ಹೊನ್ನಾವರ: ತಾಲ್ಲೂಕಿನ ನಗರಬಸ್ತಿಕೇರಿ ಗ್ರಾಮದ ಕುಂಟೋಡಿಯಲ್ಲಿ ಶನಿವಾರ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಕುದ್ರಗಿಯ ಅಕ್ಷತಾ ಮಂಜುನಾಥ ನಾಯ್ಕ(26) ಮೃತರು. ‘ಅನಾರೋಗ್ಯಕ್ಕೊಳಗಾಗಿದ್ದ ಸಹೋದರನ್ನು ನೋಡಿಕೊಳ್ಳಲು 15 ದಿನದ ಹಿಂದೆ ಅಕ್ಷತಾ ತವರು ಮನೆ ಕುದ್ರಿಗೆ ಬಂದಿದ್ದಳು.ಮನೆಯ ಸಮೀಪ ಬಾವಿಯಲ್ಲಿ ಕಂಡುಬಂದ ಹಾವೊಂದನ್ನು ನೋಡಲು ಬಾವಿಯ ಕಟ್ಟೆಯ ಮೇಲೆ ಕೈಯೂರಿ ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಜಾರಿ ತಲೆಕೆಳಗಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ’ ಎಂದು ಅವರ ಅಕ್ಷತಾ ತಾಯಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. …
Read More »Daily Archives: ಆಗಷ್ಟ್ 11, 2024
ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ₹35 ಲಕ್ಷ ವಂಚನೆ
ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ವ್ಯಕ್ತಿಯೊಬ್ಬನಿಗೆ ಶಿರಸಿ ಮೂಲದ ಮೂವರು ₹35 ಲಕ್ಷ ವಂಚನೆ ಮಾಡಿದ ಕುರಿತು ಶನಿವಾರ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್ ಅಬ್ದುಲ್ ಗಫಾರ್ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ಆರೋಪಿಗಳಾಗಿದ್ದಾರೆ. ಈ ಮೂವರು ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ …
Read More »ಬೇಲೂರು: ವಯನಾಡಿಗೆ ಅಗತ್ಯ ವಸ್ತುಗಳ ಪೂರೈಕೆ
ಬೇಲೂರು: ಪ್ರಕೃತಿ ವಿಕೋಪಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕೇರಳದ ವಯನಾಡಿನ ಜನತೆಗೆ ಇಲ್ಲಿನ 24*7 ಸೇವಾತಂಡ ಹಾಗೂ ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ ವತಿಯಿಂದ, ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ ಅಗತ್ಯ ವಸ್ತುಗಳನ್ನು ಕೇರಳಕ್ಕೆ ವಾಹನಗಳಲ್ಲಿ ಕಳುಹಿಸಲು ತಹಶೀಲ್ದಾರ್ ಎಂ.ಮಮತಾ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಮಮತಾ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ನಲುಗಿರುವ ಕೇರಳ ರಾಜ್ಯದ ವಾಯನಾಡಿಗೆ ಅಗತ್ಯ ವಸ್ತುಗಳನ್ನು ಕಳುಹಿಸುತ್ತಿರುವುದು ಶ್ಲಾಘನೀಯವಾಗಿದೆ. ಪಕ್ಕದ ರಾಜ್ಯದವರು ಸಂಕಷ್ಟದಲ್ಲಿದ್ದಾಗ ಅವರಿಗೆ ನೆರವಾಗುವುದು …
Read More »ಬಾಲಕಿಯರ ಮೆಟ್ರಿಕ್ ನಂತರದ ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಯಾವಾಗ?
ಚಿಕ್ಕೋಡಿ: ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಗಿದು ಒಂದು ವರ್ಷ ಕಳೆದಿದೆ. ಆದರೆ, ಅದಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 1997ರಲ್ಲಿ ಚಿಕ್ಕೋಡಿಗೆ ಈ ವಸತಿ ನಿಲಯ ಮಂಜೂರಾಯಿತು. ಅಂದಿನಿಂದಲೂ ಪಟ್ಟಣದಲ್ಲಿ ಬೇರೆ ಬೇರೆ ಬಾಡಿಗೆ ಕಟ್ಟಡಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಅಲ್ಲಿ ದಾಖಲಾಗುವ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಹಾಸ್ಟೆಲ್ನಿಂದ ಕಾಲೇಜಿಗೆ ತೆರಳಲು ಸರಿಯಾಗಿ ಬಸ್ …
Read More »ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಎಚ್ಡಿಕೆ
ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು. ಈ ಕುರಿತ ಚಿತ್ರಗಳನ್ನು ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ …
Read More »ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!
