Breaking News

Daily Archives: ಆಗಷ್ಟ್ 26, 2024

ಹೆಸರುಕಾಳು ದರ ₹4,000ಕ್ಕೆ ಕುಸಿತ, ಚಿಂತೆಗೀಡಾದ ಜಿಲ್ಲೆಯ ಅನ್ನದಾತ

ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ 40 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ಶೇ 80ರಷ್ಟು ರೈತರು ಈಗಾಗಲೇ ರಾಶಿ ಮಾಡಿದ್ದಾರೆ. ಲಕ್ಷಾಂತರ ಕ್ವಿಂಟಲ್‌ ಹೆಸರುಕಾಳು ಸಿದ್ಧಗೊಂಡಿದೆ. ಆದರೆ, ದರ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಜಿಲ್ಲಾಡಳಿತ ಯಾವಾಗ ಖರೀದಿ ಕೇಂದ್ರ ತೆರೆಯುವುದೋ ಎಂದು ರೈತರು ಕಾದು ಕುಳಿತಿದ್ದಾರೆ.   ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ತುಂಬ ಹದವಾಗಿ ಬಿದ್ದಿದೆ. ಪರಿಣಾಮ ಪ್ರತಿ ವರ್ಷಕ್ಕಿಂತ ಈಗ ಹೆಸರು ಬೆಳೆ ಅತ್ಯಂತ …

Read More »

ಗೃಹಲಕ್ಷ್ಮಿ ದುಡ್ಡಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಿಎಂ ಸ್ಪೆಷಲ್‌ ರಿಕ್ವೆಸ್ಟ್‌;

ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದರ ನಡುವೆಯೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರು ಮಾಡಿರುವ ಕಾರ್ಯವು ಎಲ್ಲರ ಗಮನ ಸೆಳೆದಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಎನ್ನುವ ಗ್ರಾಮದ ಅಕ್ಕಾತಾಯಿ ಲಂಗೂಟಿ ಎನ್ನುವ ವೃದ್ಧೆ ತನಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಾಮದ ಮಹಿಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಫುಲ್‌ ಖುಷ್‌ ಆಗಿದ್ದು, ನಮ್ಮ …

Read More »

ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ?

ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ? ಬೆಂಗಳೂರು: ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಅಮಾನತುಗೊಳ್ಳಬೇಕಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಹೆಚ್ಚುವರಿ ಭಡ್ತಿ ನೀಡಲು ಸರಕಾರ ಸಿದ್ಧತೆ ನಡೆಸಿದೆ. ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಜಂಟಿ ಆಯುಕ್ತರ ಮೇಲೆ ಕಳೆದ ತಿಂಗಳಷ್ಟೇ ಲೋಕಾಯುಕ್ತ ದಾಳಿ ನಡೆಸಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಕೂಡ ದಾಖಲಾಗಿತ್ತು. ಅಕ್ರಮ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಕ್ಕೆ ಲೋಕಾಯುಕ್ತ ವರದಿ ನೀಡಿದೆ. ಅದರಂತೆ …

Read More »

ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು. ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ …

Read More »

