Breaking News

Daily Archives: ಆಗಷ್ಟ್ 19, 2024

ದುರ್ಗಾದೇವಿ ಕಳಶಾಭಿಷೇಕ: ಹೊರ ರಾಜ್ಯದ ಭಕ್ತರೂ ಭಾಗಿ

ದುರ್ಗಾದೇವಿ ಕಳಶಾಭಿಷೇಕ: ಹೊರ ರಾಜ್ಯದ ಭಕ್ತರೂ ಭಾಗಿ ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಡೊಂಬರಕೊಪ್ಪ ಗ್ರಾಮದಲ್ಲಿ ಆಗಸ್ಟ್‌ 15ರಿಂದ ಪ್ರಾರಂಭವಾಗಿರುವ ಮಹಾ ದುರ್ಗಾದೇವಿಗೆ ಸಹಸ್ರ ಕಳಶಾಭಿಷೇಕ, ಶತಚಂಡಿಕಾ ಹೋಮ, ಶ್ರೀ ಚಕ್ರ ಪೂಜೆ ಕಾರ್ಯಕ್ರಮಕ್ಕೆ ರಾಜ್ಯವೂ ಸೇರಿ ಹೊರರಾಜ್ಯಗಳ ಅಧಿಕ ಸಂಖ್ಯೆಯ ಭಕ್ತರು ಶ್ರದ್ಧಾಭಕ್ತಿಯೊಂದಿಗೆ ಭಾಗವಹಿಸಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಸಾಗಿವೆ. ಜ್ಯೋತಿಷಿ ವಿಷ್ಣು ಪ್ರಸಾದ ಹೆಬ್ಬಾರ ಹಾಗೂ ಅರ್ಚಕ ರಾಜಪ್ಪ ಹೊಸಮನಿ ಅವರ ನೇತೃತ್ವದಲ್ಲಿ ಆಗಸ್ಟ್‌ …

Read More »

ಕಾರ್ಖಾನೆ ಅಗ್ನಿ ದುರಂತ: ಸ್ಪಷ್ಟ ವರದಿಗೆ ಎಸ್.ಕೆ.ವಂಟಿಗೋಡಿ ಸೂಚನೆ

ಬೆಳಗಾವಿ: ‘ತಾಲ್ಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯಲ್ಲಿ ಈಚೆಗೆ ಸಂಭವಿಸಿದ ಅಗ್ನದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವದಿಂದ ನೀಡಿಲ್ಲ ಎಂಬ ಸಂಗತಿ ಮಾಧ್ಯಮಗಳಿಂದ ಗೊತ್ತಾಯಿತು. ಇಂಥ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು.   ಕಾರ್ಖಾನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು, ‘ಘಟನೆ ಕುರಿತು ಪತ್ರಿಕೆಗಳ ವರದಿ …

Read More »

19,969 ಪಡಿತರ ಚೀಟಿ ರದ್ದು: ₹1.89 ಕೋಟಿ ದಂಡ ವಸೂಲಿ

ಬೆಳಗಾವಿ: ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ, ಸುಳ್ಳು ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ₹1.89 ಕೋಟಿ ದಂಡ ಕೂಡ ವಸೂಲಿ ಮಾಡಲಾಗಿದೆ. ಜಿಲ್ಲೆಯಲ್ಲಿ 557 ಅಂತ್ಯೋಂದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್-2023ರಿಂದ ಏಪ್ರಿಲ್-2024) ರವರೆಗೆ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲ ಪಡಿತರ …

Read More »

ರೈತರಿಗೆ ನ್ಯಾನೋ ತಂತ್ರಜ್ಞಾನ ಸೌಲಭ್ಯ: ಜೊಲ್ಲೆ

ನಿಪ್ಪಾಣಿ: ‘ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ(ಬಹುರಾಜ್ಯ)ಯು ವಿವಿಧ ಹಂತಗಳಲ್ಲಿ ನ್ಯಾನೊ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಿದ್ದು, ಇದರಿಂದ ರೈತರು ಕಡಿಮೆ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಕಬ್ಬು ಉತ್ಪಾದಿಸಬಹುದು. ಅಲ್ಲದೆ ರೈತರಿಗೆ ಹಾಗೂ ಸದಸ್ಯರಿಗೆ ವಿವಿಧ ನ್ಯಾನೋ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.   ವೇದಗಂಗಾ ರೈತ ಉತ್ಪಾದಕರ ಒಕ್ಕೂಟ ಹಾಗೂ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಡ್ರೋನ್ ಮೂಲಕ …

Read More »

ಕಿತ್ತೂರು ಉತ್ಸವಕ್ಕೆ 5 ಕೋಟಿ

ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ 2024 ರ ಪೂರ್ವಭಾವಿ ಸಭೆ ಸೋಮವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಸಲಾಯಿತು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಂದಾಯ ಸಚಿವ ಕೃಷ್ಣಭೈರೆಗೌಡ ಸಭೆಯಲ್ಲಿ ಈ ಬಾರಿ 200 ನೇ ಅದ್ಧೂರಿ ಕಿತ್ತೂರು ಉತ್ಸವಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ಅನುದಾನ ನೀಡುವಂತೆ ಆದೇಶ ಹೊರಡಿಸಿದ್ದಾರೆ.     ಶಾಸಕ ಬಾಬಾಸಾಹೇಬ ಪಾಟೀಲ …

