Breaking News

Daily Archives: ಆಗಷ್ಟ್ 12, 2024

ಸತತ ಮಳೆಗೆ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಹಾನಿ

ನವಲಗುಂದ: ಈರುಳ್ಳಿ ಬಿತ್ತಿದ ರೈತರ ಮೊಗದಲ್ಲಿ ಈ ವರ್ಷ ಮಂದಹಾಸ ಮೂಡಿತ್ತು. ಬೆಳೆ ಚನ್ನಾಗಿ ಬರುತ್ತಿದೆ ಎಂದು ಯೋಜಿಸುತ್ತಿದ್ದರು. ಆ ವೇಳೆಗೆ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು ಕಂಗಾಲಾಗಿದ್ದಾರೆ. ಕಳೆದ ಗುರುವಾರ ಸುರಿದ ಮಳೆಗೆ ತಾಲ್ಲೂಕಿನ ಯಮನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಗೊಪ್ಪ ಹದ್ದಿನಲ್ಲಿರುವ ರೈತನ ಹೊಲದ ಈರುಳ್ಳಿ ಬೆಳೆ ಹೊಲದಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆಹಾನಿಗಿದೆ ಬಿತ್ತಿದ ದುಬಾರಿ ಬೀಜ, …

Read More »

ಜಿಲ್ಲೆಯಲ್ಲಿ ಶ್ವಾಸಕೋಶ ಕ್ಯಾನ್ಸರ್‌ ಪ್ರಮಾಣ ಏರಿಕೆ

ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ವರ್ಷ ದಾಖಲಾದ ಒಟ್ಟೂ ಕ್ಯಾನ್ಸರ್‌ ಪ್ರಕರಣಗಳಲ್ಲಿ ಶ್ವಾಸಕೋಶ ಕ್ಯಾನ್ಸರ್‌ ಪ್ರಕರಣ ಶೇ 5.9 ರಷ್ಟಿದೆ ಎಂಬುದು ಕಿದ್ವಾಯಿ ಸ್ವಾರಕ ಗಂಥಿ ಸಂಸ್ಥೆಯ ಮಾಹಿತಿ. ಅಂತೆಯೇ ಧಾರವಾಡ ಜಿಲ್ಲೆಯಲ್ಲೂ ಶ್ವಾಸಕೋಶ ಕ್ಯಾನ್ಸರ್‌ ಪ್ರಕರಣಗಳು ಏರುಗತಿಯಲ್ಲಿ ಸಾಗಿದೆ ಎಂಬುದನ್ನು ಕಿಮ್ಸ್‌ನ ಕ್ಯಾನ್ಸರ್‌ ಚಿಕಿತ್ಸಾ ವಿಭಾಗ ದೃಢೀಕರಿಸಿದೆ. 10 ವರ್ಷಗಳಲ್ಲಿ ಕಿಮ್ಸ್‌ನಲ್ಲಿ ದಾಖಲಾದ ಶ್ವಾಸಕೋಶ ಕ್ಯಾನ್ಸರ್‌ ರೋಗಿಗಳ ಅಂಕಿ-ಅಂಶ ಗಮನಿಸಿದರೆ, ಕೋವಿಡ್‌ ಅವಧಿಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆಗೆ ದಾಖಲಾಗಿದ್ದಾರೆ. ಸಾವಿನ …

Read More »

ವಿದ್ಯಾರ್ಥಿಗಳ ಬದುಕಿಗೆ ‘ನಿರ್ಮಾಣ’ ಆಸರೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರು ಗ್ರಾಮದಲ್ಲಿ 15-20 ಜನ ಯುವಕ-ಯುವತಿಯರ ಗುಂಪು ಸೇರಿ ಸ್ಥಾಪಿಸಿದ ಉಚಿತ ಗ್ರಂಥಾಲಯ ಹಲವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಗೊಳ್ಳಲು ಸಹಕಾರಿಯಾಗಿದೆ. ಕಳೆದ 6 ವರ್ಷಗಳ ಹಿಂದೆ ಸ್ಥಾಪಿಸಿದ ಉಚಿತ ಗ್ರಂಥಾಲಯ ಸೇವೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಕೂಲವಾಗುತ್ತಿದೆ. ಪ್ರತಿ ದಿನವೂ ಗ್ರಂಥಾಲಯದಲ್ಲಿ ಓದಬಹುದು. ಮನೆಗೆ ಪುಸ್ತಕಗಳನ್ನು ಎರವಲು ಪಡೆದು ಓದಬಹುದಾಗಿದೆ. ಆದರೆ ಎಲ್ಲವೂ ಇಲ್ಲಿ ಉಚಿತ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಬೇಕೆಂಬ ಕಾರಣದಿಂದ ಸ್ಪರ್ಧಾತ್ಮಕ …

