ್ಚಿ ಹೋದರೂ ಬದುಕುಳಿದ ಹಸುಗೂಸು, 6ರ ವಯಸ್ಸಿನ ಕಂದಮ್ಮ

ವಯನಾಡ್‌: ಪೊಟ್ಟಮಾಲ್‌ನಲ್ಲಿ ಒಂದೇ ಕುಟುಂಬದ 6 ಮಂದಿ ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, ಇಡೀ ಮನೆ ನೀರು ಪಾಲಾಗಿದೆ. ಆದರೆ, ಅದೇ ಮನೆಯ 40 ದಿನದ ಹಸುಗೂಸು ಅನರಾ ಮತ್ತು 6 ವರ್ಷದ ಕಂದಮ್ಮ ಮೊಹಮ್ಮದ್‌ ಹಯನ್‌ ಮಾತ್ರ ಮೃತ್ಯುಪಾಶದಿಂದ ಪಾರಾಗಿ ದ್ದಾರೆ. ಪ್ರವಾಹದ ನೀರು ಮನೆ ಆವರಿಸುತ್ತಿದ್ದಂತೆಯೇ ಮಕ್ಕಳ ತಾಯಿ ಇಬ್ಬರೂ ಮಕ್ಕಳನ್ನು ಕೈಯಲ್ಲಿ ಹಿಡಿದು ಪಕ್ಕದ ಮನೆಯ ಮಹಡಿ ತಲುಪುವಲ್ಲಿ ಸಫ‌ಲರಾಗಿದ್ದಾರೆ. ಅನರಾಳನ್ನು ಅಲ್ಲಿ ರಕ್ಷಿಸಲಾಗಿದೆ. ಇತ್ತ ಹಯನ್‌ ತಾಯಿಯ ಕೈ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 167.73 ಕೋ.ರೂ ನಷ್ಟ: ದಿನೇಶ್‌ ಗುಂಡೂರಾವ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಕಾರಣದಿಂದ ಇಲ್ಲಿಯ ವರೆಗೆ ಒಟ್ಟು 167.73 ಕೋ.ರೂ. ನಷ್ಟವಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಬಳಕೆಗಾಗಿ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 14.22 ಕೋ.ರೂ. ಹಾಗೂ ತಾಲೂಕುಗಳಲ್ಲಿ ಒಟ್ಟು 4.14 ಕೋ.ರೂ. ಲಭ್ಯವಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಹಾಗೂ ನೆರೆಹಾನಿಯಿಂದ ತತ್ತರಿಸಿದ ವಿವಿಧ ಪ್ರದೇಶ ಗಳಿಗೆ ಶುಕ್ರವಾರ ಭೇಟಿ ನೀಡಿ …

Read More »

ಬಾಲ್ಯದಲ್ಲೇ ಅಣ್ಣ ತಮ್ಮಂದಿರ ಜತೆ ಉಂಡು ಬಿಡಿ. ಮುಂದೆ ಆ ಅವಕಾಶ ಮತ್ತೆ ಸಿಗಲಿಕ್ಕಿಲ್ಲ.

ಬಾಲ್ಯದಲ್ಲೇ ಅಣ್ಣ ತಮ್ಮಂದಿರ ಜತೆ ಉಂಡು ಬಿಡಿ. ಮುಂದೆ ಆ ಅವಕಾಶ ಮತ್ತೆ ಸಿಗಲಿಕ್ಕಿಲ್ಲ. ಹೆಂಡತಿ ಬರುವ ಮುಂಚೆಯೇ ತಾಯಿಯ ಸುಖ ಅನುಭವಿಸಿ ಬಿಡಿ. ಏಕೆಂದರೆ ಮುಂದೆ ಅದು ದೊರೆಯಲಿಕ್ಕಿಲ್ಲ. ಮದುವೆಯಲ್ಲೇ ಸತಿ ಸೌಂದರ್ಯವನ್ನು ನೋಡಿ ಬಿಡಿ. ಏಕೆಂದರೆ ಮುಂದೆ ಅದು ಉಳಿಯುವ ಗ್ಯಾರಂಟಿ ಇಲ್ಲ. ಚಿಕ್ಕವರಿದ್ದಾಗಲೇ ಮಕ್ಕಳ ಜತೆ ಮಾತಾಡಿ ಬಿಡಿ. ಏಕೆಂದರೆ ಮುಂದೆ ನಿಮ್ಮೊಂದಿಗೆ ಮಾತನಾಡಲು ಅವರಿಗೆ ಸಮಯ ಇರಲಿಕ್ಕಿಲ್ಲ. ಈ ರೀತಿ ಆಗುತ್ತಿರುವುದಕ್ಕೆ ಕಾರಣ ಕಾಲ …

Read More »

ಚಂದ್ರಶೇಖರ​ ಗುರೂಜಿ ಕೊಲೆ ಕೇಸ್‌: ಆರೋಪಿಯ ಜಾಮೀನು ಅರ್ಜಿ ವಜಾ

ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮಹಾಂತೇಶ ಶಿರೂರು ಜಾಮೀನು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರು ಆರೋಪಿಯ ಅರ್ಜಿ ವಜಾಗೊಳಿಸಿ ಅದೇಶಿಸಿದ್ದಾರೆ.ಹಳೆಯ ದ್ವೇಷದಿಂದ ಅರ್ಜಿದಾರ ಆರೋಪಿ ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿರುವ ರೀತಿ ನೋಡಿದರೆ, ಗುರೂಜಿ ಮೇಲೆ ಆರೋಪಿ …

Read More »