ವಿಜಯಪುರ : ಹೆಣ್ಣಾಗಿ ಜನಿಸಿ ಗಂಡಾಡಿ ಪರಿವರ್ತನೆಗೊಂಡಿದ್ದ ವ್ಯಕ್ತಿಯನ್ನು ಹಾಡುಹಗಲೆ ವಿವಸ್ತ್ರಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಕ್ಕಾಗಿ ಪ್ರಕಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಮಂಗಳಮುಖಿಯರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ ಆಗಿತ್ತು. ಇದರಿಂದ ಎಚ್ಚತ್ತ ಪೊಲೀಸರು ಬಾಧಿತನಿಂದ ದೂರು ಪಡೆದು, ಕೃತ್ಯ ನಡೆಸಿದ ಐವರು ಮಂಗಳಮುಖಿಯರ ವಿರುದ್ಧ ದೂರು ದಾಖಲಿಸಿಕೊಂಡು, ಬಂಧಿಸಿದ್ದಾರೆ. ಇದೀಗ ಇಡೀ ಪ್ರಕರಣ ‘ನಾನವಳಲ್ಲ’ ಎಂಬ ಕಥೆಗೆ ತಿರುಗಿದೆ. ನಗರದ ಬಸ್ ನಿಲ್ದಾಣದ ಪರಿಸರದಲ್ಲಿ …
Read More »Monthly Archives: ಆಗಷ್ಟ್ 2024
ಕರ್ನಾಟಕ ರಾಜಕಾರಣಲ್ಲಿ ಶಕುನಿ ರಾಜಕೀಯ ಜಾಸ್ತಿಯಾಗುತ್ತಿದೆ: ಹೆಬ್ಬಾಳಕರ
ಬೆಳಗಾವಿ: ಕರ್ನಾಟಕ ರಾಜಕಾರಣಲ್ಲಿ ದಿನದಿಂದ ದಿನಕ್ಕೆ ಶಕುನಿ ರಾಜಕೀಯ ಜಾಸ್ತಿಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ಸವದತ್ತಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ವೈಮನಸ್ಸು ತಂದಿಡುವುದೇ ಕೆಲಸವಾಗುತ್ತಿದೆ ಎಂದು ಕಿಡಿಕಾರಿದರು. ರಾಜ್ಯಾಧ್ಯಕ್ಷರಿಂದ ಒಳ ಒಪ್ಪಂದದ ರಾಜಕೀಯ ನಡೆಯುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯತ್ನಾಳ್ ಅವರ ಬಗ್ಗೆ …
Read More »ಇಬ್ಬರು ಬೈಕ್ ಕಳ್ಳರ ಬಂಧನ; 11 ಬೈಕ್ ಪೊಲೀಸರ ವಶಕ್ಕೆ
ಚನ್ನಮ್ಮನ ಕಿತ್ತೂರು : ಚನ್ನಮ್ಮನ ಕಿತ್ತೂರು, ಸವದತ್ತಿ, ಖಾನಾಪುರ,ಬೈಲಹೊಂಗಲ ಸೇರಿ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಆರೋಪಿಗಳನ್ನು ಚನ್ನಮ್ಮನ ಕಿತ್ತೂರು ಪೊಲೀಸರು ಬಂಧಿಸಿದ್ದಾರೆ. ಚನ್ನಮ್ಮನ ಕಿತ್ತೂರು ತಾಲೂಕಿನ ದೇಮಟ್ಟಿ ಗ್ರಾಮದ ಪುಂಡಲೀಕ ಸಿದ್ದಪ್ಪ ಕುರಿ (37) ಹಾಗೂ ಸುಲೇಮಾನ ರೆಹಮಾನಸಾಬ ಹವಾಲ್ದಾರ್(30) ಆರೋಪಿಗಳು. ಬೈಕ್ ಕಳ್ಳತನ ಮಾಡಿ ಬೇರೆ ಬೇರೆ ಗ್ರಾಮಗಳಲ್ಲಿ ಮಾರಾಟ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿದ ಚನ್ನಮ್ಮನ ಕಿತ್ತೂರು ಪೊಲೀಸರು ಆರೋಪಿಗಳಿಂದ ವಿವಿಧ ಕಂಪನಿಯ ಸುಮಾರು …
Read More »ಭರ್ತಿಯಾಗುವ ಹಂತ ತಲುಪಿದ ಮಲಪ್ರಭಾ ಜಲಾಶಯ
ಬೆಳಗಾವಿ: ಖಾನಾಪುರ ತಾಲೂಕಿನ ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2075.85 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಈಗ 24400 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಜಲಾಶಯದ ನೀರಿನ ಮಟ್ಟ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕ್ರಮೇಣ 15 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ …
Read More »ಅಂಗನವಾಡಿಗಳಿಗೂ ಹೈಟೆಕ್ ಸ್ಪರ್ಶ-ಸಚಿವೆ ಹೆಬ್ಬಾಳಕರ
