Breaking News

Daily Archives: ಸೆಪ್ಟೆಂಬರ್ 20, 2024

ಅ.3 ರಿಂದ 20 ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ಬರುವ ಅಕ್ಟೋಬರ್ 3 ರಿಂದ 20ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ಏಪ್ರಿಲ್ನಲ್ಲೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅದರಂತೆ ಅ.೧ ರವರೆಗೆ ತರಗತಿಗಳು ನಡೆಯಲಿವೆ. ಅ. ೨ ರಂದು ಗಾಂಧಿಜಯಂತಿ. ಮರುದಿನ ಅ.೩ ರಿಂದ ೨೦ ರವರೆಗೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ …

Read More »

5 ತಿಂಗಳಿಗೆ 597 ಕೆ.ಜಿ ಚಿನ್ನ ಉತ್ಪಾದನೆ

ಹಟ್ಟಿಚಿನ್ನದಗಣಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ ಹಟ್ಟಿಚಿನ್ನದಗಣಿ ಕಂಪನಿ 613.686 ಕೆಜಿ ಗುರಿ ಪೈಕಿ 597.772 ಕೆಜಿ ಚಿನ್ನ ಉತ್ಪಾದಿಸಿದೆ. ಪ್ರತಿ ಟನ್ ಅದಿರಿನಲ್ಲಿ 2.23 ಗ್ರಾಂ ಉತ್ಪಾದನೆ ಗುರಿ ಹೊಂದಿದ್ದು, 2.74 ಗ್ರಾಂ. ಹಳದಿ ಲೋಹ ಉತ್ಪಾದನೆಯಾಗಿದೆ. ಏಪ್ರಿಲ್‌ನಲ್ಲಿ 118, ಮೇ 90, ಜೂನ್ 110, ಜುಲೈ 150, ಅಗಸ್ಟ್‌ನಲ್ಲಿ 127 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಜುಲೈನಲ್ಲಿ 133 ಕೆ.ಜಿ ಚಿನ್ನ ಉತ್ಪಾದನೆ ಗುರಿ ಹೊಂದಲಾಗಿತ್ತು. …

Read More »

ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅತಿಶಿ

ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  

Read More »

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ. ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈದ್ …

Read More »

ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ‘FIR’ ದಾಖಲು

ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು.   ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ತಿರುಪತಿ ದೇವಸ್ಥಾನಕ್ಕೆ ಎಂದಿಗೂ ‘ತುಪ್ಪ’ ಪೂರೈಸಿಲ್ಲ : ‘ಅಮುಲ್’ ಸ್ಪಷ್ಟನೆ

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಬಗ್ಗೆ ಭಾರಿ ವಿವಾದದ ಮಧ್ಯೆ, ದೇಶೀಯ ಡೈರಿ ದೈತ್ಯ ಅಮುಲ್ ಶುಕ್ರವಾರ ತಿರುಮಲ ತಿರುಪತಿ ದೇವಸ್ಥಾನಂ (TTD)ಗೆ ತುಪ್ಪವನ್ನು ಎಂದಿಗೂ ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯನ್ನ ಪರಿಹರಿಸಲು ಹೇಳಿಕೆ ಬಿಡುಗಡೆ ಮಾಡಿದ ಅಮುಲ್, ಎಂದಿಗೂ ಟಿಟಿಡಿಗೆ ಅಮುಲ್ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. “ನಾವು ಟಿಟಿಡಿಗೆ ಅಮುಲ್ ತುಪ್ಪವನ್ನು ಎಂದಿಗೂ ಪೂರೈಸಿಲ್ಲ ಎಂದು ತಿಳಿಸಲು ನಾವು …

Read More »

ಈಗಿನ ಸಿಎಂಗೆ ನಮ್ಮ ಭಯ ಇಲ್ಲ, ಮುಂದೆ ದೇವರು ಒಳ್ಳೆಯ ಸಿಎಂ ಕೊಟ್ಟೆ ಕೊಡ್ತಾನೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬಾಗಲಕೋಟೆ: ಹಿಂದಿನ ಸಿಎಂ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜದ ಬಗ್ಗೆ ಗೌರವ ಮತ್ತು ಭಯ ಇತ್ತು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಭಯ ಇಲ್ಲ. ಬದಲಿಗೆ ಇವರನ್ನು ಕಂಡರೆ ನಾವು ಭಯ ಪಡುವಂತಂತಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸುತ್ತಿಲ್ಲ …

Read More »

ಬೆಳಗಾವಿಯ ಜಿಲ್ಲಾ‌ ಪಂಚಾಯತಿ ಸಭೆ

ಬೆಳಗಾವಿಯ ಜಿಲ್ಲಾ‌ ಪಂಚಾಯತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ(ದಿಶಾ) ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಂಸದರುಗಳಾದ ಜಗದೀಶ್ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಈರಣ್ಣಾ ಕಡಾಡಿ, ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಜಿಲ್ಲಾ‌ ಪಂಚಾಯತಿ ಸಿ.ಇ.ಓ. ರಾಹುಲ್ ಶಿಂಧೆ, ಶಾಸಕರುಗಳಾದ ರಾಜು (ಆಸೀಫ್) ಸೇಠ್, ವಿಠ್ಠಲ ಹಲಗೇಕರ‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. #priyankajarkiholi #belagavi #chikkodi

Read More »

ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಮುನ್ನಲೆಗೆ ಬಂದಿದೆ. ಅತ್ಯಾಚಾರ ಆರೋಪ ಪ್ರಕರಣ ಮಾತ್ರವಲ್ಲದೆ ಹೆಚ್‌ಐವಿ ಇರುವ ರೋಗಿಗಳ ರಕ್ತವನ್ನು ತನ್ನದೇ ಪಕ್ಷದ ನಾಯಕರಿಗೆ ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ಮಾಡಿದ್ದರು ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಿಜೆಪಿ ನಾಯಕರೇ ಇದನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ಈಗ …

Read More »

ಕತ್ತೆ ಹಾಲಿನ ವ್ಯವಹಾರ: ‘ಜೆನ್ನಿಮಿಲ್ಕ್‌’ ಕಂಪನಿ ವಿರುದ್ಧ 60ಕ್ಕೂ ಅಧಿಕ ದೂರು

ಹೊಸಪೇಟೆ (ವಿಜಯನಗರ): ರೈತರಿಗೆ ಕತ್ತೆ ನೀಡಿ ಅವರಿಂದ ಹಾಲು ಖರೀದಿಸುವ ವ್ಯವಹಾರ ನಡೆಸುತ್ತಿದ್ದ ‘ಜೆನ್ನಿ ಮಿಲ್ಕ್’ ಕಂಪನಿ ವಿರುದ್ಧ 60ಕ್ಕೂ ಅಧಿಕ ಮಂದಿ ಇಲ್ಲಿನ ನಗರ ಠಾಣೆಯಲ್ಲಿ ದೂರು ನೀಡಿದ್ದು, ಇನ್ನೂ ಹಲವರು ರಾಜ್ಯದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದು ದೂರು ನೀಡುತ್ತಿದ್ದಾರೆ. ಮುಖ್ಯ ಆರೋಪಿಯೂ ಆಗಿರುವ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನೂತಲಪತಿ ಮುರಳಿ ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ‘ರಾಜ್ಯದ ವಿವಿಧೆಡೆ 100ರಿಂದ 120 ಮಂದಿ ಮೋಸ ಹೋಗಿರುವ …

Read More »