ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರದಲ್ಲಿ ಆ.23ರಂದು …
Read More »Daily Archives: ಆಗಷ್ಟ್ 22, 2024
ವೈದ್ಯಕೀಯ ಕೇಸ್ ಅಂತೇಳಿ ಅಕ್ರಮವಾಗಿ 46 ಬಿಪಿಎಲ್ ಕಾರ್ಡ್ ಕೊಟ್ಟ ಆಹಾರ ಶಿರಸ್ತುದಾರ
ಬೆಂಗಳೂರು:ಹೊಸ ಕಾರ್ಡ್ಗಾಗಿ ಅರ್ಜಿದಾರರು 3 ವರ್ಷದಿಂದ ಜಾತಕಪಕ್ಷಿಯಂತೆ ಕಾಯುತ್ತಿರುವ ನಡುವೆಯೂ ಅರ್ಹತೆ ಹೊಂದಿಲ್ಲದ 46 ಮಂದಿಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಮಂಜೂರು ಮಾಡಿರುವುದು ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ. ತಿಮ್ಮಯ್ಯ ಎಂಬುವರು, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 ಬಿಪಿಎಲ್ ಚೀಟಿ ಕೊಟ್ಟಿರುವುದು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಆಹಾರ ಇಲಾಖೆ ಆಯುಕ್ತರಿಗೆ ಕೊಟ್ಟಿರುವ ವರದಿಯಲ್ಲಿ …
Read More »ಜೈಲಲ್ಲಿ ‘ನಟ ದರ್ಶನ್’ ಸ್ಥಿತಿ ಕಂಡು ಕಣ್ಣೀರಿಟ್ಟ ರಚಿತಾ ರಾಮ್
ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಈ ಮೂಲಕ ಭಾವುಕರಾದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಟಿ ರಚಿತಾ ರಾಮ್ ತೆರಳಿ, ನಟ ದರ್ಶನ್ ಭೇಟಿಯಾದರು. ಅವರ ಆರೋಗ್ಯ ವಿಚಾರಿಸಿ, ಮಾತನಾಡಿಕೊಂಡ ಬಂತ ನಂದ್ರ, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಟಿ ರಚಿತಾ ರಾಮ್ ಎಂಬುದಾಗಿ ಗುರುತಿಸಿಕೊಳ್ಳಲು ನಟ ದರ್ಶನ್ …
Read More »ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಬಿಜೆಪಿ ಕಾರ್ಯಕರ್ತರ ಆಗ್ರಹ
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಘಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ …
Read More »: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟವಾಗಿದೆ. ಹಾನಿಗೀಡಾದ ವಿದ್ಯುತ್ ಪರಿಕರಗಳ ದುರಸ್ತಿ ಕಾರ್ಯ ನಡೆದಿದೆ. 2019ರಲ್ಲಿ ಭೀಕರ ಪ್ರವಾಹದಿಂದ ಹೆಸ್ಕಾಂ ತತ್ತರಿಸಿತ್ತು. ಆಗ ಬೆಳಗಾವಿ ಜಿಲ್ಲೆಯಲ್ಲಿ 17 ಸಾವಿರಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿತ್ತು. 5 ಸಾವಿರ ವಿದ್ಯುತ್ ಪರಿವರ್ತಕಗಳು ನೀರಲ್ಲಿ ಮುಳುಗಿದ್ದವು. ಈ ಬಾರಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ, ಹಿರಣ್ಯಕೇಶಿ, ದೂಧಗಂಗಾ, ವೇದಗಂಗಾ, ಮಾರ್ಕಂಡೇಯ …
Read More »ಸರ್ಕಾರದ ಸೌಲಭ್ಯಕ್ಕಾಗಿ ಒಗ್ಗಟ್ಟಾಗಿ: ಶೆಟ್ಟರ್
ರಾಮದುರ್ಗ: ‘ವೀರಶೈವ ಲಿಂಗಾಯತ ಒಳಪಂಗಡಗಳು ಸಮಾಜದ ಪ್ರತಿಭಾವಂತರಿಗೆ ಹಾಗೂ ಸಾಧಕರಿಗೆ ಪ್ರೋತ್ಸಾಹಿಸಲು ಪ್ರೇರಣೆ ನೀಡಬೇಕು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಕರ್ನಾಟಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದ ಸೌಲಭ್ಯಕ್ಕಾದರೂ ಲಿಂಗಾಯತ ಸಮಾಜವನ್ನು ಒಟ್ಟಾಗಿಸುವ ಕಾರ್ಯ ಮಾಡಬೇಕು’ ಎಂದರು. ‘ರಾಜ್ಯದಲ್ಲಿ ಬಣಜಿಗ ಸಮಾಜದ ಎಲ್ಲ ತಾಲ್ಲೂಕು ಘಟಕಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಆದರೆ ರಾಜ್ಯ …
Read More »ಜಿಎಸ್ಟಿಯಲ್ಲಿ ಬದಲಾವಣೆ: ಉದ್ಯಮಿಗಳಿಗೆ ಜಾಗೃತಿ
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ತೆರಿಗೆ ಸಮಿತಿಯಿಂದ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್ಟಿ) ಇತ್ತೀಚಿನ ಬದಲಾವಣೆ ಕುರಿತ ವಿಚಾರ ಸಂಕಿರಣವನ್ನು ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು. ಲೆಕ್ಕಪರಿಶೋಧಕ ಶಂಭುಲಿಂಗಪ್ಪ ಪಾಟೀಲ ಅವರು, ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ, ಪರಿಷ್ಕೃತ ತೆರಿಗೆ ಪದ್ಧತಿ ಕುರಿತು ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ಕಿರಣ್ ಶಾವಿ ಅವರು, ಜಿಎಸ್ಟಿ ಕಾಯ್ದೆಯಲ್ಲಿನ ಬದಲಾವಣೆ ಬಗ್ಗೆ ತಿಳಿಸಿದರು. ಉದ್ದಿಮೆದಾರರೊಂದಿಗೆ ಸಂವಾದ ನಡೆಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, …
Read More »ಆ.24ರಿಂದ ಕನ್ನಡ ವೈದ್ಯ ಬರಹಗಾರರ ಸಮ್ಮೇಳನ
ಬೆಳಗಾವಿ: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್ಇ ಶತಮಾನೋತ್ಸವ ಭವನದ ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೆಎಲ್ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ …
Read More »