Breaking News

Daily Archives: ಸೆಪ್ಟೆಂಬರ್ 1, 2024

ಮಾನವೀಯ ಮೌಲ್ಯಗಳೊಂದಿಗೆ ಪ್ರಾಮಾಣಿಕ ಬದುಕು ಕಟ್ಟಿಕೊಳ್ಳಿ; ಜ| ಸಂತೋಷ್‌ ಹೆಗ್ಡೆ

ಶಿರ್ವ: ದುರಾಸೆ ದೇಶದಲ್ಲಿ ರೋಗವಾಗಿ ಬೆಳೆಯುತ್ತಿದ್ದು, ಯುವಜನತೆ ಹೆತ್ತವರ ಸಹಕಾರದೊಂದಿಗೆ ಇದ್ದುದರಲ್ಲಿಯೇ ಸಂತಸ ಪಡುವ ಗುಣಗಳನ್ನು ಬೆಳೆಸಿಕೊಂಡಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ.ಮಾನವೀಯತೆ ಇದ್ದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕ ಬದುಕು ಕಟ್ಟಿಕೊಳ್ಳುವುದ ರೊಂದಿಗೆ ಸಮಾಜದ ಭಾವನೆಗಳನ್ನು ಬದಲಾಯಿಸಬಹುದು ಎಂದು ಸರ್ವೋತ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜ| ಎನ್‌.ಸಂತೋಷ್‌ ಹೆಗ್ಡೆ ಹೇಳಿದರು. ಅವರು ಸೆ.1 ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ …

Read More »

ಕೋವಿಡ್ ಹಗರಣದ ತನಿಖೆಯಾಗಲಿ, ನಮಗೆ ಯಾವುದೇ ತೊಂದರೆಯಿಲ್ಲ: ಜೋಶಿ

ಹುಬ್ಬಳ್ಳಿ: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಮಾಡಲಿ ನಮಗೆ ಯಾವುದೇ ತೊಂದರೆಯಿಲ್ಲ. ಯಾರಾದರು ಭ್ರಷ್ಟಾಚಾರ ಮಾಡಿದ್ದರೆ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೋವಿಡ್ ಕಾಲದ ಹಗರಣದ ಬಗ್ಗೆ ಇವರಿಗೆ ನೆನಪಾಗಲಿಲ್ಲವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ …

Read More »

ಧರ್ಮ ಗೌರವಿಸುವ ಜನರೊಂದಿಗೆ ವ್ಯಾಪಾರ ಮಾಡಿ: ಯತ್ನಾಳ್

ವಿಜಯಪುರ: ಹಬ್ಬ-ಹರಿದಿನಗಳು ಸೇರಿ ಇತರ ದಿನಗಳಲ್ಲೂ ಸನಾತನ ಹಿಂದೂ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯವನ್ನು ಗೌರವಿಸುವ, ಪ್ರೀತಿಸುವ ಹಾಗೂ ಉಳಿಸಿ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಮ್ಮ ಹಿಂದೂ ಧರ್ಮ ನಮ್ಮ ದೇಶದ ಒಂದು ಜೀವನದ ಪದ್ದತಿ, ಸಂಸ್ಕೃತಿಯಾಗಿದೆ. ದೇಶದ ಸುರಕ್ಷತೆ, ಅಭಿವೃದ್ಧಿ ಜತೆಗೆ ಧರ್ಮದ ಉಳಿವಿಗಾಗಿ, ನಮ್ಮ ಧರ್ಮವನ್ನು ಗೌರವಿಸುವ, ದೇಶಾಭಿಮಾನ ಹೊಂದಿರುವ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರಿಂದ ಹಿಡಿದು, ದೊಡ್ಡ …

Read More »

ʼಸಿಎಂ ಕುರ್ಚಿʼಗೆ ಕರ್ಚೀಫ್‌ ಹಾಕಿದ ಮತ್ತೊಬ್ಬ ನಾಯಕ; ಯಾರು?

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿರುವುದರ ನಡುವೆಯೇ ಈ ರೇಸ್‌ಗೆ ಮತ್ತೊಬ್ಬ ಕಾಂಗ್ರೆಸ್ ನಾಯಕ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ ಕುರ್ಚಿಯ ಪ್ರಬಲ ಆಕಾಂಕ್ಷಿ ಎನ್ನುವ ಗುಸುಗುಸು ಇದೆ. ಇದಲ್ಲದೆ ಈಗಾಗಲೇ ಹಲವು ಕಾಂಗ್ರೆಸ್‌ ನಾಯಕರು ಸಿಎಂ ಆಗುವ ಬಗ್ಗೆ ಕನಸು ಕಾಣುತ್ತಿದ್ದಾರೆ. ಈಗ ಈ ಸಿಎಂ ರೇಸ್‌ಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೂಡ ಇಳಿದಿದ್ದಾರೆ. ತಾವು ಕೂಡ ಸಿಎಂ ಆಗಬೇಕು ಎನ್ನುವ …

Read More »

ಗದಗ- ಬೆಟಗೇರಿ ನಗರಸಭೆ | ಗದ್ದುಗೆ ಗುದ್ದಾಟ: ಎರಡೂ ಪಕ್ಷದಿಂದ ‘ಚತುರ ನಡೆ’