ಬೆಳಗಾವಿ: ದೇಶ ಬೆಳೆಯುತ್ತಿದೆ; ರಾಜ್ಯವೂ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಹಾಗೆಯೇ ನಮ್ಮ ಅಂಗನವಾಡಿಗಳೂ ಉನ್ನತೀಕರಣ ಆಗಬೇಕೆಂಬ ಆಶಯದಿಂದ ನಮ್ಮ ಇಲಾಖೆ ಅಂಗನವಾಡಿಗಳನ್ನು ಆಧುನೀಕರಣಗೊಳಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಇಲಾಖೆ ವತಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ಇದು ಪೈಪೋಟಿ …
Read More »ಕಂಚು ಗೆದ್ದ ಸ್ವಪ್ನಿಲ್ಗೆ ₹1 ಕೋಟಿ ಬಹುಮಾನ ಘೋಷಿಸಿದ ಸಿಎಂ ಶಿಂದೆ
ಮುಂಬೈ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸ್ವಪ್ನಿಲ್ ಕುಸಳೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ₹1 ಕೋಟಿ ಬಹುಮಾನ ಘೋಷಣೆ ಮಾಡಿದ್ದಾರೆ. ಕುಸಳೆ ಅವರು 50 ಮೀಟರ್ ಶೂಟಿಂಗ್ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೂರು ಪದಕಗಳು ಒಲಿದಂತಾಗಿದೆ. ಕುಸಳೆ ಅವರ ತಂದೆ ಮತ್ತು ತರಬೇತುದಾರರೊಂದಿಗೆ ಸಿಎಂ ಮಾತುಕತೆ ನಡೆಸಿದ್ದಾರೆ, ಜತೆಗೆ …
Read More »ಪಾದಯಾತ್ರೆ ನಿಗದಿಯಂತೆ ನಡೆಯಲಿದೆಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.:ಜೋಶಿ
ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದರು. ಪಾದಯಾತ್ರೆಗೆ ಜೆಡಿಎಸ್ ಅಸಮಾಧಾನ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಪಾದಯಾತ್ರೆ ನಿಲ್ಲಲ್ಲ. ಜೆಡಿಎಸ್ ನವರನ್ನೂ ಮನವೊಲಿಸಲಾಗುವುದು ಎಂದು ಹೇಳಿದರು. ಇನ್ನು …
Read More »ಗುಡಿಸಲು ತೆರವುಗೊಳಿಸದಂತೆ ಪ್ರತಿಭಟನೆ
ವಿಜಯಪುರ (ದೇವನಹಳ್ಳಿ): ಹೋಬಳಿಯ ಕೋರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡುವನಹಳ್ಳಿ ಗ್ರಾಮದ ಸಮೀಪ ಇರುವ ತಮ್ಮ ಗುಡಿಸಲಗಳನ್ನು ತೆರವುಗೊಳಿಸಿದಂತೆ ಇಲ್ಲಿನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಸರ್ವೇ ನಂ.36 ರಲ್ಲಿ ಇರುವ 2 ಎಕರೆ 30 ಗುಂಟೆ ಜಾರ ಸರ್ಕಾರದ್ದು, ಸರ್ಕಾರಿ ಜಾಗದಲ್ಲಿ ಅನಧಿಕೃತ ಗುಡಿಸಲು ನಿರ್ಮಿಸಿರುವುದು ಸರಿಯಿಲ್ಲ. ಇಲ್ಲಿರುವ ಗುಡಿಸಿಲುಗಳನ್ನು ತೆರವುಗೊಳಿಸಲಾಗುವುದು ಎಂದು ಹೇಳಿ ಎಚ್ಚರಿಕೆಯ ಫಲಕ ಅಳವಡಿಸಲು ಅಧಿಕಾರಿಗಳು ಮುಂದಾದರು. ಇದರಿಂದ ಕೆರಳಿದ ಗುಡಿಸಲು ನಿವಾಸಿಗಳು ಗುಡಿಸಲುಗಳ …
Read More »ಹೊಟ್ಟೆ ತುಂಬಿಸದ ಕಾಳಜಿ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ
ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …
Read More »ಸಿದ್ದರಾಮಯ್ಯಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್..!
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕಚೇರಿಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಕೆ ಪಾಟೀಲ್ ರಾಜ್ಯಪಾಲರ ಕಚೇರಿಯಿಂದ ಅವರಿಗೆ ನೋಟಿಸ್ ಬಂದಿದೆ. ತಪ್ಪು ಗ್ರಹಿಕೆಯಿಂದ …
Read More »