ಯಮಕನಮರಡಿ: ಮತಕ್ಷೇತ್ರದ ವ್ಯಾಪ್ತಿಗೆ ಬರುವ, ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರ ಹೆಬ್ಬಾಳದಲ್ಲಿ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿರು. ’40 ದಿನಗಳಿಂದ ವಿಪರೀತ ಮಳೆಯಾದರೂ ಗ್ರಾಮಕ್ಕೆ ಕುಡಿಯುವ ನೀರಿಲ್ಲ. ಹಿರಣ್ಯಕೇಶಿ ನದಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಮತ್ತು ಹಿಡಕಲ್ ಜಲಾಶಯದಿಂದ 14ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ನೀರಿನ ಸಮಸ್ಯೆ ಇದೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮಕ್ಕೆ …
Read More »Daily Archives: ಆಗಷ್ಟ್ 7, 2024
ನಕಲಿ ದಾಖಲೆ ಸೃಷ್ಠಿಸಿ ಅರ್ಜಿ ಸಲ್ಲಿಕೆ: ದೂರು ದಾಖಲು
ಚಿಕ್ಕೋಡಿ: ಪರಿಶಿಷ್ಟ ಜಾತಿ ಗುತ್ತಿಗೆದಾರನೆಂದು ನಕಲಿ ದಾಖಲೆ ಸೃಷ್ಟಿಸಿ ಈ-ಪ್ರೋಕ್ ವೆಬ್ಸೈಟ್ ಮೂಲಕ ಟೆಂಡರ್ ಹಾಕಿದ್ದ ಧಾರವಾಡ ಮೂಲದ ಬಾಲಕೃಷ್ಣ ಬಸವರಾಜ ಚೊಳಚಗುಡ್ಡ ಎಂಬುವರ ವಿರುದ್ಧ ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪಾಂಡುರಂಗರಾವ್ ಆ. 4 ರಂದು ನೀಡಿದ ದೂರಿನ ಮೇರೆಗೆ ಚಿಕ್ಕೋಡಿ ಪಿಎಸ್ಐ ಬಸಗೌಡ ನೇರ್ಲಿ ಪ್ರಕರಣ ದಾಖಲಿಸಿದ್ದಾರೆ. ಚಿಕ್ಕೋಡಿ ವಿಭಾಗ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ …
Read More »ಗಾಂಜಾ ವಶ: ಮೂವರ ಬಂಧನ
ಕಾಗವಾಡ: ಪಟ್ಟಣದಿಂದ ಚಿತ್ರದುರ್ಗದ ಕಡೆಗೆ ಹೊರಟಿದ್ದ ಕಾರಿನಲ್ಲಿದ್ದ 3 ಕೆಜಿ 75 ಗ್ರಾಂ ಗಾಂಜಾ, ಕಾರನ್ನು ಇಲ್ಲಿನ ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪಟ್ಟಣದ ಚನ್ನಮ್ಮಾ ವೃತ್ತದ ಸಮೀಪ ಸೋಮವಾರ ಪೊಲೀಸರು ಕಾರ್ಯಾಚರಣೆ ನಡೆಸಿದರು. ಚಿತ್ರದುರ್ಗ ನಗರದ ನಿವಾಸಿಗಳಾದ ಫೈರೋಜ್ ನುಸರತ್, ಮಹ್ಮದಕಲಂದರ ಇಮ್ತಿಯಾಜ್ಶರೀಫ್, ತಂಜೀಂ ನೌಶಾಧ ಆರೋಪಿಗಳು. ಪಿಎಸ್ಐ ಎಂ.ಬಿ. ಬಿರಾದಾರ, ಪಿಎಸ್ಐ (ಅಪರಾಧ) ಆರ್.ಎಚ್. ಬಗಲಿ ನೇತೃತ್ವದಲ್ಲಿ ಕಾಗವಾಡ …
Read More »ಚನ್ನಮ್ಮನ ಕಿತ್ತೂರು: ನಿಂಗಾಪುರಕ್ಕೆ ಬಂತು ದೋಣಿ…