Read More »

160ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಳಜಿ ಕೇಂದ್ರಗಳಲ್ಲಿ ಆಶ್ರಯ

ಗೋಕಾಕ: ಇಲ್ಲಿನ ಹಳೆ ದನಗಳ ಪೇಟೆ, ದಾಳಂಬ್ರಿ ತೋಟ, ಮಟನ್ ಮಾರ್ಕೆಟ್, ಉಪ್ಪಾರ ಓಣಿ, ಬೋಜಗರ ಓಣಿ, ಕುಂಬಾರ ಓಣಿ, ಡೋರ ಗಲ್ಲಿ ಮುಂತಾದ ಪ್ರದೇಶಗಳ ಪ್ರತಿ ವರ್ಷ ಘಟಪ್ರಭೆ ಪ್ರವಾಹದಲ್ಲಿ ಮುಳುಗುತ್ತವೆ. ಮಹರ್ಷಿ ಭಗಿರಥ ಸರ್ಕಲ್‌ ಅಂತೂ ಮೊದಲ ಮಳೆಗೇ ಜಲಾವೃತವಾಗುತ್ತದೆ. ಮೂರು ತಲೆಮಾರುಗಳಿಂದಲೂ ಜನ ಒಂದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನೆರೆ ಬಂದಾಗ ಜನಜೀವನ ಮಾತ್ರ ಅಸ್ತವ್ಯಸ್ತ ಆಗುವುದಿಲ್ಲ. ಇಲ್ಲಿನ ಶಾಲೆ- ಕಾಲೇಜು ಮಕ್ಕಳ ಶಿಕ್ಷಣದ ಮೇಲೂ …

Read More »

ತೋರಣಹಳ್ಳಿ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಚಿಕ್ಕೋಡಿ: ಜನರ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಅವಶ್ಯಕತೆ ಇದೆ. ಸಹಕಾರಿ ಧುರೀಣ, ಯುವ ಮುಖಂಡ ಅಮಿತ್ ಕೋರೆ ನೇತೃತ್ವದ ಜನಶಕ್ತಿ ಫೌಂಡೇಶನ್ ವತಿಯಿಂದ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ತೋರನಹಳ್ಳಿಯ ಹನುಮಾನ ದೇವಸ್ಥಾನ ಹತ್ತಿರ ಶುದ್ಧ ಕುಡಿಯುವ ನೀರು ಘಟಕವನ್ನು ನಿರ್ಮಾಣಿಸಲಾಗಿದೆ ಎಂದು ಚಿಕ್ಕೋಡಿಯ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಹೇಳಿದರು ತಾಲೂಕಿನ ತೋರಣಹಳ್ಳಿಯ ಹನುಮಾನ ದೇವಸ್ಥಾನ ಹತ್ತಿರ ಜನಶಕ್ತಿ ಫೌಂಡೇಶನ್ ವತಿಯಿಂದ …

Read More »

ರೈತರಿಗಾಗಿ ಹೋರಾಟಕ್ಕೆ ಸಿದ್ದ: ಶಾಸಕ ರಾಜು ಕಾಗೆ

ಕಾಗವಾಡ: ಸರ್ಕಾರ ಈ ಭಾಗ ಬಹು ನಿರೀಕ್ಷಿತ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ವಿಳಂಬ ಮಾಡಿದಲ್ಲಿ ನಾನು ಸಹ ಸ್ಥಳೀಯ ರೈತರ ಜೊತೆ ಹೋರಾಟಕ್ಕೆ ಸಿದ್ದ ಇದ್ದೆನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹೇಳಿದರು.   ಉಗಾರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ‘ಬಸವೇಶ್ವರ ಏತ ನೀರಾವರಿ ಕುರಿತು ಸಿಎಂ ಜೊತೆ ಸಮಗ್ರ ಚರ್ಚೆ ಮಾಡಿದ್ದು, ಪೂರ್ಣಪ್ರಮಾಣದ ಕಾಮಗಾರಿಯಲ್ಲಿ …

Read More »

ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆ

ಬೆಳಗಾವಿ: ದೆಹಲಿಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆಯಾಗಿದ್ದಾರೆ.   ‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನನ್ನ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕಿ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಅಭಿಮಾನದ ಸಂಗತಿ’ ಎಂದು ಶಾಸಕ ಅಭಯ ಪಾಟೀಲ …

Read More »

ತುಂಗಭದ್ರಾ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಪ್ರಕರಣ: ಕಲ್ಲಿನ ಮಂಟಪ ಭಾಗಶಃ ಮುಳುಗಡೆ