ಅಣ್ಣನನ್ನೇ ಹತ್ಯೆಗೈದ ತಮ್ಮ, ತಿಂಗಳ ಹಿಂದೆ ನಡೆದ ಘಟನೆ ಪೊಲೀಸರ ತನಿಖೆಯಿಂದ ಬಯಲು

ಚಿತ್ತಾಪುರ: ತನ್ನ ಹೆಂಡತಿಯೊಡನೆ ಸಲುಗೆಯಿಂದ ಇದ್ದ ತಮ್ಮನನ್ನು ಬೈದಿದ್ದಕ್ಕೆ ಸಿಟ್ಟಿಗೆದ್ದ ತಮ್ಮ ಅಣ್ಣನನ್ನೇ ಕೊಲೆ ಮಾಡಿದ ಘಟನೆ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಕಾಮಣ್ಣ ದೊಡ್ಡ ಹಣಮಂತ (35) ಮೃತ ದುರ್ದೈವಿಯಾಗಿದ್ದು ತಮ್ಮ ಸುರೇಶ ದೊಡ್ಡ ಹಣಮಂತ ಆರೋಪಿಯಾಗಿದ್ದಾನೆ.   ಕಾಮಣ್ಣನ ಅನುಮಾನಾಸ್ಪದ ಸಾವಿನ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವೇಳೆ ತಮ್ಮನ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಆರೋಪಿ ಸುರೇಶ ದೊಡ್ಡ …

Read More »

ಬೆಳಗಾವಿ ಪಾಲಿಕೆ ಕಂಗಾಲು- ಅನುದಾನಕ್ಕಾಗಿ ಬೆಂಗಳೂರಿಗೆ ಸದಸ್ಯನ ಸೈಕಲ್‌ ಸವಾರಿ

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಅನುದಾನ ಇಲ್ಲದೇ ಬೆಳಗಾವಿ ನಗರದ ಅಭಿವೃದ್ಧಿ ಸಂಪೂರ್ಣ ಮರೀಚಿಕೆ ಆಗಿದ್ದು, ರಾಜ್ಯ ಸರ್ಕಾರ ಅನುದಾನ ನೀಡಿ ಗಡಿ ಭಾಗ ಬೆಳಗಾವಿ ಅಭಿವೃದ್ಧಿಯತ್ತ ಗಮನಹರಿಸುವಂತೆ ಆಗ್ರಹಿಸಿ ಪಾಲಿಕೆ ಪಕ್ಷೇತರ ಸದಸ್ಯ ಶಂಕರ ಪಾಟೀಲ ಸೈಕಲ್‌ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲು ನಿರ್ಧರಿಸಿದ್ದಾರೆ. ಸದ್ಯ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಾಕಿ ಉಳಿದಿರುವ 9.30 ಕೋಟಿ ರೂ. ಅನುದಾನದ ಹಂಚಿಕೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಜಟಾಪಟಿ ಶುರುವಾಗಿದ್ದು, …

Read More »

ಜೈಲಲ್ಲಿರುವ ದರ್ಶನ್‌ ಮತ್ತೊಂದು ಫೋಟೋ ಲೀಕ್; ನಿನ್ನೆ ಕೈಲಿ ಸಿಗ್ರೇಟ್​ ಇಂದು ಮೊಬೈಲ್

ಬೆಂಗಳೂರು:​ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ಮೂಲವ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಸಹಿಸಿದ್ದಾನೆ ಎಂದು ಸ್ಯಾಂಡಲ್​ವುಡ್ ನಟ ದರ್ಶನ್ ಆತನನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಡಿ ಗ್ಯಾಂಗ್​ ಜೈಲಿನಲ್ಲಿದೆ. ಈ ಪ್ರಕರಣ ತನಿಕೆ ಹಂತದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಾಗ ಈಗ ಕೆಲವು ಫೋಟೋ ಹಾಗೂ ವಿಡಿಯೋಗಳು ಮತ್ತೊಂದು ಹಂತದಲ್ಲಿ ಸುದ್ದಿ ಮಾಡುತ್ತಿವೆ. ನಿನ್ನೆ ಒಂದು ಫೋಟೋ ವಿಡಿಯೋ ಆದ್ರೆ ಇಂದೂ ಒಂದು ಫೋಟೋ ವೈರಲ್​​ ಆಗಿದೆ. ಕೊಲೆ ಪ್ರಕರಣದಲ್ಲಿ …

Read More »

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ …

Read More »

ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ …

Read More »

ರಾಜ್ಯಾದ್ಯಂತ ‘ ಶ್ರೀಕೃಷ್ಣ ಜನ್ಮಾಷ್ಟಮಿ’ ಆಚರಣೆ

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »