Breaking News

Daily Archives: ಆಗಷ್ಟ್ 27, 2024

ಬೆಳಗಾವಿ: ಕೆಎಎಸ್‌ ಪರೀಕ್ಷೆಯ ಒಎಂಆರ್‌ ಶೀಟ್‌ ನೀಡಲು ವಿಳಂಬ- ದಿಢೀರ್‌ ಪ್ರತಿಭಟನೆ

ಬೆಳಗಾವಿ: ಬೆಳಗಾವಿಯ ಅಂಜುಮನ್‌ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್‌ ಶೀಟ್‌ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ರೊಚ್ಚಿಗೆದ್ದ ಪರೀಕ್ಷಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದರು.   ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕಿತ್ತು. ಹತ್ತು ನಿಮಿಷ ತಡವಾದರೂ ಒಎಂಆರ್ ಸೀಟ್‌ ನೀಡಲಿಲ್ಲ. ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಬಂದು ಘೋಷಣೆ ಕೂಗತೊಡಗಿದರು. ಇದರಿಂದ ಪರೀಕ್ಷಾ ಕೇಂದ್ರದಲ್ಲಿ …

Read More »

ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಸವದತ್ತಿ: ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಇದೀಗ ಶಾಸಕ ವಿಶ್ವಾಸ್ ವೈದ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತೆಕ್ಕೆಗೆ ಮರಳಿದೆ. ಹಲವು ತಿಂಗಳಿಂದ ತೆರವಾಗಿದ್ದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು.   2ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ದಾವಲಬಿ …

Read More »

ಶಾಂತಿ, ಸೌಹಾರ್ದದಿಂದ ಗಣೇಶ ಹಬ್ಬ ಆಚರಿಸಿ: ತಹಶೀಲ್ದಾರ್‌ ಮನವಿ

ಬೈಲಹೊಂಗಲ: ‘ಗೌರಿಗಣೇಶ ಹಬ್ಬವನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಜಾನನ ಯುವಕ ಮಂಡಳಿಗ ಹಿರಿಯರು, ಮುಖಂಡರು ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗೃತಿವಹಿಸಬೇಕು’ ಎಂದು ತಹಶೀಲ್ದಾರ್‌ ಎಚ್.ಎನ್.ಶಿರಹಟ್ಟಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಗಣೇಶ ಹಬ್ಬ ಆಚರಣೆ ಅಂಗವಾಗಿ ಮಂಗಳವಾರ ಬೈಲಹೊಂಗಲ ಹಾಗೂ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಉತ್ಸವ ಮಂಡಳಿಗಳಿಗೆ ಮಂಗಳವಾರ ನಡೆದ ಶಾಂತಿಪಾಲನೆ ಸಭೆ ನೇತೃತ್ವ ವಹಿಸಿ ಮಾತನಾಡಿದರು.   ಡಿವೈಎಸ್ಪಿ ರವಿ …

Read More »

ಕೆಎಎಸ್‌ ಪರೀಕ್ಷೆ: ಒಎಂಆರ್‌ ಶೀಟ್‌ ನೀಡಲು ವಿಳಂಬ, ಪ್ರತಿಭಟನೆ

ಬೆಳಗಾವಿ: ಇಲ್ಲಿನ ಅಂಜುಮನ್‌ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್‌ ಶೀಟ್‌ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ಸಿಟ್ಟಿಗೆದ್ದ ಅಭ್ಯರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದರು.   ಬೆಳಿಗ್ಗೆ 10ಕ್ಕೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕಿತ್ತು. ತಡವಾದರೂ ಒಎಂಆರ್ ಸೀಟ್‌ ನೀಡಲಿಲ್ಲ. ಆಕ್ರೋಶಗೊಂಡ ಅಭ್ಯರ್ಥಿಗಳು ಕೊಠಡಿಯಿಂದ ಹೊರಬಂದು ಘೋಷಣೆ ಕೂಗತೊಡಗಿದರು. ಇದರಿಂದ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. …

Read More »

ದಲಿತ ಯುವಕನ ಕೊಲೆ: ಸಿಪಿಐ(ಎಂ) ಖಂಡನೆ

ರಾಮದುರ್ಗ: ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.   ಈ ಕೊಲೆ ಪ್ರಕರಣವು ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಘಟನೆಯನ್ನು ಖಂಡಿಸಿದರು. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಗೀಡಾದವರ ಕುಟುಂಬಕ್ಕೆ …

