Breaking News

Daily Archives: ಆಗಷ್ಟ್ 13, 2024

ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ

ಬೆಂಗಳೂರು,ಆ.13- ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದರು.   ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್‌ ಆರ್ಗನ್‌ …

Read More »

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ! ನವದೆಹಲಿ: ದೆಹಲಿಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ …

Read More »

ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ

ನವದೆಹಲಿ,ಆ.13- ದೇಶದ 78ನೇಸ್ವಾತಂತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳನ್ನು ಪ್ರಧಾನಿ ಕಾರ್ಯಾಲಯ ಅತಿಥಿಗಳನ್ನಾಗಿ ಆಹ್ವಾನಿಸಿದೆ. ಕರ್ನಾಟಕದ ಗದಗ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕದ ವಿದ್ಯಾರ್ಥಿಗಳಾದ ಸತೀಶ್‌ ಕನ್ನೇರ್‌ ಹಾಗೂ ಆದಿತ್ಯ ಕೊರವರ ಅವರನ್ನು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ಕೇಂದ್ರ ಸರ್ಕಾರದ ಮೇರಿ ಮಾಟಿ, ಮೇರಾ ದೇಶ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, …

Read More »

ಬಿಜೆಪಿ ಒಡೆದ ಮನೆಯಾಗಿದೆ.ವಿಜಯೇಂದ್ರ ಟೀಂ ಒಂದು ಕಡೆಯಾದರೆ ಯತ್ನಾಳ್‌ ರಮೇಶ್‌ ಜಾರಕಿಹೊಳಿ.ಬಣ ಮತ್ತೊಂದು ಕಡೆ.

ಬೆಂಗಳೂರು,ಆ.13- ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್‌ ನಿಷ್ಠ ಬಣ ಮಗದೊಂದು ಕಡೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

Read More »

ಬೆಚ್ಚಿ ಬೀಳಿಸುತ್ತೆ ಬಿಎಂಟಿಸಿ ವೋಲ್ವೋ ಬಸ್ ಆಕ್ಸಿಡೆಂಟ್ ವಿಡಿಯೋ

ಬೆಂಗಳೂರು ಆಗಸ್ಟ್ 13: ಬೆಂಗಳೂರು ಅಂದರೆ ಟ್ರಾಫಿಕ್ ಜಾಮ್. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಬೇಕಾದರೆ ಗಂಟೆಗಟ್ಟಲೆ ರಸ್ತೆಯಲ್ಲಿ ಕಾಯಬೇಕಾದ ಸ್ಥಿತಿ ಇದೆ. ಈ ನಡುವೆ ಅಪಘಾತಗಳು ಸಂಭವಿಸಿದರೆ ಮುಗಿತು ಜನ ತಾವಂದುಕೊಂಡ ಸ್ಥಳಕ್ಕೆ ಹೋಗುವುದು ಗಂಟೆಗಳವರೆಗೆ ತಡವಾಯಿತು ಅಂತಲೇ ಅರ್ಥ. ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಅಪಘಾತವೊಂದು ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ …

Read More »

ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರು,ಆ.13- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಬಿಬಿಎಂಪಿ ಮುಂದಾಗಿದೆ.ಇನ್ನು ಮುಂದೆ ಟಚ್‌ ಸ್ಕ್ರೀನ್‌ ಮೂಲಕ ತಿಂಡಿ ಬುಕ್ಕಿಂಗ್‌ ಮಾಡಲು ಇಂದಿರಾ ಕ್ಯಾಂಟಿನ್‌ಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ರಾಜರಾಜೇಶ್ವರಿನಗರ ವಲಯದ 11 ಕ್ಯಾಂಟೀನ್‌ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಾಧಕ ಬಾಧಕ ಅಧ್ಯಯನದ ಬಳಿಕ 169 ಇಂದಿರಾ ಕ್ಯಾಂಟೀನ್‌ ಗೂ ಡಿಜಿಟಲ್‌ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಎಷ್ಟು ತಿಂಡಿ, ಎಷ್ಟು ಊಟ ಖರ್ಚಾಯ್ತು? ಗುಣಮಟ್ಟ …

Read More »

ತುಂಗಭದ್ರಾ ಜಲಾಶಯದಲ್ಲಿ ಲೋಪ: ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: C.M.

ಕೊಪ್ಪಳ: ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಬಸಾಪುರ ಬಳಿ ಏರ್ ಸ್ಟ್ರೀಪ್ ನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ …

Read More »

ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಂಭೀರ ಗಾಯ

ಬೆಳಗಾವಿ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದಿದ್ದ ಭಕ್ತರು ಹೋಟೆಲ್ ನಲ್ಲಿ ತಂಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾದಗಿರಿಯ ಐವರು ಹಾಗೂ ಬೆಂಗಳೂರಿನ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.   ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಸವದತ್ತಿ ಪಟ್ಟಣದ ಹೋಟೆಲ್ ರೂಂ ನಲ್ಲಿ ತಂಗಿದ್ದರು. ಈ ವೇಳೆ ಹೋಟೆಲ್ ರೂಂ …

Read More »