Breaking News

Daily Archives: ಆಗಷ್ಟ್ 17, 2024

ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …

Read More »

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ: ವಾಹನ ಸವಾರರು ಪರದಾಟ

ಬೆಂಗಳೂರು, ಆ.16: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿವರಮಹಾಲಕ್ಷ್ಮಿಹಬ್ಬದಂದೆ ವರುಣನ ಆಗಮನವಾಗಿದೆ. ದಿಢೀರ್ ಮಳೆಗೆ ಹಬ್ಬದ ಸಡಗರದಲ್ಲಿದ್ದ ಸಿಟಿಮಂದಿ ಸುಸ್ತಾಗಿದ್ದಾರೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ(Rain) ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ …

Read More »

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು, : ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ …

Read More »

ಸಾಹುಕಾರ ಜಾರಕಿಹೊಳಿಅವ ರಿ ಗೆ ಬಿಎಲ್​​​​ ಸತೋಷ್ ದಿಢೀರ್ ಬುಲಾವ್

ಬೆಂಗಳೂರು, (ಆಗಸ್ಟ್ 16): ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್​ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್​ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್​ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್​ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ …

Read More »

ಪ್ರತಿದಿನ ಬೆಳಗ್ಗೆ ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಕೊಲೆಸ್ಟ್ರಾಲ್ ಮಂಜುಗಡ್ಡೆಯಂತೆ ಕರಗಿ ಹೋಗುತ್ತೆ!

ಕೊಲೆಸ್ಟ್ರಾಲ್ ಜೀವಕೋಶ ಪೊರೆಗಳಲ್ಲಿ ಕಂಡುಬರುವ ಕೊಬ್ಬಿನ, ಎಣ್ಣೆಯುಕ್ತ ಸ್ಟೀರಾಯ್ಡ್ ಆಗಿದೆ. ಇದು ಸಸ್ತನಿಗಳ ಜೀವಕೋಶ ಪೊರೆಗಳ ಪ್ರಮುಖ ಅಂಶವಾಗಿದೆ. ಆದರೆ ಅಧಿಕ ಕೊಲೆಸ್ಟರಾಲ್ ಮಟ್ಟವು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ!.. ಆದ್ದರಿಂದ ನಿಮ್ಮ ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ ಜಾಗರೂಕರಾಗಿರಿ. ವಾಲ್ ನಟ್ಸ್ ತಿನ್ನಿರಿ – ಪ್ರತಿದಿನ ನಿಮ್ಮ ಉಪಹಾರದಲ್ಲಿ ಕೆಲವು ವಾಲ್ನಟ್ಗಳನ್ನು ಸೇವಿಸಿ. ಈ ಬೀಜಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. …

Read More »

ತಾತ್ಕಾಲಿಕ ಗೇಟ್‌: ಮೊದಲ ಹಂತ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಮುರಿದು ಬಿದ್ದ 19ನೇ ಕ್ರೆಸ್ಟ್‌ ಗೇಟ್‌ಗೆ ತಾತ್ಕಾಲಿಕ ಗೇಟ್‌ ಅಳವಡಿಕೆ ಸಾಹಸ ಕಾರ್ಯ ಕೈ ಹಿಡಿದಿದ್ದು, ಶುಕ್ರವಾರ ರಾತ್ರಿ ಐದು ಸ್ಟಾಪ್‌ ಲಾಗ್‌ಗಳ ಪೈಕಿ ಒಂದನ್ನು ಯಶಸ್ವಿಯಾಗಿ ಇಳಿಸಲಾಗಿದೆ. ತಜ್ಞರ ತಂಡಕ್ಕೆ ಯಶಸ್ಸಿನ ಮೊದಲ ಮೆಟ್ಟಿಲು ಲಭಿಸಿದ್ದು, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನುಳಿದ 4 ಸ್ಟಾಪ್‌ ಲಾಗ್‌ ಇಳಿಸುವ ಕಾರ್ಯ ಶನಿವಾರ ಸಂಜೆಗೆ ಬಹುತೇಕ ಪೂರ್ಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆಯಿಂದ ತಾತ್ಕಾಲಿಕ ಗೇಟ್‌ ಅಳವಡಿಕೆಗೆ ಜಲಾಶಯದಲ್ಲಿ ಅಡ್ಡಿ ಮಾಡುತ್ತಿದ್ದ ಸ್ಕೈವಾಕ್‌ …

Read More »

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ ನವದೆಹಲಿ : ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವೈದ್ಯರ ಆಕ್ರೋಶ ಹೆಚ್ಚುತ್ತಿದೆ. ದೇಶಾದ್ಯಂತ ವೈದ್ಯರು ಮತ್ತು ದಾದಿಯರು ಮುಷ್ಕರ ನಡೆಸಿದ್ದು, ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿದ್ದಾರೆ. ಎಲ್ಲಾ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮುಷ್ಕರ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ. ಈ ದಿಕ್ಕಿನಲ್ಲಿ ಬಹಳ ಮುಖ್ಯವಾದ ಹೆಜ್ಜೆಯನ್ನ ಇಟ್ಟಿರುವ ಕೇಂದ್ರ …

Read More »

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು!

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು! ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ …

Read More »

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸೆಲಿಂಗ್ ಆರಂಭ

ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.   ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ …

Read More »