ಚಿಕ್ಕೋಡಿ: ಬಿಜೆಪಿ ( BJP) ನಾಯಕರ ಜೊತೆ ಆರ್ಎಸ್ಎಸ್ (RSS) ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರತಿಕ್ರಿಯೆ ನೀಡಿದ್ದು, ಈ ಸಂದರ್ಭದಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಗುಡುಗಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಿರುದ್ದ ಮತ್ತೊಮ್ಮೆ ಗುಡುಗಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ (BJP State President) ಎಂದು ಒಪ್ಪಿಲ್ಲ ಒಪ್ಪುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ವಿಜಯೇಂದ್ರವ ರಾಜ್ಯಾಧ್ಯಕ್ಷ ಸ್ಥಾನ …
Read More »Monthly Archives: ಸೆಪ್ಟೆಂಬರ್ 2024
ಗೋಣಿಚೀಲದ ಪ್ಯಾಂಟ್! ಈ ಪಲಾಝೋ ಬೆಲೆ ಕೇವಲ 60 ಸಾವಿರ ರೂ.
ನವದೆಹಲಿ: ಫ್ಯಾಷನ್ ವೇಗವಾಗಿ ಬದಲಾಗುವ ಒಂದು ವಿಷಯವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ಇರುತ್ತದೆ, ಫ್ಯಾಶನ್ ತುಂಬಾ ವೇಗವಾಗಿ ಬದಲಾಗುತ್ತದೆ. ಕೆಲವೊಮ್ಮೆ ಇಂತಹ ಕೆಲವು ಫ್ಯಾಷನ್ಗಳು ಜನರನ್ನು ಬೆಚ್ಚಿ ಬೀಳಿಸುತ್ತವೆ. ಇದೀಗ ಅಂತಹ ಒಂದು ಫ್ಯಾಶನ್ ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯವರೆಗೆ ನೀವು ಅನೇಕ ರೀತಿಯ ಬಟ್ಟೆಗಳಿಂದ ಮಾಡಿದ ಪಲಾಝೋ ಪ್ಯಾಂಟ್ಗಳನ್ನು ನೋಡಿರಬಹುದು. ನೀವು ವಿವಿಧ ಬಣ್ಣಗಳು ಮತ್ತು ಬೆಲೆಗಳ ಪಲಾಜೋಗಳನ್ನು ನೋಡಿರಬೇಕು ಮತ್ತು ಖರೀದಿಸಿರಬೇಕು. ಆದರೆ ನೀವು …
Read More »ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋ ಇದೆಚಾಲುವರಾಜು ಸ್ಫೋಟಕ ಹೇಳಿಕೆ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ. ಅವುಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಾಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ, ಮಾತನಾಡಿದ ಚಲುವರಾಜು, ಮುನಿರತ್ನ ಅವರ ಇನ್ನೂ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ. ಶಾಸಕ ಮುನಿರತ್ನ ಕಳೆದ ಮೂರು ವರ್ಷಗಳಿಂದ ತನಗೆ ಕೊಡಬಾರದ ಹಿಂಸೆ …
Read More »ಕಪ್ಪಗಿದ್ದಾಳೆ ಎಂದು ನಿಂದಿಸಿದ ಪತಿ, ಮನನೊಂದು ನೇಣಿಗೆ ಶರಣಾದ ನವವಿವಾಹಿತೆ!
ಚಿಕ್ಕಬಳ್ಳಾಪುರ : ಪತ್ನಿ ಕಪ್ಪಗಿದ್ದಾಳೆ ಎಂದು ನಿಂದಿಸಿದ್ದು ಅಲ್ಲದೆ, ತವರು ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಗಾಂಧಿನಗರದಲ್ಲಿ ನಡೆದಿದೆ. ಬಿಂದುಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು. ಗಾಂಧಿನಗರದ ನಿವಾಸಿ ಟೈಲರ್ ವೃತ್ತಿಯ ಕೆ.ಬಿ.ದೇವರಾಜು ಅವರಿಗೆ ಬಿಂದುಶ್ರೀ ಏಕೈಕ ಪುತ್ರಿ. ಇವರನ್ನು ಆವಲಹಳ್ಳಿ ಸಮೀಪದ ಹಿರಂಡಹಳ್ಳಿ ಗ್ರಾಮದ ಮುನಿರಾಜು ಎಂಬವರ ಮಗ ಎಚ್.ಎಂ.ರಾಘವೇಂದ್ರ ಅವರಿಗೆ …
Read More »ಮುನಿರತ್ನಂ ನಾಯ್ಡುಗೆ ಜೈಲು ಫಿಕ್ಸ್?
