ವಿಜಯಪುರ(ದೇವನಹಳ್ಳಿ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾತ್ಮಕ ಅಕ್ರಮಣ ಕೊನೆಗೊಳ್ಳಿಸಿ, ಅವರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಸೋಮವಾರ ಹಿಂದೂ ಹಿತರಕ್ಷಣಾ ಸಮಿತಿಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶಿವಗಣೇಶ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಸಮಿತಿ ಸದಸ್ಯರು ಮೌನ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. …
Read More »Daily Archives: ಆಗಷ್ಟ್ 12, 2024
ದೇವನಹಳ್ಳಿ: ಸೇವಾ ಜೇಷ್ಠತೆ ಆಧಾರದಲ್ಲಿ ಶಿಕ್ಷಕರಿಗೆ ಬಡ್ತಿ ನೀಡಿ
ದೇವನಹಳ್ಳಿ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಸಮಯದಲ್ಲಿ 2017ರಲ್ಲಿ ರೂಪಿಸಿರುವ ನಿಯಮವನ್ನು 2016ಕ್ಕೂ ಮುನ್ನ ನೇಮಕಗೊಂಡ ಶಿಕ್ಷಕರಿಗೆ ಅನ್ವಯಿಸಬಾರದು ಎಂದು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್ ಒತ್ತಾಯಿಸಿದರು. ಸೋಮವಾರ ಪಟ್ಟಣದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಪ್ರೌಢಶಾಲೆಗಳಿಗೆ ಬಡ್ತಿ ನೀಡುವಾಗ ವಿದ್ಯಾರ್ಹತೆಯನ್ನೇ ಪರಿಗಣಿಸಬೇಕು ಎಂದು ಆಗ್ರಹಿಸಿದರು. 2017ರಲ್ಲಿ ರೂಪಿಸಿರುವ ನಿಯಮದಿಂದ 2016ಕ್ಕೂ ಮುನ್ನವೇ ನೇಮಕ ಆಗಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. …
Read More »45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್: ಸಚಿವ ಸುಧಾಕರ್
ಕಲಬುರಗಿ: ‘ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲ ವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಅಡಿ ಬಿ.ಕಾಂ ಇನ್ ಲಾಜಿಸ್ಟಿಕ್, ಬಿ.ಕಾಂ ಇನ್ ಇ-ಕಾಮರ್ಸ್, ಬಿ.ಕಾಂ ಇನ್ ರಿಟೇಲ್ ಹಾಗೂ ಬ್ಯಾಂಕಿಂಗ್ ಆಯಂಡ್ …
Read More »ಮುಳಬಾಗಿಲು: ಅರ್ಧಕ್ಕೆ ನಿಂತ ಮುಷ್ಟೂರು ಪಂಚಾಯಿತಿ ಕಟ್ಟಡ ಕಾಮಗಾರಿ
ಮುಳಬಾಗಿಲು: ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಟ್ಟಡದ ಮೇಲೆ ನಾನಾ ಬಗೆಯ ಬಳ್ಳಿಗಳು ಹರಡಿಕೊಂಡಿವೆ. ಅಲ್ಲದೆ, ಕಟ್ಟಡ ಸುತ್ತಲಿನ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ಮುಷ್ಟೂರು ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆ ₹21 ಲಕ್ಷ ವೆಚ್ಚದಲ್ಲಿ ಆಗಿನ ಶಾಸಕ ಎಚ್.ನಾಗೇಶ್, ಪಂಚಾಯಿತಿ ಕಾರ್ಯಾಲಯದ ಕಾಮಗಾರಿಗೆ ಚಾಲನೆ ನೀಡಿದ್ದರು. ತಮ್ಮ ಅಧಿಕಾರದ ಅವಧಿಯಲ್ಲೇ ಕಟ್ಟಡ ಉದ್ಘಾಟನೆ ಮಾಡಬೇಕು ಎಂಬ ಕಾರಣಕ್ಕೆ ತರಾತುರಿಯಲ್ಲಿ ಕಟ್ಟಡದ ಒಳಗೆ …
Read More »ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು
ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು ಬಾಗಲಕೋಟೆ: ‘ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾನನಷ್ಟ ಮೊಕದ್ದಮೆ ಹಾಕಲಿ. ಅದನ್ನು ಎದುರಿಸುವ ಶಕ್ತಿ ಇದೆ. ಕಾನೂನಿನ ಮೂಲಕ ಉತ್ತರ ನೀಡುತ್ತೇನೆ’ ಎಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸವಾಲು ಹಾಕಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘಕ್ಕೆ ನೀಡಲಾಗಿದ್ದ ಜಾಗೆ ರದ್ದು ವಿಚಾರದಲ್ಲಿ ಹೆಸರು ಪ್ರಸ್ತಾಪಿಸಿರುವುದಕ್ಕೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದ್ದಾರೆ. ಇಂತಹ …
Read More »ಸಂತ್ರಸ್ತರೊಂದಿಗೆ ಸರ್ಕಾರವಿದೆ: ಸಚಿವ ತಿಮ್ಮಾಪುರ
ಮುಧೋಳ: ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮನವಿ ಮಾಡಿದ್ದಾರೆ. ‘ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೈತರಿಗೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ …
Read More »ದುಡಿಮೆಯ ಒಂದು ಭಾಗ ದಾನಕ್ಕೆ ಮೀಸಲಿಡಿ: ಎಂ.ಎ.ರಡ್ಡೇರ
ಮುಂಡರಗಿ: ‘ದಾನ ಮಾಡುವುದು ಸತ್ಕಾರ್ಯವಾಗಿದ್ದು, ಸಮಾಜದಲ್ಲಿ ಸಾವಿರಾರು ಕುಟುಂಬಗಳು ದಾನಿಗಳು ನೀಡುವ ದೇಣಿಗೆಯನ್ನು ಅವಲಂಬಿಸಿವೆ. ನಾವೆಲ್ಲ ಪ್ರತಿವರ್ಷ ನಮ್ಮ ದುಡಿಮೆಯ ಶೇ 35ರಷ್ಟು ಭಾಗವನ್ನು ದಾನ, ಧರ್ಮಕ್ಕೆ ಮೀಸಲಿಡಬೇಕು’ ಎಂದು ನಿವೃತ್ತ ಡಿಡಿಪಿಐ ಎಂ.ಎ.ರಡ್ಡೇರ ತಿಳಿಸಿದರು. ರಡ್ಡಿ ಬಳಗವು ಪಟ್ಟಣದ ಬೃಂದಾವನ ವೃತ್ತದಲ್ಲಿರುವ ವೆಂಕಟೇಶ್ವರ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ‘ನಮ್ಮ ನಾಡಿನಲ್ಲಿ ಬಾಳಿಹೋದ ಶರಣರು, ಸಂತರು, ಮಹಾತ್ಮರು ನಾವು ಹೇಗೆ ಬದುಕಬೇಕು ಎನ್ನುವುದನ್ನು ತಿಳಿಸಿದ್ದಾರೆ. …
Read More »ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ. ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ …
Read More »ಗುಲಬರ್ಗಾ ವಿವಿ ಘಟಿಕೋತ್ಸವ: ರೈತನ ಮಗಳಿಗೆ 13 ಚಿನ್ನದ ಪದಕ
ಕಲಬುರಗಿ: ಗ್ರಾಮೀಣ ಭಾಗದ ಕೃಷಿ ಕುಟುಂಬದಿಂದ ಬಂದ ಆನಂದಮ್ಮ ಅವರು ಕನ್ನಡ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ ಗ್ರಾಮದ ರೈತ ದೇವಿಂದ್ರಪ್ಪ ಅವರ ಪುತ್ರಿ ಆನಂದಮ್ಮ. ಗುಲಬರ್ಗಾ ವಿವಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ 42ನೇ ಘಟಿಕೋತ್ಸವದಲ್ಲಿ ಮಗಳು ಚಿನ್ನದ ಪದಕ ಮತ್ತು ಪದವಿ ಪಡೆಯುವುದನ್ನು ಕೃಷಿಕರಾದ ದೇವಿಂದ್ರಪ್ಪ ಅವರು ಕುಟುಂಬ ಸಮೇತ ಬಂದು ಕಣ್ತುಂಬಿಕೊಂಡರು. ಜೇವರ್ಗಿ ತಾಲ್ಲೂಕಿನ ಯನಗುಂಟಿ ಸರ್ಕಾರಿ ಶಾಲೆಯ …
Read More »ನೀರಜ್ ಚೋಪ್ರಾ ಮತ್ತು ಮನು ಭಾಕರ್ ಮದುವೆ?
ಮನು ಭಾಕರ್ ಮತ್ತು ನೀರಜ್ ಚೋಪ್ರಾ ಭಾರತದ ಹೆಮ್ಮೆಯ ಕ್ರೀಡಾಪಟುಗಳು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು ಭಾಕೆರ್ ಎರಡು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತದ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಕಳೆದ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಬಾರಿ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮನು ಭಾಕರ್ ಶೂಟಿಂಗ್ನಲ್ಲಿ ಎರಡು ಪದಕ ಗೆದ್ದರೆ, ನೀರಜ್ …
Read More »