ಹುಬ್ಬಳ್ಳಿ: ಹೊಸದಾಗಿ ಕೃಷಿ ಪಂಪ್ಸೆಟ್ ಅಳವಡಿಸುವುದನ್ನು ಸ್ಥಗಿತಗೊಳಿಸಿರುವ ಸರ್ಕಾರ ಒಂದೆಡೆಯಾದರೆ, ಕೆಟ್ಟುಹೋಗಿರುವ ಹಳೆಯ ಟ್ರಾನ್ಸ್ಫಾರ್ಮರ್ಗಳನ್ನು ಬದಲಾಯಿಸಲು ಹೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರೈತರು ತೀವ್ರ ಕಷ್ಟ ಎದುರಿಸುತ್ತಿದ್ದಾರೆ. ಇದು ಕೇವಲ ರೈತರ ಜೀವನದ ಮೇಲಲ್ಲದೇ ಕೃಷಿ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಅಪಾಯ ತಂದೊಡ್ಡಿದೆ. ಕಳೆದ ವರ್ಷಕ್ಕಿಂತ ಮುಂಚೆ ಸರ್ಕಾರವೇ ರೈತರ ಜಮೀನುಗಳಲ್ಲಿ ನೀರಾವರಿ ಪಂಪ್ಸೆಟ್ ಅಳವಡಿಸುತ್ತಿತ್ತು. ಇದಕ್ಕಾಗಿ ಬೇಕಾದ ವಿದ್ಯುತ್ ತಂತಿ, ಕಂಬ, ಟ್ರಾನ್ಸ್ಫಾರ್ಮರ್ಗಳನ್ನು ಪೂರೈಸುತ್ತಿತ್ತು. 5-6 …
Read More »Monthly Archives: ಆಗಷ್ಟ್ 2024
ವಯನಾಡು ಭೂಕುಸಿತ: ದೇಣಿಗೆ ನೀಡಿದ ಕಬಡ್ಡಿ ಪಟು
ರಿಪ್ಪನ್ಪೇಟೆ: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್ ₹ 15,000 ದೇಣಿಗೆ ನೀಡಿದ್ದಾರೆ. ಈಚೆಗೆ ಹೈದರಾಬಾದ್ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್ ಅವರು ಗ್ರಾಮದ ಸವಿತಾ …
Read More »ತುಮರಿ | ಬಸ್ ಕಾಣದ ಗ್ರಾಮಗಳು; ಗ್ರಾಮಸ್ಥರ ಗೋಳು ಕೇಳುವವರಿಲ್ಲ..
ತುಮರಿ: ತಾಲ್ಲೂಕು ಕೇಂದ್ರದಿಂದ 55 ಕಿ.ಮೀ ದೂರದ ಕರೂರು ಹೋಬಳಿಯ ಹಲವು ಗ್ರಾಮಗಳು ಇಂದಿಗೂ ಬಸ್ ಸೌಲಭ್ಯವನ್ನೇ ಕಂಡಿಲ್ಲ. ಇಲ್ಲಿನ ಜನರು ಸಮೀಪದ ತುಮರಿ, ಕರೂರು, ನಿಟ್ಟೂರು, ಇಲ್ಲವೇ ಹೊಳೆಬಾಗಿಲಿಗೆ ಬಂದು ಬಸ್ ಹತ್ತಿ ಕೆಲಸ, ಕಾರ್ಯಗಳಿಗೆ ತೆರಳಬೇಕಿದೆ. ಕೆಲ ಗ್ರಾಮಗಳು ದಶಕಗಳಿಂದ ಬಸ್ ಸೌಲಭ್ಯ ಕಂಡಿಲ್ಲ. ಇನ್ನು ಕೆಲ ಗ್ರಾಮಗಳಲ್ಲಿ ಮೊದಲಿದ್ದ ಖಾಸಗಿ ಬಸ್ಗಳು ಕೋವಿಡ್, ಶಕ್ತಿ ಯೋಜನೆಯ ಪರಿಣಾಮ ಸೇವೆ ಸ್ಥಗಿತಗೊಳಿಸಿವೆ. ಸಿಗ್ಗಲು, ಕಳೋಡಿ, ಬೊಬ್ಬಿಗೆ, ಹೆರಾಟೆ …
Read More »ಯಾದಗಿರಿ ಪಿಎಸ್ಐ ಸಾವು; ಮೃತ ಪತ್ನಿಗೆ ಸರ್ಕಾರ ಉದ್ಯೋಗ, ಪರಿಹಾರ
ಬೆಂಗಳೂರು: ಯಾದಗಿರಿ ಪಿಎಸ್ಐ ಸಾವು ಪ್ರಕರಣದಲ್ಲಿ ಮೃತರ ಪತ್ನಿಗೆ ಸರ್ಕಾರದಿಂದ ಉದ್ಯೋಗ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಪಿಎಸ್ಐ ಸಾವು ಪ್ರಕರಣವನ್ನು ಈಗಾಗಲೇ ಸಿಒಡಿಗೆ ನೀಡಲಾಗಿದೆ. ಅವರು ತನಿಖೆ ಶುರು ಮಾಡಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾನು ಬುಧವಾರ ಮೃತ ಪಿಎಸ್ಐ ಮನೆಗೆ ಹೋಗಿ ಅವರ …
Read More »10 ಮಹಾನಗರ ಪಾಲಿಕೆ ಕಾರ್ಯ ಸ್ಥಗಿತ: ನಾಳೆ ಪಾಲಿಕೆ ನೌಕರರ ಸಭೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಆರೋಗ್ಯ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಂದಿನ ಹೋರಾಟ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಮಂಗಳವಾರ(ಆ.6) ಖಾಸಗಿ ಹೋಟೆಲ್ನಲ್ಲಿ ತುರ್ತು ಸಭೆ ಆಯೋಜಿಸಿದೆ. ವೃಂದ ಮತ್ತು ನೇಮಕಾತಿ(ಸಿ ಆಯಂಡ್ ಆರ್) ನಿಯಾಮವಳಿಗೆ ತಿದ್ದುಪಡಿ, ಪಾಲಿಕೆ ನೌಕರರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಆರೋಗ್ಯ ಸೌಲಭ್ಯ, ಕೆಜಿಐಡಿ ಮತ್ತು ಜಿಪಿಎಸ್ ಯೋಜನೆ ಅನುಷ್ಠಾನ, ಕ್ರೀಡಾಕೂಟಕ್ಕೆ …
Read More »ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.
ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …
Read More »ಉಪ್ಪಾರ ಸಮಾಜಮೀಸಲಾತಿ ಹೋರಾಟ ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕುವ ಪ್ರಾಮಾಣಿಕಪ್ರಯತ್ನ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಹಲವಾರು ವರ್ಷಗಳಿಂದ ಭಗೀರಥ ಉಪ್ಪಾರ ಸಮಾಜವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದು, ಈ ಸಮಾಜಕ್ಕೆ ಸಿಗಬೇಕಿರುವ ಸರ್ಕಾರದ ಮೀಸಲಾತಿಯನ್ನು ದೊರಕಿಸಿಕೊಡುವ ಸಂಬಂಧ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೇ ನಾವು ಕೂಡಾ ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕುವ ಪ್ರಾಮಾಣಿಕವಾದ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಹೊರವಲಯದಲ್ಲಿರುವ ಮೂಡಲಗಿ ಕ್ರಾಸ್ನಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಭಗೀರಥ ಮೂರ್ತಿಯನ್ನು ಅನಾವರಣಗೊಳಿಸಿ …
Read More »ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ
ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …
Read More »ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್ರನ್ನು ಟ್ರೋಲ್ ಮಾಡಿದ ಫ್ಯಾನ್ಸ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವನಟ ದರ್ಶನ್(Actor Darshan) ಹಾಗೂ ಆತನ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿಬರುತ್ತಿದ್ದಕ್ಕೆ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಹಾಗೂ ವಿಜಯನಗರದ ಎಸಿಪಿ ಚಂದನ್ ಕುಮಾರ್ ಕಾರ್ಯಪ್ರವೃತ್ತರಾಗಿದ್ದರು. ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್ನನ್ನು ವಶಕ್ಕೆ ಪಡೆದರು.ಎಸಿಪಿ ಚಂದನ್ ಕಾರ್ಯದಕ್ಷತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನಟ ದರ್ಶನ್ ಅಭಿಮಾನಿಗಳು …
Read More »ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ
ಬೆಳಗಾವಿ: ತಾಲ್ಲೂಕಿನ ಬಾವನ ಸವದತ್ತಿ ಗ್ರಾಮದ ಬಾಬುರಾವ್ ಸಂಜೀವ ಬಾಪಕರ (40) ಎಂಬ ವ್ಯಕ್ತಿ ಶವ, ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಬುರಾವ್ ಅವರು ಕಾಗವಾಡ ಸಕ್ಕರೆ ಕಾರ್ಖಾನೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಿಗ್ಗೆ ಮನೆಯಿಂದ ಹೋದವರು ಮತ್ತೆ ಬಂದಿರಲಿಲ್ಲ. ಅಂಕಲಿ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಅಂಕಲಿ …
Read More »