ಗದಗ: ಇಲ್ಲಿನ ಗದಗ- ಬೆಟಗೇರಿ ನಗರಸಭೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ಮೊದಲನೇ ಅವಧಿ ಮುಗಿದು, ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡ ನಂತರದಿಂದ ಇಲ್ಲೀವರೆಗೆ ಹಲವು ರಾಜಕೀಯ ಮೇಲಾಟಗಳು, ಆರೋಪ- ಪ್ರತ್ಯಾರೋಪಗಳು, ಕಾನೂನು ಹೋರಾಟಗಳು ನಡೆದಿದ್ದು, ನಗರಸಭೆ ಗದ್ದುಗೆ ಏರಲು ಎರಡೂ ಪಕ್ಷಗಳು ನಡೆಸಿರುವ ಚತುರ ನಡೆಗಳು ಚುನಾವಣಾ ಕಣವನ್ನು ರಂಗೇರಿಸಿವೆ.   ಇದರ ಮಧ್ಯೆ, ಮೀಸಲಾತಿ ಪ್ರಕಟಗೊಂಡು 23 ದಿನಗಳ ಬಳಿಕ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಧಾರವಾಡದ ಹೈಕೋರ್ಟ್‌ …

Read More »

ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು. ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ. ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು. ವೇದಿಕೆಯಲ್ಲಿ 99 ಮಂದಿ …

Read More »

ನಿಪ್ಪಾಣಿ ನಗರಸಭೆ: ಮತ್ತೆ ಬಿಜೆಪಿ ಮೇಲುಗೈ

ನಿಪ್ಪಾಣಿ: ಸ್ಥಳೀಯ ನಗರಸಭೆಯ ಎರಡನೇಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆದು ಈ ಅವಧಿಯಲ್ಲೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಪಕ್ಷದ ಸೋನಲ್ ಕೋಠಡಿಯಾ ಅಧ್ಯಕ್ಷರಾಗಿ ಹಾಗೂ ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಬಹುಮತಗಳಿಂದ ಆಯ್ಕೆಯಾದರು.   ಇಬ್ಬರೂ ತಲಾ 17 ಮತಗಳನ್ನು ಪಡೆದು ವಿರೋಧಿ ಬಣದ ಶರದ ಪವಾರ ಗುಂಪು ಎನ್‍ಸಿಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ …

Read More »

ಜಮಾತ್‌-ಇ-ಇಸ್ಲಾಮಿ ಹಿಂದ್‌ನಿಂದ‌ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ

ಬೆಳಗಾವಿ: ‘ಜಮಾತ್‌-ಇ-ಇಸ್ಲಾಮಿ ಹಿಂದ್‌’ ವತಿಯಿಂದ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ 30ರವರೆಗೆ ನಡೆಯಲಿದೆ’ ಎಂದು ಸಂಘಟನೆಯ ರಾಜ್ಯ ಮಹಿಳಾ ಘಟಕದ ಸಲಹಾ ಪರಿಷತ್ತಿನ ಸದಸ್ಯೆ ಸಾಜೀದುನ್‌ ನಿಸ್ಸಾ ಲಾಲ್ಮಿಯ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಗಳು ದೇಶದ ಶಾಂತಿ ಮತ್ತು ಪ್ರಗತಿಗೆ ಧಕ್ಕೆ ತರುತ್ತಿವೆ. ಮಹಿಳೆಯರ ಆತ್ಮಹತ್ಯೆಗಳ ಪ್ರಮಾಣವೂ ಏರಿಕೆಯಾಗಿದೆ. ಸಮಾಜದಲ್ಲಿ ಸ್ತ್ರೀಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ. ನೈತಿಕ ಮೌಲ್ಯಗಳ …

Read More »

ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದ ತಹಶೀಲ್ದಾರ್ ಮೋಹನ ಭಸ್ಮೆ

ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದು ತಹಶೀಲ್ದಾರ್ ಮೋಹನ ಭಸ್ಮೆ ಕರೆ ನೀಡಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ‘ಗಣೇಶ ಚತುರ್ಥಿಯಲ್ಲಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರ ಭಾವನೆಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಹಬ್ಬದ …

Read More »

ಗ್ರಾಮೀಣರ ಆರ್ಥಿಕ ಬೆಳವಣಿಗೆಗೆ ಸಂಘ ಸಹಾಯಕ: ಟಿ.ಬಿ. ಕೆಂಚರಡ್ಡಿ

 (ಮೂಡಲಗಿ): ‘ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಸಂಘಗಳು ಬಹಳಷ್ಟು ಅನುಕೂಲವಾಗಿವೆ’ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಟಿ.ಬಿ. ಕೆಂಚರಡ್ಡಿ ಹೇಳಿದರು. ಇಲ್ಲಿಯ ಗುರ್ಲಾಪುರ ಅರ್ಬನ್‌ ಕೋ.ಆಪ್‌ ಕ್ರೆಡಿಟ್‌ ಸೊಸೈಟಿಯ 20ನೇ ವಾರ್ಷಿಕ ಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ, ಸಿಬ್ಬಂದಿ, ಠೇವಣಿದಾರರು ಮತ್ತು ಸದಸ್ಯರ ಪರಸ್ಪರ ಸಹಕಾರ ಮತ್ತು ವಿಶ್ವಾಸ ಮುಖ್ಯ’ ಎಂದರು. ಸಂಘದ ಅಧ್ಯಕ್ಷ ಶಿವಬಸು ಇಟ್ನಾಳ ಮಾತನಾಡಿ, …

Read More »