ಚನ್ನಮ್ಮನ ಕಿತ್ತೂರು: ಹುಲಿಕೆರೆ ಹಿನ್ನೀರಿನಿಂದಾಗಿ ಟ್ಯೂಬ್ ತೆಪ್ಪದಲ್ಲಿ ಅಪಾಯಕಾರಿಯಾಗಿ ಸಂಚರಿಸುತ್ತಿದ್ದ ತಾಲ್ಲೂಕಿನ ಕುಲವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಂಗಾಪುರದ ಮಕ್ಕಳು ಮತ್ತು ನಾಗರಿಕರ ದಶಕಗಳ ಸಮಸ್ಯೆಗೆ ಮುಕ್ತಿ ಸಿಕ್ಕಂತಾಗಿದೆ. ಈ ಗ್ರಾಮಸ್ಥರ ಸಮಸ್ಯೆ ಮೇಲೆ ಬೆಳಕು ಚೆಲ್ಲಲು ‘ಪ್ರಜಾವಾಣಿ’ ಆ.6ರ ಸಂಚಿಕೆಯಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಪಯಣ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ, ಆ ಊರಿಗೆ ಫೈಬರ್ ದೋಣಿಯ ವ್ಯವಸ್ಥೆ ಮಾಡಿತು. ಮಂಗಳವಾರ ಸಂಜೆ ತಾಲ್ಲೂಕು ಆಡಳಿತ ಸೌಧಕ್ಕೆ …
Read More »ಮಳೆ ಹಾನಿ | ಸರ್ಕಾರಕ್ಕೆ ವರದಿ ನೀಡಿ: ಮಹಾಂತೇಶ ಕೌಜಲಗಿ
ಬೈಲಹೊಂಗಲ: ‘ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಪಟ್ಟ ಪಿಡಿಒ, ಗ್ರಾಮಲೆಕ್ಕಾಧಿಕಾರಿ ಮತ್ತು ನೋಡೆಲ್ ಅಧಿಕಾರಿಗಳು ತಕ್ಷಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದ ಹಾನಿಗೊಳಗಾದ ಸ್ಥಳಗಳ ಪರಿಶೀಲಿಸಿ ಬಿದ್ದ ಮನೆ, ಶಾಲೆ, ಅಂಗನವಾಡಿ, ಬೆಳೆ ಹಾನಿ, ಕುರಿತು ಇದುವರೆಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ …
Read More »ಪಡಿತರಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ-ಯಾವೆಲ್ಲಾ ದಾಖಲೆಗಳು ಬೇಕು?-ಇಲ್ಲಿದೆ ಮಾಹಿತಿ
ಪಡಿತರಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ-ಯಾವೆಲ್ಲಾ ದಾಖಲೆಗಳು ಬೇಕು?-ಇಲ್ಲಿದೆ ಮಾಹಿತಿ ಲೋಕಾಭೆ ಚುನಾವಣೆ ಮುಗಿದ ಬಳಿಕ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಇದೀಗ ಈ ದಿನಾಂಕವನ್ನು ಆಗಸ್ಟ್ 10ರವರೆಗೆ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಪಡಿತರ ಚೀಟಿ ತಿದ್ದುಪಡಿಗೆ ಯಾವೆಲ್ಲ ದಾಖಲೆ ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಸಮಯದ ವಿವರ: ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕುವುದಕ್ಕೆ …
Read More »ಮುಡಾ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಡಿನೋಟಿಫಿಕೇಷನ್ ಉರುಳು: ರಾಜೀನಾಮೆಗೆ ಹೆಚ್ಚಿದ ಒತ್ತಡ
ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಷನ್ ದೂರು ದಾಖಲಾಗಿದೆ. ಮುಡಾದಂತೆ ತಮ್ಮ ಪ್ರಭಾವ ಬಳಸಿ ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನ ಡಿನೋಟಿಫೈ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ.. ಈ ಸಂಬಂಧ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿ, ಮೈಸೂರು ಚಲೋ ಪಾದಯಾತ್ರೆ ಚಾಮುಂಡಿ ತವರಿಗೆ ತಲುಪುವ ಮುನ್ನಾವೇ ಸಿದ್ದರಾಮಯ್ಯ ಅವರು ಅನಾಚಾರಗಳು ಒಂದೊಂದೆ …
Read More »ಅವ್ಯವಹಾರ ಬಿಚ್ಚಿಡಬೇಕೇ? ವಿಜಯೇಂದ್ರಗೆ ಡಿಕೆಶಿ ಸವಾಲು
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಲಕ್ಷ್ಮೀ ವಿಲಾಸ್ ಬ್ಯಾಂಕ್ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದು ಅದರ ಬಗ್ಗೆ ಮಾಹಿತಿ ಬಿಚ್ಚಿಡಬೇಕೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಮದ್ದೂರಿನ ಜನಾಂದೋಲನ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ವಾಗ್ಧಾಳಿ ಮುಂದುವರಿಸಿದ ಅವರು, “ವಿಜಯೇಂದ್ರ, ನಿನ್ನ ತಂದೆ ನಾಲ್ಕು ಬಾರಿ ಸಿಎಂ ಆಗಿ ರಾಜೀನಾಮೆ ನೀಡಿದ್ದು ಯಾಕೆ? ಸುಪ್ರೀಂಕೋರ್ಟ್ ಏನು ಹೇಳಿದೆ? ನೀನು ದುಬಾೖಗೆ ವಿಶೇಷ ವಿಮಾನದಲ್ಲಿ ಹೋಗಿ …
Read More »ಪೂರ್ವ ದಿಕ್ಕಿನಿಂದ ಶತ್ರುಬಾಧೆ,ಪಂಚಮ ಶನಿಯ ಪ್ರಭಾವ
ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ಯಶಸ್ಸು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ. ನೂತನ ವಾಹನ ಖರೀದಿಗೆ ಚಿಂತನೆ. ಮಿಥುನ: ದಿಟ್ಟ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ …
Read More »ರಾಜಕಾರಣಕ್ಕೆ: ಪ್ರತಾಪ್ ಸಿಂಹ
ಬೆಂಗಳೂರು: ಕೊಡಗು- ಮೈಸೂರು ಸಂಸದ ರಾಗಿದ್ದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ದಿನ ಗಳಲ್ಲಿ ಅಧಿಕೃತವಾಗಿ ವಿಧಾನಸಭೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. “ಉದಯವಾಣಿ’ಯ “ನೇರಾನೇರ’ ಸಂದರ್ಶನದ ವೇಳೆ ಈ ಕುರಿತು ಮುಕ್ತವಾಗಿ ಮಾತ ನಾಡಿರುವ ಪ್ರತಾಪ್, “ನಾನೀಗ ಸದ್ಯಕ್ಕೆ ವಿಧಾನಸೌಧದಲ್ಲಿ ಇಲ್ಲದಿರಬಹುದು. ಆದರೆ ರಾಜ್ಯ ರಾಜ ಕಾರಣದಲ್ಲೇ ಇದ್ದೇನೆ’ ಎಂದಿದ್ದಾರೆ. “ಇತ್ತೀಚೆಗೆ ರಾಜ್ಯದ ವಿಷಯಗಳ ಬಗ್ಗೆ ತಾರ್ಕಿಕವಾಗಿ ಹಾಗೂ ಪ್ರಬಲವಾಗಿ ಮಾತ ನಾಡುತ್ತಿದ್ದೇನೆ. ಮೊದಲು ರಾಜ್ಯದ ಬಗ್ಗೆ ನಾನು ಮಾತನಾಡುತ್ತಿರಲಿಲ್ಲ. ಈಗಾಗಲೇ ನಾನು …
Read More »