Read More »

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ. ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ. ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ …

Read More »

ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್‌ನ್ನು ಸ್ಥಳಾಂತರ ಮಾಡಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಐಷರಾಮಿ ಸವಲತ್ತು ಮತ್ತು ರೌಡಿ ಸಹವಾಸ ಮಾಡಿದ್ದ ದರ್ಶನ್ ಫೋಟೋ, ವಿಡಿಯೋ ವೈರಲ್ ಆಗಿದ್ದವು. ಇದರಿಂದ ಸರ್ಕಾರಕ್ಕೆ ಮತ್ತು ಗೃಹ ಇಲಾಖೆಗೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ರೇಣುಕಸ್ವಾಮಿ ಕೊಲೆ ಕೇಸಿನ ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡುವಂತೆ ಪೊಲೀಸರು ಮತ್ತು ಜೈಲಾಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಮನವಿಗೆ …

Read More »

ಜಿಂದಾಲ್ ನಿಂದ 90 ಸಾವಿರ ಕೋಟಿ ರೂ. ಹೂಡಿಕೆ :ಸಚಿವ ಲಾಡ್ ಸಮರ್ಥನೆ

ಧಾರವಾಡ: ರಾಜ್ಯ ಸರಕಾರ ಜಿಂದಾಲ್‌ಗೆ ಅನುಕೂಲ ಮಾಡಿ ಜಾಗ ಕೊಡುತ್ತಿಲ್ಲ. 90 ಸಾವಿರ ಕೋಟಿ ರೂ.ಗಳನ್ನು ಜಿಂದಾಲ್ ಇಲ್ಲಿ ಹೂಡಿಕೆ ಮಾಡಿದೆ. ಯಾವುದೇ ಒಂದು ಸಂಸ್ಥೆಗೆ ಲೀಸ್ ಕೊಟ್ಟಾಗ ಕಾನೂನು ಪ್ರಕಾರ ಷರತ್ತು ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಜಿಂದಾಲ್‌ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸುತ್ತಿರುವ ಶಾಸಕ ಅರವಿಂದ ಬೆಲ್ಲದ ಅವರ ಕುರಿತು ಸುದ್ದಿಗಾರರುಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಬೆಲ್ಲದ್ ಕೈಗಾರಿಕೆ ಹೊಂದಿದವರು. ಕೆಐಎಡಿಬಿ ಜಾಗವನ್ನು …

Read More »

ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …

Read More »

ಮಣ್ಣಿನ ಗಣಪನ ನಾನಾ ರೂಪ ಸಿದ್ಧ

ಹುಬ್ಬಳ್ಳಿ: ಗಣೇಶನ ಹಬ್ಬಕ್ಕೆ ದಿನಗಣನೆ ಶುರುವಾಗಿರುವಂತೆಯೇ ನಗರದಲ್ಲಿ ಕಲಾವಿದರು ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ರೂಪ, ಬಣ್ಣ ನೀಡುತ್ತಿದ್ದಾರೆ. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ. 3-4 ತಲೆಮಾರುಗಳಿಂದ ಮಣ್ಣಿನ ಗಣಪತಿಗಳನ್ನು ತಯಾರಿಸುವ ಹಲವು ಕುಟುಂಬಗಳು ಇಲ್ಲಿವೆ. ಹೊಸೂರು 2ನೇ ಕ್ರಾಸ್‌, ಬಮ್ಮಾಪುರ ಓಣಿ, ಹಳೇಹುಬ್ಬಳ್ಳಿಯ ಅರವಿಂದ ನಗರ ಹಾಗೂ ಮರಾಠ ಗಲ್ಲಿಗಳಲ್ಲಿ ಈಗ ಮಣ್ಣಿನ ಗಣೇಶ ಮೂರ್ತಿ ತಯಾರಿಸುವ ಕುಟುಂಬಗಳು ಹಗಲು ರಾತ್ರಿ ಕಾರ್ಯ ನಿರತವಾಗಿವೆ. ಹೊಸೂರು- 2ನೇ …

Read More »