ಚನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಗರಾಜ ತಂದೆ ಬಸವರಾಜ ಈ …
Read More »Monthly Archives: ಆಗಷ್ಟ್ 2024
ನವೀಕರಣವಾಗದ ಲೀಸ್ ಆಸ್ತಿಯಿಂದ ನಷ್ಟ
ಹುಬ್ಬಳ್ಳಿ: ಲೀಸ್ಗೆ ನೀಡಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಸ್ತಿಗಳ ನವೀಕರಣವಾಗದ ಕಾರಣ ಪಾಲಿಕೆಗೆ ಪ್ರತಿ ವರ್ಷ ₹50 ಕೋಟಿಯಿಂದ ₹100 ಕೋಟಿವರೆಗೆ ನಷ್ಟವಾಗುತ್ತಿದೆ. ಮಹಾನಗರ ಪಾಲಿಕೆಯ ₹2,744 ಆಸ್ತಿಗಳನ್ನು ಲೀಸ್ಗೆ ನೀಡಲಾಗಿದೆ. ಸ್ವಾತಂತ್ರ್ಯಪೂರ್ವ ಮತ್ತು ನಂತರದಿಂದ ಒಂದು ವರ್ಷದ ಅವಧಿಯಿಂದ 999 ವರ್ಷಗಳ ಅವಧಿಗೆ ಲೀಸ್ಗೆ ನೀಡಿರುವ ಆಸ್ತಿಗಳು ಅದರಲ್ಲಿವೆ. ಕೆಲವರಿಗೆ 50 ಚದರ ಅಡಿ ಆಸ್ತಿಯನ್ನು ಸಹ ಲೀಸ್ ನೀಡಲಾಗಿದೆ. ರಸ್ತೆ ನಿರ್ಮಾಣ ಕಾಮಗಾರಿಗೆ ಕೆಲವು ಆಸ್ತಿಗಳು …
Read More »ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ’
ಗುಳೇದಗುಡ್ಡ: ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಕಟ್ಟಡ ಸೇರಿದಂತೆ ಇತರೆ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು. ಪಟ್ಟಣದ ಹೊಸಪೇಟೆ ಸಂಗನಬಸವೇಶ್ವರ ನಗರದಲ್ಲಿ ಗುರುವಾರ ಲಕ್ಷ್ಮಿ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳು ನೈಜ ಕಟ್ಟಡ ಕಾರ್ಮಿಕರಿಗೆ …
Read More »ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅಗತ್ಯ
ಧಾರವಾಡ: ‘ಕ್ರೀಡಾಸಕ್ತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಆರೋಗ್ಯಯುತ ಜೀವನಕ್ಕೆ ಕ್ರೀಡಾ ಚಟುವಟಿಕೆಗಳು ಅಗತ್ಯ’ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಹಾಕಿ ಆಟಗಾರ ಧ್ಯಾನ್ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವಾಗಿ ಆಚರಿಸಲಾಗುತ್ತದೆ. ಅವರ …
Read More »‘ಭಕ್ತಿ ಸಮರ್ಪಣೆಗೆ ಇಷ್ಟಲಿಂಗ ಪೂಜೆ’
ಧಾರವಾಡ: ‘ಪರಮಾತ್ಮನ ಆರಾಧನೆಗೆ ಇಷ್ಟಲಿಂಗ ಪೂಜೆ ಅವಶ್ಯ’ ಎಂದು ಮುಂಡಗೋಡದ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ ಹೇಳಿದರು. ನಗರದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಬಸವೇಶ್ವರ ಧರ್ಮ ಫಂಡ ವತಿಯಿಂದ ಗುರುವಾರ ಏರ್ಪಡಿಸಿದ್ದ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಇಷ್ಟಲಿಂಗ ಪೂಜೆ ಮಾಡಲು ಜಾತಿ, ಮತ, ಪಂಥ, ಭೇದ ಇಲ್ಲ. ಇದು ದೇವರಿಗೆ ಭಕ್ತಿ ಸಮರ್ಪಿಸುವ ವಿಧಾನ’ ಎಂದರು. ಬಸವೇಶ್ವರ ಧರ್ಮ ಫಂಡ ಅಧ್ಯಕ್ಷ ಎಸ್.ಆರ್. …
Read More »ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ನಮಗೆ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ’ ಎಂದು ಹೇಳಿದರು. ‘ಕಾಂಗ್ರೆಸ್ ಎಂದೆಂದಿಗೂ ಬಡವರ …
Read More »ಹಿಂಡಲಗಾ ಜೈಲು ಸೇರಿದ ದರ್ಶನ್ ಸಹಚರ ಪ್ರದೂಶ್
ಬೆಳಗಾವಿ: ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು. ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು. ಭದ್ರತಾ ಸಿಬ್ಬಂದಿ ಅರೋಪಿಯ ಬ್ಯಾಗನ್ನು ಸಂಪೂರ್ಣ ಜಾಲಾಡಿದರು. ಬ್ಲ್ಯಾಂಕೆಟ್ ಅನ್ನು ಒಳಗೆ ತೆಗೆದುಕೊಂಡು ಹೋಗಲು ನಿರಾಕರಿಸಿದರು. ಬ್ಯಾಗಿನಲ್ಲಿ ಔಷಧಿ ಬಾಟಲಿ ಇದ್ದು, ವೈದ್ಯರ ಸಲಹೆ ಮೇರೆಗೆ ಕೊಡುತ್ತೇವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.
Read More »ದರ್ಶನ್ ನಿಗಾಕ್ಕೆ CCTV, ಬಾಡಿವೋರ್ನ್ ಕ್ಯಾಮೆರಾ: ಸೂಪರಿಂಟೆಂಡೆಂಟ್ಗೆ DIG ಸೂಚನೆ
ಬೆಳಗಾವಿ: ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು ಜೈಲಿನ ಸೂಪರಿಂಟೆಂಡೆಂಟ್ ಜ್ಞಾಪನಾ ಪತ್ರ ಬರೆದಿದ್ದಾರೆ. ‘ದರ್ಶನ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು. ಆ ಕೊಠಡಿಗೆ 24×7 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಿಸಬೇಕು. ಪ್ರತಿನಿತ್ಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಶೇಖರಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ‘ದರ್ಶನ್ ಇರುವ ಸೆಲ್ನ ಕರ್ತವ್ಯಕ್ಕೆ ಪ್ರತ್ಯೇಕವಾಗಿ ಒಬ್ಬ ಮುಖ್ಯವೀಕ್ಷಕ ಅಧಿಕಾರಿ ನಿಯೋಜಿಸಬೇಕು. …
Read More »ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.
ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್ಗಳಿಗೆ …
Read More »19 ಕೋಟಿ ವೆಚ್ಚದಲ್ಲಿ ಕೆರೆ ಭರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಹಿರೇಬಾಗೇವಾಡಿ: ‘ಈ ವರ್ಷ ಉತ್ತಮ ಮಳೆಯಾದ ಕಾರಣ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ₹19 ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಗೆ ಬುಧವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಬಾವಿ ಕೆರೆ ತುಂಬಿಸುವ …
Read More »