ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ ಬೆಂಗಳೂರು,ಸೆ.9- ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ …
Read More »Daily Archives: ಸೆಪ್ಟೆಂಬರ್ 9, 2024
ಎಂ.ಕೆ.ಹುಬ್ಬಳ್ಳಿ: ಕುಂಭಮೇಳದೊಂದಿಗೆ ಗಣೇಶೋತ್ಸವ ಮೆರವಣಿಗೆ
ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಶನಿವಾರ ಸಂಭ್ರಮದಿಂದ ಗಣೇಶೋತ್ಸವ ಪ್ರತಿಷ್ಠಾಪಣಾ ಮೆರವಣಿಗೆ ನಡೆಯಿತು. ಮನೆ ಮನೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ ಪಟ್ಟಣದ ಜನರು, ಸಂಜೆ ನಡೆದ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ಪಟ್ಟಣದಲ್ಲಿ ಸುಮಾರು 20ಕ್ಕೂ ಅಧಿಕ ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಗಮನ ಸೆಳೆದ 50ನೇ ವರ್ಷದ ಗಣೇಶೋತ್ಸವ ಸಂಭ್ರಮ: ಪಟ್ಟಣದ ಪೇಟೆ ಓಣಿಯ ಗಣೇಶೋತ್ಸವಕ್ಕೆ 50ವರ್ಷ ತುಂಬಿದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆ …
Read More »ಚಿಕ್ಕೋಡಿ: ಬೀದಿನಾಯಿಗಳ ಹಾವಳಿಗೆ ಜನರು ಹೈರಾಣ
ಚಿಕ್ಕೋಡಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಬೀದಿನಾಯಿಗಳ ಹಾವಳಿಯಿಂದ ಜನರು ಕಂಗಾಲಾಗಿದ್ದಾರೆ. ರಸ್ತೆ, ಮಾರುಕಟ್ಟೆ, ಕೃಷಿಭೂಮಿ, ಬೆಟ್ಟ-ಗುಡ್ಡ ಸೇರಿದಂತೆ ಎಲ್ಲೆಂದರಲ್ಲಿ ಬೀದಿನಾಯಿ ಓಡಾಡುತ್ತಿವೆ. ಇವುಗಳ ಉಪಟಳಕ್ಕೆ ಕಡಿವಾಣ ಬೀಳದ್ದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಆತಂಕದಿಂದಲೇ ಓಡಾಡುವಂತಾಗಿದೆ. ನಾಯಿಗಳನ್ನು ತಪ್ಪಿಸಲು ಹೋಗಿ ವಾಹನಗಳು ಹಾಗೂ ಸೈಕಲ್ಗಳು ನಿಯಂತ್ರಣ ತಪ್ಪಿದ ಪರಿಣಾಮ, ಹಲವು ಸವಾರರು ಬಿದ್ದು ಪೆಟ್ಟು ತಿಂದಿದ್ದಾರೆ. ಚಿಕ್ಕೋಡಿಯ ಜನನಿಬಿಡ ಪ್ರದೇಶಗಳಾದ ಕೇಂದ್ರ ಬಸ್ ನಿಲ್ದಾಣ, ಗಾಂಧಿ ಮಾರುಕಟ್ಟೆ, ಅಂಕಲಿ ಖೂಟ, ಪುರಸಭೆ ಕಚೇರಿ …
Read More »ಹಾರೋಹಳ್ಳಿ: ರಸ್ತೆಗಳಿಗೆ ಕಂಟಕ ಜಲ ಜೀವನ್ ಮಿಷನ್
ಹಾರೋಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲಜೀವನ್ ಮಿಷನ್ ಯೋಜನೆ ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕವಾಗಿದೆ. ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಕೆಲವು ದಿನಗಳ ಹಿಂದೆ ಜಲ ಜೀವನ್ ಮಿಷನ್ ಯೋಜನೆ ಜಾರಿಗೊಳಿಸಲು ಗ್ರಾಮದ ಕಾಂಕ್ರೀಟ್ ರಸ್ತೆ ಅಗೆದು ತಿಂಗಳಾನುಗಟ್ಟಲೇ ಹಾಗೆಯೇ ಬಿಡಲಾಗಿದೆ.ಇದರಿಂದಾಗಿ ವೃದ್ಧರು, ಕುರಿ-ಮೇಕೆ, ದನ-ಕರು ಸಂಚಾರಕ್ಕೆ ತೊಂದರೆ ಆಗಿದೆ. ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಕೊಟ್ಯಂತರ ರೂಪಾಯಿ ವೆಚ್ಚದಲ್ಲಿ …
Read More »
Laxmi News 24×7