Read More »

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು …

Read More »

ಸಚಿವ ಎಚ್‌ಡಿಕೆ ಮತ್ತು ಸಂಬಂಧಿಕರಿಂದ ಗೋಮಾಳ ಜಾಗ ಕಬಳಿಕೆ; ಹಿರೇಮಠ ಆರೋಪ

ಧಾರವಾಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಗೋಮಾಳದ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ ಆರೋಪಿಸಿದರು.   ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕುಮಾರಸ್ವಾಮಿ, ಅವರ ಚಿಕ್ಕಮ್ಮ ಸಾವಿತ್ರಮ್ಮ ಹಾಗೂ ಸಂಬಂಧಿಕ ಡಿ.ಸಿ.ತಮ್ಮಣ್ಣ ಕುಟುಂಬದವ‌ರು ಜಾಗವನ್ನು ಕಬಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಂದಾಯ ಇಲಾಖೆಯ ಉನ್ನತಧಿಕಾರಿ 2014 ಆಗಸ್ಟ್‌ …

Read More »

ಹುಕ್ಕೇರಿ | ರಿಯಾಯಿತಿ ದರದಲ್ಲಿ ಕೀಟನಾಶಕ ಔಷಧ: ಸದ್ಬಳಕೆಗೆ ಸಲಹೆ

ಹುಕ್ಕೇರಿ: ‘ರೈತರಿಗೆ ಅಗತ್ಯವಿರುವ ಕೀಟನಾಶಕ ಔಷಧ ಕೈಗೆಟುಕುವ ದರದಲ್ಲಿ ದೊರೆಯುವ ಸದುದ್ದೇಶದಿಂದ ಕೀಟನಾಶಕ ಔಷಧ ಮಳಿಗೆ ಉದ್ಘಾಟಿಸಲಾಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.‌ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಕೀಟನಾಶಕ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ಶೇ30ರಷ್ಟು ರಿಯಾಯಿತಿ ದರದಲ್ಲಿಕೀಟನಾಶಕ ಔಷಧ ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು ‘ರೈತರು ಸಂದಿಗ್ದ ಪರಿಸ್ಥಿತಿಗೆ ಸಿಲುಕಿದ್ದಾರೆ. ನರೇಗಾ ಯೋಜನೆಯಡಿ ಸರ್ಕಾರ ಕೂಲಿ ಕೆಲಸ ಒದಗಿಸುತ್ತಿದ್ದು, ಹೊಲ-ಗದ್ದೆಗಳಲ್ಲಿ ಕೂಲಿ …

Read More »

ರಡ್ಡೆರಹಟ್ಟಿ ಸರ್ಕಾರಿ ಶಾಲೆಗೆ ₹1ಲಕ್ಷ ಬಹುಮಾನ

ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು. ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು …

Read More »

ತಾಯಿ- ಮಕ್ಕಳಿಗೆ ಇನ್ನೂ ಸಿಗದ ಆಸ್ಪತ್ರೆಗಳು

ಬೆಳಗಾವಿ: ಜಿಲ್ಲೆಗೆ ಮಂಜೂರಾದ ಒಟ್ಟು ಏಳು ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಇನ್ನೂ ಎರಡು ಆಸ್ಪತ್ರೆಗಳು ಕಾರ್ಯಾರಂಭ ಮಾಡಿಲ್ಲ. ಚಿಕ್ಕೋಡಿ ಹಾಗೂ ಖಾನಾಪುರದದಲ್ಲಿ ಮೂಲಸೌಕರ್ಯಗಳು ಸಿದ್ಧಗೊಂಡರೂ ಸಿಬ್ಬಂದಿ ನೇಮಕ ಹಾಗೂ ಸಣ್ಣಪುಟ್ಟ ಕೆಲಸಗಳಿಂದಾಗಿ ಇನ್ನೂ ಜನರ ಉಪಯೋಗಕ್ಕೆ ಬಂದಿಲ್ಲ.   ಉಳಿದಂತೆ, ಗೋಕಾಕದಲ್ಲಿ 100 ಬೆಡ್‌, ಒಂಟಮೂರಿಯಲ್ಲಿ 30 ಬೆಡ್‌, ನಿಪ್ಪಾಣಿ 30 ಬೆಡ್‌, ಸವದತ್ತಿ 60 ಬೆಡ್‌, ಬೈಲಹೊಂಗಲ 100 ಬೆಡ್‌ನ ಆಸ್ಪತ್ರೆಗಳು ಕೆಲಸ ಆರಂಭಿಸಿವೆ. ಚಿಕ್ಕೋಡಿಯಲ್ಲಿ 100 ಹಾಸಿಗೆ …

Read More »