ವಿಜಯವಾಡ: ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಮನ್ನಣೆ ನೀಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು. ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ …
Read More »HMT ವಶದಲ್ಲಿರುವ ₹10 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಮರುವಶಕ್ಕೆ ಖಂಡ್ರೆ ಸೂಚನೆ
ಬೆಂಗಳೂರು: ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ. 1 ಮತ್ತು 2ರಲ್ಲಿ ₹ 10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಮರಳಿ ಪಡೆಯಲು ಕ್ರಮ ವಹಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಟಿಪ್ಪಣಿ ಕಳುಹಿಸಿರುವ ಸಚಿವರು, ‘ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ …
Read More »‘KSRTC’ಗೆ ಮತ್ತೊಂದು ಗರಿಮೆ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಈಗಾಗಲೇ ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿರುವಂತ ನಿಗಮಕ್ಕೆ, ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ 2024 ಅನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ನಿಗಮದವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024 …
Read More »‘ಕರ್ನಾಟಕ’ದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ‘CCA ಕಾಯ್ದೆ’ಯಡಿ ‘ಭಾರತೀಯ ಪೌರತ್ವ’
ರಾಯಚೂರು: ಕರ್ನಾಟಕದಲ್ಲಿ ವಾಸಿಸುತ್ತಿದ್ದಂತ ಐವರು ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಪ್ ಗಳಲ್ಲಿ ಐವರು ಬಾಂಗ್ಲಾ ನಿರಾಶ್ರಿತರು ವಾಸಿಸುತ್ತಿದ್ದರು. ಅವರಿಗೆ ಸಿಎಎ ಅಡಿಯಲ್ಲಿ ಈಗ ಭಾರತೀಯ ಪೌರತ್ವ ದೊರೆತಿದೆ. ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಗ್ ನ ನಿವಾಸಿಗಳಾದಂತ ರಾಮಕೃಷ್ಣನ್ ಅಭಿಕರಿ, ಸುಕುಮಾರ, ಮೊಂಡಲ್, ಬಿ.ಪ್ರಸಾದ ಗೋಲ್ಡರ್, ಜಯಂತ್ ಮೊಂಡಲ್ ಹಾಗೂ ಅದ್ವಿತ …
Read More »ಚಿಕ್ಕಣ್ಣಗೆ ಶುರುವಾಯ್ತು ಸಂಕಷ್ಟ!
ದರ್ಶನ್ ಪ್ರಕರಣದಲ್ಲಿ ನಟ ಚಿಕ್ಕಣ್ಣ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಟ ಚಿಕ್ಕಣ್ಣ ಅವರ ಹೇಳಿಕೆಯೇ ಈಗ ದರ್ಶನ್ಗೆ ಕಂಟಕವಾಗಿದ್ದು ಚಿಕ್ಕಣ್ಣ ಅವರಿಗೆ ತಲೆನೋವಾಗಿದೆ. ದರ್ಶನ್ ವಿರುದ್ಧ ಹಲವು ಮಹತ್ವದ ಸಾಕ್ಷಿಗಳನ್ನು ಕಲೆಹಾಕಿರುವ ಪೊಲೀಸರು, ಚಿಕ್ಕಣ್ಣ ವಿಚಾರದಲ್ಲೂ ಚಾಣಾಕ್ಷತೆಯಿಂದ ನಡೆದುಕೊಂಡಿದ್ದಾರೆ. ಈಗ ಚಿಕ್ಕಣ್ಣ ಅವರ ಹೇಳಿಕೆ ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ಗೆ ಶಿಕ್ಷೆ ಕೊಡಿಸಲು ಮಹತ್ವದ ಸಾಕ್ಷಿಯಾಗುವ ಸಾಧ್ಯತೆ ಇದೆ. …
Read More »