78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …
Read More »Monthly Archives: ಆಗಷ್ಟ್ 2024
ಬಲ್ಬ್ನಲ್ಲಿ ಅರಳಿದ ರಾಷ್ಟ್ರಧ್ವಜ
ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ. ಸಂಗನಗೌಡ ನ್ಯಾಮಗೌಡ
Read More »ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…
ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ. ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …
Read More »ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!
ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ ಎಲೆಕ್ಟ್ರಿಕ್ ಗೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರ ಮೇಲಿನ ಸಿಟ್ಟಿಗೆ ಈತ ಈ ಕೃತ್ಯ ಎಸಗಿದ್ದು, ತನ್ನ ತಾಯಿಗೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಟ್ರಕ್ಕಿಂಗ್ ನಲ್ಲಿ ಯುವಕ ಪ್ರಥ್ವಿರಾಜ್ ಮಿಸ್ …
Read More »ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ
ಬೆಂಗಳೂರು: ನಾಳೆ ದೇಶ, ರಾಜ್ಯಾಧ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸ್ವಾತಂತ್ರೋತ್ಸ ವೇಳೆ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ …
Read More »ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ?
ಬೆಳಗಾವಿ : ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ ಎಂಬ ಪ್ರಶ್ನೆ ಮೂಡಿದೆ. ಜಾಹಿರಾತು ಫಲಕದಲ್ಲಿ ಕನ್ನಡವನ್ನು ಶೇಕಡಾ 70 ರಷ್ಟು ಬಳಸಬೇಕಾದ ಕಾನೂನು ಕೇವಲ ಜನಸಾಮಾನ್ಯರಿಗೆ ಮಾತ್ರ ಸೀಮಿತವಾ ಎಂಬ ಪ್ರಶ್ನೆ ಮೂಡಿದೆ. ಹೌದು ಸ್ವಾತಂತ್ರ್ಯ ದಿನದ ಅಂಗವಾಗಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಅವರ ಹೆಸರಿನಲ್ಲಿ ಅಳವಡಿಸಿರುವ ಬ್ಯಾನರ್ ನಲ್ಲಿ ಕನ್ನಡವೇ ಮಾಯವಾಗಿದೆ. ಕೇವಲ ಆಂಗ್ಲ ಭಾಷೆಯಲ್ಲೇ ಅವರು ಶುಭಾಶಯ ತಿಳಿಸಿದ್ದು …
Read More »ಬೆಳಗಾವಿಯಶ್ರೀಶೈಲ ಮಗದುಮ್ಮಗೆ ಮುಖ್ಯಮಂತ್ರಿ ಪದಕ
ಬೆಳಗಾವಿ : ಜಿಲ್ಲಾ ಪೊಲೀಸ್ ಗಣಕಯಂತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ ಮಗದುಮ್ಮ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಉಳಿದಂತೆ ಬೆಳಗಾವಿಯ ಆಂತರಿಕಾ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಶಾಂತ್ ಹಿರೇಮಠ, ಕಂಗ್ರಾಳಿಯ ಕೆಎಸ್ಆರ್ ಪಿ ತರಬೇತಿ ಶಾಲೆಯ ದೇಮಪ್ಪಾ ದಂಡೈನವರ, ಕಾಕತಿ ಪೊಲೀಸ್ ಠಾಣೆ ಸಿಬ್ಬಂದಿ ಸುಭಾಷ್ ಬಿ.ಎಲ್. ಬೆಳಗಾವಿ ಉತ್ತರ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಕಾಶಿನಾಥ ಈರಗಾರ, ಮಾಳಮಾರುತಿ ಪೊಲೀಸ್ ಠಾಣೆ ಸಹಾಯಕ ಸಬ್ ಇನ್ಸ್ಪೆಕ್ಟರ್ …
Read More »ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ; ಸ್ಥಳೀಯರಿಂದ ಬಿದ್ದ ಗೂಸಾ
ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಮಂಗಳವಾರ (ಆ.13) ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಯುವಕನ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ. ಹರೀಶ್ ಎಂಬ ಯುವಕನ ಕೈ ಬೆರಳು ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಹಿಡಿದು ವಿಚಾರಿಸಿದ್ದಾರೆ. …
Read More »ಸೆಪ್ಟಂಬರ್ನಲ್ಲಿ ಸಂಪುಟ ಸರ್ಜರಿ?
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡದೆ ಇದ್ದರೆ ಸೆಪ್ಟಂಬರ್ ತಿಂಗಳಿನಲ್ಲಿ ಸಚಿವ ಸಂಪುಟ ಸಣ್ಣ ಮಟ್ಟಿಗೆ ಪುನಾರಚನೆ ಆಗುವ ಸಾಧ್ಯತೆ ಇದೆ. ಈಗಿರುವ ಸಂಪುಟದಿಂದ ಐದಾರು ಸಚಿವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ಕಲ್ಪಿಸುವ ಬಗ್ಗೆ ಪಕ್ಷದಲ್ಲಿ ಗಂಭೀರ ಚಿಂತನೆ ನಡೆದಿದೆ. ಈಚೆಗೆ ಮುಡಾ ಹಗರಣ ವಿಷಯವಾಗಿ ವಿಪಕ್ಷಗಳ ಪಾದಯಾತ್ರೆ ಸಂದರ್ಭದಲ್ಲೇ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರಿಗೆ ರಾಜ್ಯ ಉಸ್ತುವಾರಿ …
Read More »ಆನ್ಲೈನ್ ವಂಚಕರಿಗೆ ಉದ್ಯಮ, ಉದ್ಯಮಿಗಳೇ ಟಾರ್ಗೆಟ್?
ಉಡುಪಿ: ಆನ್ಲೈನ್ ವಂಚಕರು ವಿವಿಧ ಮಾದರಿಯಲ್ಲಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದು, ಭಿನ್ನ-ವಿಭಿನ್ನ ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಈಗ ಉದ್ಯಮಿಗಳನ್ನು ಗುರಿಯಾಗಿಸಿ ಕೊಂಡು ವಂಚಕರು ಹೊಸ ಷಡ್ಯಂತ್ರ ಹೆಣೆಯುತ್ತಿದ್ದಾರೆ. ಉಡುಪಿಯ ಹೊಟೇಲ್ವೊಂದರ ಮಾಲಕರಿಗೆ “ನಾಳೆ ಮಧ್ಯಾಹ್ನ 12 ಗಂಟೆಗೆ ಇಂತಿಷ್ಟು ಪ್ಲೇಟ್ ತಿಂಡಿ ಬೇಕು’ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ದರ ವಿಚಾರಿಸಿದ್ದಾರೆ. ಬಳಿಕ ಮುಂಗಡ ಹಣ ಎಷ್ಟು ಪಾವತಿಸಬೇಕು ಎಂದು ಸೂಚಿಸಿದ ಮೇರೆಗೆ ಹೊಟೇಲ್ ಮಾಲಕರು 1 ಸಾವಿರ …
Read More »