ಬೆಂಗಳೂರು: ಸ್ಕೂಲ್, ಕಾಲೇಜುಗಳಲ್ಲಿ ಇತ್ತೀಚೆಗೆ ಹಿಡನ್ ಕ್ಯಾಮೆರಾ ಅಳವಡಿಸಿ, ಚಿತ್ರೀಕರಣ ಮಾಡಿರುವ ಬಗ್ಗೆ ಸುದ್ದಿಗಳು ಕೇಳುತ್ತಲೇ ಇದ್ದೇವೆ. ಇದೀಗ ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇದೇ ರೀತಿ ವಾಶ್ ರೂಮ್ಗೆ ಕ್ಯಾಮೆರಾ ಅಳವಡಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹೌದು, ಕಳೆದ ಬಾರಿ ಉಡುಪಿಯ ಕಾಲೇಜೊಂದರ ವಾಶ್ರೂಮ್ನಲ್ಲಿ ಮೊಬೈಲ್ ಇಟ್ಟಿರುವ ಬಗ್ಗೆ ಭಾರೀ ವಿವಾದ ಸೃಷ್ಟಿಯಾಗಿತ್ತು. ಇದೀಗ ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಾಶ್ ರೂಮ್ನಲ್ಲಿ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. …
Read More »Monthly Archives: ಸೆಪ್ಟೆಂಬರ್ 2024
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ: ಪಾಕ್ ಗೆ ಭಾರತ ನೋಟಿಸ್
ನವದೆಹಲಿ: ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಅನುಚ್ಛೇದ 12 (3) ರ ಅಡಿಯಲ್ಲಿ ಪರಿಶೀಲನೆ ಮತ್ತು ಮಾರ್ಪಾಡು ಕೋರಿ ಭಾರತ ಆಗಸ್ಟ್ 30 ರಂದು ಪಾಕಿಸ್ತಾನಕ್ಕೆ ಔಪಚಾರಿಕ ನೋಟಿಸ್ ನೀಡಿದೆ ಅಂತ ತಿಳಿದು ಬಂದಿದೆ. ಅಂದ ಹಾಗೇ, ಐಡಬ್ಲ್ಯೂಟಿಯ ಅನುಚ್ಛೇದ XII (3) ಆ ಉದ್ದೇಶಕ್ಕಾಗಿ ಎರಡೂ ಸರ್ಕಾರಗಳ ನಡುವೆ ಸೂಕ್ತವಾಗಿ ದೃಢೀಕರಿಸಿದ ಒಪ್ಪಂದದ ಮೂಲಕ ಒಪ್ಪಂದವನ್ನು ಮಾರ್ಪಡಿಸಲು ಅನುಮತಿಸುತ್ತದೆ. ಈ ಅಧಿಸೂಚನೆಯ ಮೂಲಕ, ಅನುಚ್ಛೇದ 12 (3) …
Read More »ನವೆಂಬರ್ನಲ್ಲಿ ವಿದೇಶಿ ನೆಲದಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಯೋಜನೆ?
ನವದೆಹಲಿ: ಐಪಿಎಲ್ 18ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನವೆಂಬರ್ 3 ಅಥವಾ 4ನೇ ವಾರದಲ್ಲಿ ನಡೆಯಲಿದೆ. ಈ ಬಾರಿ ಮೆಗಾ ಹರಾಜು ಪ್ರಕ್ರಿಯೆಯನ್ನು ವಿದೇಶಿ ನೆಲದಲ್ಲಿ ಆಯೋಜಿಸುವ ಯೋಜನೆಯನ್ನೂ ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಮೊದಲ ಬಾರಿಗೆ ಹರಾಜು ಪ್ರಕ್ರಿಯೆ ವಿದೇಶಿ ನೆಲದಲ್ಲಿ ಅಂದರೆ ದುಬೈನಲ್ಲಿ ನಡೆದಿತ್ತು. ಈ ಸಲವೂ ಮಧ್ಯಪ್ರಾಚ್ಯ ದೇಶದಲ್ಲೇ ಹರಾಜು ನಡೆಸಲು ಬಿಸಿಸಿಐ ಮುಂದಾಗಿದೆ. ಗಲ್ಫ್ ನಗರಗಳಾದ ದೋಹಾ, ಮಸ್ಕತ್ ಅಥವಾ ಅಬುಧಾಬಿಯಲ್ಲಿ …
Read More »ತಿರುಪತಿಯ ಲಡ್ಡು ಅಪವಿತ್ರ; ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ, ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ
ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ವೈಎಸ್ಆರ್ಸಿಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ತಿರುಮಲ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನದ ಪ್ರಸಾದದ ಲಡ್ಡುಗಳ ತಯಾರಿಕೆಗೆ ಶುದ್ಧ …
Read More »ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳನ್ನು ಎದುರಿಸಲು ‘SOP’ ರೂಪಿಸಲು ಸಮಿತಿ ರಚನೆ
ಬೆಂಗಳೂರು: ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿಗಳನ್ನು ನಿಭಾಯಿಸಲು ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್ಒಪಿ) ಸ್ಥಾಪಿಸಲು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್.ಎಂ ಅವರು ಸಲ್ಲಿಸಿರುವ ವರದಿಯನ್ನು ಗುರುವಾರ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಂಡಿಸಿ ವಿವರವಾಗಿ ಚರ್ಚಿಸಲಾಯಿತು. …
Read More »ಶಾಸಕ ಮುನಿರತ್ನ ಮಾಡಿಸಿದ್ದು ಎನ್ನಲಾದ ಹನಿಟ್ರ್ಯಾಪ್ ವೀಡಿಯೊ ವೈರಲ್!
ಬೆಂಗಳೂರು: ಶಾಸಕ ಮುನಿರತ್ನ ಮಾಡಿಸಿದ್ದು ಎನ್ನಲಾದ ಹನಿಟ್ರ್ಯಾಪ್ ವೀಡಿಯೊ ವೈರಲ್ ಆಗುತ್ತಿದೆ. ಮುನಿರತ್ನ ಗೋದಾಮಿನಲ್ಲೇ ಈ ಹನಿಟ್ರ್ಯಾಪ್ ನಡೆದಿದೆ ಎನ್ನಲಾಗಿದ್ದು, ಮುನಿರತ್ನ ತನ್ನ ಕಚೇರಿಯಲ್ಲಿ ಕುಳಿತು ಲೈವ್ ನೋಡುತ್ತಿದ್ದರು ಎನ್ನಲಾಗಿದೆ. ದೆ. ಸದ್ಯ ಕಾರ್ಪೊರೇಟರ್ ಪತ್ನಿಯ ಹನಿಟ್ರ್ಯಾಪ್ ವೀಡಿಯೊ ಎನ್ನಲಾಗ್ತಿರೋ ವೀಡಿಯೊ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ …
Read More »ಮೆದುಳು ಶಸ್ತ್ರ ಚಿಕಿತ್ಸೆ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯ
ಮೆದುಳು ಶಸ್ತ್ರ ಚಿಕಿತ್ಸೆ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯ ರೋಗಿ ಕೊಳಲುದುವಾಗಲೇ ಮೆದುಳು ಆಪರೇಷನ್. ಬ್ರೇನ್ ನಲ್ಲಿ ಬೆಳೆದ ಟ್ಯೂಮರ್ ಆಪರೇಷನ್ ಮಾಡಿ ಗಡ್ಡೆ ಹೊರ ತೆಗೆದ ವೈದ್ಯರು. ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ. ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ, ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ. ಈವರೆಗೂ ಒಟ್ಟು 103 ಮೆದುಳು ಶಸ್ತ್ರಚಿಕಿತ್ಸೆ …
Read More »ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್ಗೆ ಕೇಂದ್ರಕ್ಕೆ ಮನವಿ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳ ಜತೆಗೆ ಸರಕಾರ ಗುರುವಾರ ಮಹತ್ವದ ಸಭೆ ನಡೆಸಿತು. 16,114 ಚದರ ಕಿ.ಮೀ. ಪರಿಸರ ಸೂಕ್ಷ್ಮ ಅರಣ್ಯ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿ ಸಮ್ಮತಿಸಬಹುದು. ಅಲ್ಲದೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಪಶ್ಚಿಮ ಘಟ್ಟ ಪರಿಸರ …
Read More »ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್:ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಕರ್ನಾಟಕ ಸರ್ಕಾರ ತೀರ್ಮಾನ
ಬೆಂಗಳೂರು: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ …
Read More »ತುರ್ತು ಸೇವೆಗಷ್ಟೇ ಮರಳಿರುವ ಕೋಲ್ಕತ್ತಾ ಕಿರಿಯ ವೈದ್ಯರು; OPDಗೆ ಬರದೆ ಪ್ರತಿಭಟನೆ ಮುಂದುವರಿಕೆ
ಕೋಲ್ಕತ್ತಾ: ಪ್ರತಿಭಟನಾ ನಿರಿತ ಕಿರಿಯ ವೈದ್ಯರು 42 ದಿನಗಳ ಬಳಿಕ ಕರ್ತವ್ಯಕ್ಕೆ ಮರಳಲು ಒಪ್ಪಿದ್ದಾರೆ, ಆದರೆ ಪೂರ್ತಿಯಾಗಿ ಅಲ್ಲ. ತುರ್ತು ಸೇವೆಗಷ್ಟೇ ಮರಳಲಿರುವ ವೈದ್ಯರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಿಲ್ಲ. ತಮ್ಮ ಧರಣಿಯ ಭಾಗವಾಗಿ ಸರ್ಕಾರಿ ಆಸ್ಪತ್ರೆಗಳಾದ್ಯಂತ ಹೊರರೋಗಿ ವಿಭಾಗಗಳಿಗೆ (OPD) ತಮ್ಮ ಸೇವೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ. ಆಗಸ್ಟ್ನಲ್ಲಿ ತಮ್ಮ ಸಹೋದ್ಯೋಗಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ತಮ್ಮ ಧರಣಿಯನ್ನು ಮುಂದುವರೆಸಲಿದ್ದಾರೆ. ಪಶ್ಚಿಮ ಬಂಗಾಳದ ಜೂನಿಯರ್ …
Read More »