Breaking News

Daily Archives: ಸೆಪ್ಟೆಂಬರ್ 30, 2024

ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..?

ಅಕ್ಟೋಬರ್ 1 ರಿಂದ ಹಲವಾರು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಸಣ್ಣ ಉಳಿತಾಯ ಯೋಜನೆಗಳಿಂದ ಹಿಡಿದು ಆಧಾರ್ ಕಾರ್ಡ್ಗಳಿಗೆ ಸಂಬಂಧಿಸಿದ ನವೀಕರಣಗಳವರೆಗೆ, ಪರಿಣಾಮಕಾರಿ ಬಜೆಟ್ ನಿರ್ವಹಣೆಗೆ ಈ ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..?   ಬೋನಸ್ ಷೇರುಗಳು: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಬೋನಸ್ ಷೇರುಗಳ ವ್ಯಾಪಾರವನ್ನು ಸುಗಮಗೊಳಿಸಲು ಹೊಸ ಚೌಕಟ್ಟನ್ನು ಜಾರಿಗೆ ತಂದಿದೆ. ಅಕ್ಟೋಬರ್ 1, 2024 ರಿಂದ …

Read More »

ಬಿಜೆಪಿಯಿಂದ ಮುಂದೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಈಗ ಚುನಾವಣೆ ನಡೆದರೆ ಬಿಜೆಪಿ 140 ಸ್ಥಾನ ಗೆಲ್ಲಲಿದೆ: ಯತ್ನಾಳ

ರಾಮದುರ್ಗ: ‘ಕಾಂಗ್ರೆಸ್‌ ಬಗ್ಗೆ ರಾಜ್ಯದ ಜನರಲ್ಲಿ ಈಗ ಆಕ್ರೋಶ ಮಡುಗಟ್ಟಿದೆ. ಈಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸಿದರೆ, ಬಿಜೆಪಿ ಸುಮಾರು 140 ಸ್ಥಾನ ಗೆಲ್ಲಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್‌ ಹಾಗೂ ಭಜರಂಗ ದಳ ಶನಿವಾರ ಹಮ್ಮಿಕೊಂಡಿದ್ದ 60ನೇ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಅವರು ಮಾತನಾಡಿದರು.   ‘ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹಾಗಾಗಿ ಸಿ.ಎಂ ಸ್ಥಾನಕ್ಕಾಗಿ …

Read More »

ನೈತಿಕ ಹೊಣೆಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಎನ್.ರವಿಕುಮಾರ

ಎಂ.ಕೆ.ಹುಬ್ಬಳ್ಳಿ: ‘ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು. ಚನ್ನಮ್ಮನ ಕಿತ್ತೂರು ತಾಲೂಕಿನ ಕಾದರವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಈ ಮುಂಚೆ ರಾಜೀನಾಮೆ ಕೇಳಿದಾಗ, ಪ್ರಕರಣ ದಾಖಲಾಗಿದೆಯಾ ಎಂದು ಪ್ರಶ್ನಿಸುತ್ತಿದ್ದರು. ಈಗ ಎಫ್‌ಐಆರ್ ದಾಖಲಾಗಿದೆ. ಈಗ್ಯಾಕೆ ರಾಜೀನಾಮೆ ಕೊಡಲು ಹಿಂಜರಿಯುತ್ತಿದ್ದೀರಾ? ತಪ್ಪು ಮಾಡದಿದ್ದರೆ, ಹೆದರುವ ಅವಶ್ಯಕತೆ ಇಲ್ಲ’ …

Read More »

ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.   ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ …

Read More »

ಬಿಗ್ ಮನೆಗೆ ಸೀರಿಯಲ್ ಸುಂದರಿಯರಎಂಟ್ರಿ

ಬೆಂಗಳೂರು: ಬಿಗ್ ಬಾಸ್ ಕನ್ನಡ (Big Boss Kannada-11) ಆರಂಭವಾಗಿದೆ. ಕಿಚ್ಚ ಸುದೀಪ್ (Kiccha Sudeep) ಸ್ಟೈಲಿಸ್ಟ್ ಆಗಿ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಬಿಗ್ ಬಾಸ್ ಮನೆಯೊಳಗೆ ಹೋಗುವ ನಾಲ್ವರು ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿತ್ತು. ಇಂದು ಬಿಗ್ ಬಾಸ್ ಗೆ ಹೋಗುವ ಮೊದಲ ಸ್ಪರ್ಧಿ ತಮ್ಮದೇ ಸ್ಟೈಲ್ ನಲ್ಲಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. …

Read More »