ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ …
Read More »Daily Archives: ಸೆಪ್ಟೆಂಬರ್ 3, 2024
ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ:C.M.
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ …
Read More »ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ
ಬೆಂಗಳೂರು,ಸೆಪ್ಟೆಂಬರ್ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …
Read More »ಕಲಬುರಗಿ | ಮೂರು ಸೇತುವೆ ಮುಳುಗಡೆ: ಹಲವೆಡೆ ಸಂಪರ್ಕ ಕಡಿತ
ಕಾಳಗಿ: ಕಳೆದ ಮೂರುದಿನಗಳಿಂದ ತಾಲ್ಲೂಕಿನೆಲ್ಲೆಡೆ ಸುರಿಯುತ್ತಿರುವ ಮಳೆ ಮತ್ತು ಹೇರೂರ ಬೆಣ್ಣೆತೊರಾ ಜಲಾಶಯದ ನೀರಿನ ಪ್ರವಾಹಕ್ಕೆ ಮೂರು ಸೇತುವೆಗಳು ಮುಳುಗಡೆಯಾಗಿ ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಮಲಘಾಣ-ಕಾಳಗಿ, ಕಲಗುರ್ತಿ-ಡೊಣ್ಣೂರ ಮತ್ತು ತೆಂಗಳಿ-ತೆಂಗಳಿ ಕ್ರಾಸ್ ನಡುವಿನ ರಸ್ತೆ ಸಂಪರ್ಕದ ಹಳ್ಳದ ಸೇತುವೆಗಳು ನೀರಿನ ಪ್ರವಾಹಕ್ಕೆ ಭಾನುವಾರದಿಂದಲೇ ಮುಳುಗಿ ಹೋಗಿವೆ. ಪರಿಣಾಮ ಮಲಘಾಣ, ಕಲಗುರ್ತಿ, ಚಿತ್ತಾಪುರ ರಸ್ತೆ ಮಾರ್ಗದ ಸಂಪರ್ಕ ಕಡಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಕಣಸೂರ, ಹೆಬ್ಬಾಳ, ಶೆಳ್ಳಗಿ, ಹೇರೂರ, ಮಲಘಾಣ, ಡೊಣ್ಣೂರ, …
Read More »ಕರ್ನಾಟಕ ಸೇರಿದಂತೆ ಭಾರತದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ
ಕರ್ನಾಟಕ ಸೇರಿದಂತೆ ಭಾರತದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಇಂದು ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ವರ್ಷ ಮುಂಗಾರು ಮಳೆಯು ದೇಶದ ಅನೇಕ ರಾಜ್ಯಗಳಲ್ಲಿ ವಿನಾಶವನ್ನು ಉಂಟುಮಾಡಿದೆ. ಅಸ್ಸಾಂ ಮತ್ತು ಗುಜರಾತ್ ನಂತರ ದಕ್ಷಿಣ ಭಾರತದ ಹಲವು ರಾಜ್ಯಗಳು ಪ್ರವಾಹದಲ್ಲಿ ಮುಳುಗಿವೆ. ಆಂಧ್ರ ಹಾಗೂ ತೆಲಂಗಾಣ 2 ರಾಜ್ಯಗಳಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. …
Read More »