ದಲಿತ ಸಮುದಾಯದ ಬಗ್ಗೆ & ಒಕ್ಕಲಿಗ ಸಮುದಾಯದ ಕುರಿತು ಅಶ್ಲೀಲ ಪದ ಬಳಕೆ ಮಾಡಿ. ಬಿಬಿಎಂಪಿ ಗುತ್ತಿಗೆದಾರ & ಒಕ್ಕಲಿಗ ಸಮುದಾಯದ ವ್ಯಕ್ತಿಯ ಹೆಂಡತಿ & ತಾಯಿನ ಮಂಚಕ್ಕೆ ಕಳುಹಿಸು ಎಂದು ಕೆಟ್ಟದಾಗಿ ಮಾತನಾಡಿರುವ ಆರೋಪ, ಮುನಿರತ್ನಂ ನಾಯ್ಡು ವಿರುದ್ಧ ಕೇಳಿಬಂದಿದೆ. ಹೀಗೆ ಮುನಿರತ್ನಂ ನಾಯ್ಡು ವಿರುದ್ಧ ಇದೀಗ ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಕೇಸ್ ದಾಖಲು ಮಾಡಲಾಗಿದೆ. ಈ ನಡುವೆ ಪೊಲೀಸರು ದಾಖಲು ಮಾಡಿರುವ ಕೇಸ್ ನೋಡಿದರೆ, …
Read More »ರಾಗಿಯಲ್ಲಿ ಮೂಡಿದ ಮೋದಿ ಚಿತ್ರ, ದಾಖಲೆ ಬರೆದ 13ರ ಬಾಲಕಿ
ಚೆನ್ನೈ,ಸೆ.16- ಹದಿಮೂರು ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ 800 ಕೆಜಿ ತೂಕದ ರಾಗಿಯನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು 12 ಗಂಟೆಗಳ ಕಾಲ ಬಿಡುವಿಲ್ಲದಂತೆ ಚಿತ್ರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾನೆ.ಪ್ರೀಸ್ಲಿ ಶೆಕಿನಾ ಅವರು ನಾಳಿನ ಅವರ ಜನದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ವಿಶ್ವದ ಅತಿದೊಡ್ಡ ರಾಗಿ ಪೇಂಟಿಂಗ್ ಅನ್ನು ಅನಾವರಣಗೊಳಿಸಿದರು. ಪ್ರೀಸ್ಲಿ ಶೆಕಿನಾ ಚೆನ್ನೈನ ಕೋಲ್ಪಾಕ್ಕಂ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಾಪ್ ಸೆಲ್ವಂ ಮತ್ತು ಸಂಕೀರಾಣಿ ಅವರ …
Read More »HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ
ಬೆಂಗಳೂರು,ಸೆ.16- ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. ಸೆಪ್ಟೆಂಬರ್ 18ರಂದು ಎಚ್ಎಸ್ಆರ್ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ …
Read More »ವಾರದ ಮೊದಲ ದಿನವೇ ಚಿನ್ನ ಅಗ್ಗ
ವಾರದ ಮೊದಲ ದಿನವಾದ ಇಂದು ಸೆಪ್ಟೆಂಬರ್ 16 ಸೋಮವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆದರೆ ಬೆಲೆ ಇಳಿಕೆ ತುಂಬಾ ಕಡಿಮೆಯಾಗಿದೆ. ಇಂದು ದೇಶದ ಬಹುತೇಕ ಎಲ್ಲಾ ನಗರಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 74,500 ರೂಪಾಯಿ ಇದೆ. 22ಕ್ಯಾರೆಟ್ ಚಿನ್ನದ ದರ 78,500 ದಾಟಿದೆ. 18 ಕ್ಯಾರೆಟ್ ಚಿನ್ನದ ದರವೂ 59000 ಆಸುಪಾಸಿನಲ್ಲಿ ವಹಿವಾಟಾಗುತ್ತಿದೆ. ಬೆಳ್ಳಿ ದರ ಕೆಜಿಗೆ 91,900 ರೂಪಾಯಿ ಇದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ …
Read More »ಇನ್ಮುಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಹಣ ಸಿಗಲ್ಲ?
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಪ್ರಮುಖ 5 ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ ಖಾತೆಗೆ 2,000 ರೂಪಾಯಿ ಜಮೆ ಮಾಡುತ್ತಾ ಬಂದಿದೆ. ಆದರೆ, ಇದೀಗ 1.78 ಲಕ್ಷ ಮಹಿಳೆಯರಿಗೆ ಹಣ ಪಾವತಿಗೆ ತಡೆ ಹಾಕಲಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ತಡೆ ಹಾಕಲಾಗಿದೆ. …
Read More »ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ
ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ. ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು …
Read More »