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಚ್ಚಿ ಹೋಗಿರುವುದರಿಂದ ನದಿಗೆ ನೀರು ಬಿಡಲಾಗಿದ್ದು, ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಬಳಿ ಇರುವ ಕೃಷ್ಣದೇವರಾಯ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಮುಳುಗುವ ಹಂತ ತಲುಪಿದೆ. ಕೆಲವು ದಿನಗಳ ಹಿಂದೆ ಜಲಾಶಯಕ್ಕೆ ವ್ಯಾಪಕ ನೀರು ಹರಿದು ಬಂದು ನದಿಗೆ ನೀರು ಹರಿಸಿದ್ದಾಗ ಇದು ಮುಳುಗಡೆಯಾಗಿತ್ತು. ಕ್ರಸ್ಟ್‌ಗೇಟ್‌ ಈಗ ಮರಳಿ ಅಳವಡಿಸಬೇಕಾಗಿರುವ ಕಾರಣ ಜಲಾಶಯದ 61 ಟಿಎಂಸಿ ಅಡಿ ನೀರು ಖಾಲಿ ಮಾಡಬೇಕಾಗಿದೆ. ಆದ್ದರಿಂದ …

Read More »

ನಿತ್ಯಭವಿಷ್ಯ

ಮೇಷ: ಜೇನು ಕೃಷಿಯಲ್ಲಿ ಪ್ರಗತಿ. ಸ್ನೇಹಿತರಿಂದ ಸಹಾಯ. ಕೋರ್ಟ್ ವ್ಯಾಜ್ಯಗಳಲ್ಲಿ ಜಯ. ಸ್ಥಿರಾಸ್ತಿ ಲಾಭ. ಆಧ್ಯಾತ್ಮದ ಒಲವು. ಶುಭಸಂಖ್ಯೆ: 5 ವೃಷಭ: ಉದ್ಯೋಗದಲ್ಲಿ ಒತ್ತಡ. ಕಲಾವಿದರಿಗೆ ಅಪಕೀರ್ತಿ. ಅನಗತ್ಯ ಪ್ರಯಾಣ. ದಾಂಪತ್ಯದಲ್ಲಿ ಕಲಹ. ಪಾಲುದಾರಿಕೆಯಲ್ಲಿ ಕಿರಿಕಿರಿ. ಶುಭಸಂಖ್ಯೆ: 9 ಮಿಥುನ: ಆರ್ಥಿಕ ಲಾಭ. ಶತ್ರು ದಮನ. ಸಂಗಾತಿಯಿಂದ ಸಹಾಯ. ಉದ್ಯೋಗದಲ್ಲಿ ಅನುಕೂಲ. ದಾಂಪತ್ಯದಲ್ಲಿ ಅಂತರ. ಅನಾರೋಗ್ಯ. ಶುಭಸಂಖ್ಯೆ:1 ಕಟಕ: ಸಾಲಬಾಧೆ. ಶತ್ರು ಕಾಟ. ಮಕ್ಕಳಿಂದ ಬೇಸರ. ಉದ್ಯೋಗದಲ್ಲಿ ತೊಂದರೆ. ವಿದ್ಯಾಭ್ಯಾಸದಲ್ಲಿ ಅಡೆತಡೆ. ಜೂಜಿನಿಂದ ತೊಂದರೆ. ಶುಭಸಂಖ್ಯೆ: 8 ಸಿಂಹ: ವಾಹನ ಯೋಗ. …

Read More »

ಬೆಂಗಳೂರಿನಲ್ಲಿ ಮುಂಜಾನೆವರೆಗೂ ಅಬ್ಬರಿಸಿದ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆವರೆಗೂ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ನಿನ್ನೆ ಮಧ್ಯರಾತ್ರಿಯವರೆಗೂ ಮಳೆ ಬರುವ ಯಾವುದೇ ವಾತಾವರಣ ಇರಲಿಲ್ಲ. ಆದರೆ, ನಸುಕಿನ ಜಾವ ಮಳೆರಾಯ ಅಬ್ಬರಿಸಿದ್ದಾನೆ. ನಿದ್ರೆಯಿಂದ ಎಚ್ಚರಗೊಂಡ ಎಷ್ಟೋ ಮಂದಿ ವರುಣ ಅಬ್ಬರ ಕಂಡು ದಂಗಾಗಿದ್ದಾರೆ. ಸುಮಾರು ಮೂರ್ನಾಲ್ಕು ಗಂಟೆ ಮಳೆ ಎಡಬಿಡದೆ ಸುರಿದಿದೆ. ಇದರ ಪರಿಣಾಮ ರಾಜಧಾನಿಯಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ನಾಗಾವಾರ ಜಂಕ್ಷನ್​ ಮತ್ತು …

Read More »