ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(Renukaswamy Case) ಸಂಬಂಧ ಜೈಲಿನಲ್ಲಿರುವ ನಟ ದರ್ಶನ್(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು …
Read More »Daily Archives: ಆಗಷ್ಟ್ 14, 2024
ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್. 78 ಕುರಿಗಳು ಸಜೀವ ದಹನ
ಮುಂಡಗೋಡ: ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ. ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು. ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ …
Read More »ಸೊಸೆ ಮಾಡಿದ ಮೋಸಕ್ಕೆ ಬೀದಿಗೆ ಬಂದ ಬದುಕು
ಗದಗ: ಸೊಸೆ ಮಾಡಿದ ಮೋಸಕ್ಕೆ ಬದುಕು ಬೀದಿಗೆ ಬಂದಿದ್ದು, ನನಗಾಗಿರುವ ಅನ್ಯಾಯಕ್ಕೆ ಸಮಾಜದ ಯಾವುದೇ ವ್ಯಕ್ತಿ, ಅಧಿಕಾರಿಗಳಿಂದ ನ್ಯಾಯ ಸಿಕ್ಕಿಲ್ಲ. ಆದಕಾರಣ, ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಆದಿತ್ಯ ನಗರದ ನಿವಾಸಿ ಅನುಸೂಯ ಬಸವಂತಪ್ಪ ಕರಕಿಕಟ್ಟಿ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ವರ್ಷಗಳ ಹಿಂದೆ ಮಗನಿಗೆ ಪಾರ್ವತೆವ್ವ ಹುನಗುಂದ ಎಂಬ ಹುಡುಗಿ ನೋಡಿ ವಿವಾಹ ಮಾಡಲಾಗಿತ್ತು. ಮದುವೆಯಾದ ಮೂರು …
Read More »ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಿನ್ನೆ ಸಂಜೆ 7:30 ರ ವೇಳೆಗೆ ಹತ್ಯೆ ನಡೆದಿದ್ದು, ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಅಪಾಯದಲ್ಲಿವೆ 563 ಶಾಲಾ ಕೊಠಡಿಗಳು
ಚಿಂಚೋಳಿ: ತಾಲ್ಲೂಕಿನಲ್ಲಿ ವಿವಿಧೆಡೆ ಸರ್ಕಾರಿ ಶಾಲೆಗಳು ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿವೆ. ಕೆಲವು ಶಾಲೆಗಳ ಛತ್ತಿನ ಪ್ಲಾಸ್ಟರ್ ಕಿತ್ತು ಬೀಳುತ್ತಿದ್ದು ಮಕ್ಕಳು ಹೆದರಿಕೆಯಲ್ಲಿಯೇ ಪಾಠ ಪ್ರವಚನ ಆಲಿಸುವಂತಾಗಿದೆ. ತಾಲ್ಲೂಕಿನಲ್ಲಿ 298 ಸರ್ಕಾರಿ ಶಾಲೆಗಳಿವೆ. ಇಲ್ಲಿ 28,340 ಮಕ್ಕಳ ದಾಖಲಾತಿಯಿದೆ. ಇವರಿಗೆ ಪಾಠ ಪ್ರವಚನ ನಡೆಸಲು ಒಟ್ಟು 2,073 ಶಾಲಾ ಕೊಠಡಿಗಳಿದ್ದು, ಈ ಪೈಕಿ 1,200 ಕೊಠಡಿಗಳು ಸುಸ್ಥಿತಿಯಲ್ಲಿವೆ. 308 ಶಿಥಿಲ ಕೊಠಡಿಗಳು ಸೇರಿ 563 ಕೊಠಡಿಗಳು ಅಪಾಯದಲ್ಲಿವೆ. 255 ಕೊಠಡಿಗಳಿಗೆ ಭಾರಿ ದುರಸ್ತಿಯ …
Read More »ಕರ್ನಾಟಕದ 20 ಸೇರಿ 1,037 ಪೊಲೀಸರಿಗೆ `ರಾಷ್ಟ್ರಪತಿ ಪದಕ’ಘೋಷಣೆ
ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಸರ್ಕಾರ ಬುಧವಾರ (ಆಗಸ್ಟ್ 14, 2024) ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಘೋಷಿಸಿದೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ನೀಡಲಾಗಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು …
Read More »ಬದಲಾಗಲಿದೆ ಉತ್ತರ ಕರ್ನಾಟಕ ಭಾಗದ ಪ್ರವಾಸೋದ್ಯಮ
ಬೆಳಗಾವಿ, ಆಗಸ್ಟ್ 14: ಉತ್ತರ ಕರ್ನಾಟಕ ಅನೇಕ ಪ್ರವಾಸಿ ತಾಣಗಳನ್ನು ಹೊಂದಿದೆ. ಆದರೆ ಅವುಗಳು ಪ್ರಚಾರದಲ್ಲಿ, ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಈಗ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇರುವ ಪೂರಕ ಅಂಶಗಳನ್ನು ಗುರುತಿಸಿ ಅವುಗಳ ಮೇಲೆ ಹೆಚ್ಚಿನ ಗಮನ ಹರಿಸಿ, ಈ ಭಾಗದ ಪ್ರವಾಸೋದ್ಯಮದ ಚಿತ್ರಣ ಬದಲಿಸಲು ಯೋಜನೆ ರೂಪಿಸಲಾಗಿದೆ. ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಬೆಳಗಾವಿಯ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಬೆಳಗಾವಿ ವಿಮಾನ ನಿಲ್ದಾಣದ …
Read More »ದರ್ಶನ್ ಅರೆಸ್ಟ್ ಆಗಿ 2 ತಿಂಗಳ ನಂತರ ಮೊದಲ ಬಾರಿ ಭೇಟಿಗೆ ಬಂದ ಅಭಿಷೇಕ್ ಅಂಬರೀಷ್
ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ (Darshan) ಹಾಗೂ ಗ್ಯಾಂಗ್ ಸದ್ಯ ಹೊರಗೆ ಬರುವಂತೆ ಕಾಣಿಸುತ್ತಿಲ್ಲ. ನಟ ದರ್ಶನ್ ಅವರು ಜೈಲು ಸೇರಿ ಈಗಾಗಲೇ 2 ತಿಂಗಳು ಕಳೆದಿದೆ. ಇದೀಗ ನಟ ಅಭಿಷೇಕ್ ಅಂಬರೀಷ್ (Abhishek Ambareesh)ಅವರು ನಟ ದರ್ಶನ್ ಭೇಟಿಗೆ ಆಗಮಿಸಿದ್ದಾರೆ. ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ ಅವರು ದರ್ಶನ್ ಭೇಟಿಗಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ಭೇಟಿ ಮಾಡಲಿರುವ ಆಪ್ತರ ಕಾರು ಪರಪ್ಪನ ಅಗ್ರಹಾರ …
Read More »ಬೆಳಗಾವಿ | ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣ: 41 ಮಂದಿ ಅಸ್ವಸ್ಥ
ಚಚಡಿ (ಬೆಳಗಾವಿ ಜಿಲ್ಲೆ): ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ- ಭೇದಿ ಸೋಮವಾರ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ- ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ …
Read More »ಬೆಳಗಾವಿ: ಕ್ರೀಡಾ ಕುಟುಂಬದ ಶೂಟಿಂಗ್ ಕಲಿ ಸ್ವಪ್ನಿಲ್
ಬೆಳಗಾವಿ: ಕ್ರೀಡಾ ಕುಟುಂಬದ ಶೂಟಿಂಗ್ ಕಲಿ ಸ್ವಪ್ನಿಲ್ ಬೆಳಗಾವಿ: ‘ನನ್ನ ಪುತ್ರನ ಒಂದೂವರೆ ದಶಕದ ಪ್ರಯತ್ನ ಒಂದಿಷ್ಟು ಫಲ ಕೊಟ್ಟಿದೆ. ಈಗ ಕಂಚು ಗೆದ್ದಿರುವ ಆತ ಮುಂದಿನ ಒಲಿಂಪಿಕ್ಸ್ನಲ್ಲಿ ಖಂಡಿತ ಚಿನ್ನದ ಪದಕ ಗಳಿಸುವನು ಎಂಬ ವಿಶ್ವಾಸವಿದೆ’ ಹೀಗೆಂದು ‘ಸಂತಸ ಹಂಚಿಕೊಂಡವರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ತಾಲ್ಲೂಕಿನ ಕಂಬಳವಾಡಿಯ ಸುರೇಶ ಕುಸಾಳೆ. ಅವರ ಪುತ್ರ ಸ್ಪಪ್ನಿಲ್ ಪ್ಯಾರಿಸ್ನಲ್ಲಿ ನಡೆದಿರುವ ಒಲಿಂಪಿಕ್ಸ್ನ ಶೂಟಿಂಗ್ ಸ್ಪರ್ಧೆಯ 50 ಮೀಟರ್ ರೈಫಲ್ ತ್ರಿ ಪೊಸಿಷನ್ …
Read More »