Breaking News

Daily Archives: ಅಕ್ಟೋಬರ್ 9, 2024

ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಊಹಾಪೋಹ ಅಲ್ಲ: ಬಿ.ವೈ.ವಿಜಯೇಂದ್ರ

ಗದಗ: ‘ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬುದು ಊಹಾಪೋಹ ಅಲ್ಲ. ನೂರಕ್ಕೆ ನೂರು ಸತ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ‘ಅವರು ಕೆಳಗಿಳಿಯುತ್ತಿರುವುದು ಗೊತ್ತಾಗಿರುವ ಕಾರಣದಿಂದಲೇ ಕೆಲವು ನಾಯಕರು ತಮ್ಮ ಬಳಿ ಎಷ್ಟು ಜನ ಇದ್ದಾರೆ ಎಂಬುದನ್ನು ತೋರಿಸಲು ಸಭೆ ನಡೆಸುತ್ತಿದ್ದಾರೆ’ ಎಂದು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.   ಸಿಎಂ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜಾತಿಗಣತಿ ದಾಳ ಉರುಳಿಸಿದ್ದಾರೆ. ಆದರೆ, ಸಿಎಂ ಸ್ಥಾನ ಉಳಿಸಲು …

Read More »

ಬಿಡುಗಡೆಯಾಗದ ಗೌರವ ಧನ. ಆಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳನಿಂದ ಗೌರವ ಧನ ಬಿಡುಗಡೆಯಾಗದೆ ಜೀವನ ನಿರ್ವಹಣೆಗೆ ತೊಂದರೆಯಿಂದ ಬೇಸತ್ತ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಡಾಂಗೇ ಪಾರ್ಕಿನ ಅಂಗನವಾಡಿ ಕೇಂದ್ರದ ಸಹಾಯಕಿ ಭಾರತಿ ಆತ್ಮಹತ್ಯೆಗೆ ಯತ್ನಿಸಿದವರು. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ, ಇತರೆಡೆ ಕರೆದೊಯ್ಯಲು ಹಣಕಾಸಿನ ತೊಂದರೆಯಿಂದ ಕುಟುಂಬದವರು ಪರಿತಪಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕಳೆದ ಮೂರು ತಿಂಗಳನಿಂದ ಗೌರವ ಧನ …

Read More »

ರತನ್ ಟಾಟಾ ಆರೋಗ್ಯ ಗಂಭೀರ:

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವರ ಆರೋಗ್ಯ ಏರುಪೇರಾಗಿರುವ ಬಗ್ಗೆ ವರದಿಗಳು ಬಂದಿದ್ದವು. ಆದರೆ, ಸೋಷಿಯಲ್‌ ಮೀಡಿಯಾದ ಮೂಲಕ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಅವರ ಆರೋಗ್ಯ ಕ್ಷಿಣಿಸುತ್ತಿರುವ ಬಗ್ಗೆ ವರದಿಯಾಗಿದೆ. ರತನ್‌ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿರುವ …

Read More »

ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್‌ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್‌

ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್‌ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್‌ ಇಲ್ಲಿವರೆಗೆ ಉದ್ಯಮಿಗಳು, ಅಧಿಕಾರಿಗಳು ಹಾಗೂ ಕೆಲ ರಾಜಕೀಯ ನಾಯಕರ ಹನಿಟ್ರ್ಯಾಪ್‌ ಬಗ್ಗೆ ಸದ್ದು ಕೇಳಿಬರುತ್ತಿದೆ. ಆದರೆ, ಈ ಹಿಂದೆ ಕರ್ನಾಟಕದ ಸಿಎಂ ಸ್ಥಾನದಲ್ಲಿದ್ದವರೂ ಈ ಹನಿಟ್ರ್ಯಾಪ್‌ ಬಲೆಯಲ್ಲಿ ಸಿಲುಕಿದ್ದರು ಎನ್ನುವ ವಿಚಾರ ಸದ್ಯ ರಾಜ್ಯ ರಾಜಕಾರಣವನ್ನು ತಲ್ಲಣಗೊಳಿಸಿದೆ.   ಬಿಜೆಪಿ ಶಾಸಕ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾದರು ಎನ್ನಲಾದ ಸಂತ್ರಸ್ತ ಮಹಿಳೆಯು ಇಂದು ಸುದ್ದಿಗೋಷ್ಠಿ ನಡೆಸಿ, …

Read More »

ಪಾಕಿಸ್ತಾನದಲ್ಲೂ ಅದ್ಧೂರಿ ನವರಾತ್ರಿ ಸಂಭ್ರಮ!

ಭಾರತದಲ್ಲಿ ನವರಾತ್ರಿ ಹಬ್ಬಕ್ಕೆ (Navaratri Festival) ವಿಶೇಷ ಆದ್ಯತೆ ನೀಡಲಾಗುತ್ತದೆ 9 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಬೀದಿ ಬೀದಿಗಳಲ್ಲಿ ದುರ್ಗಾದೇವಿಯನ್ನು (Durga ) ಕೂರಿಸಿ ಆರಾಧನೆ ಮಾಡಲಾಗುತ್ತದೆ. ಅದೇ ರೀತಿ ಕೆಲವರು ಮನೆಯಲ್ಲಿಯೂ ಕೂಡ ದುರ್ಗಾಮಾತೆಯನ್ನು ಕೂರಿಸಿ, ಅಥವಾ ಗೊಂಬೆಗಳನ್ನು ಕೂರಿಸಿ ಒಂಭತ್ತು ದಿನಗಳ ಕಾಲ ವೃತ ಮಾಡಿ ಪೂಜೆ (Puja) ಮಾಡಿ ಭಕ್ತಭಾವದಿಂದ ನವದುರ್ಗೆಯರಿಗೆ ಪ್ರಾರ್ಥನೆ ಮಾಡುತ್ತಾರೆ. ಆದರೆ ಮುಸ್ಲಿಮರೇ (Muslims) ಬಹುಸಂಖ್ಯಾತರಾಗಿರುವ ಹಿಂದುಗಳು ಕೇವಲ …

Read More »

ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ,ಮಳೆಗೆ ಕೊಚ್ಚಿ ಹೋಯ್ತು ಆಟೋ! ಜೀವದ ಹಂಗು ತೊರೆದು ಮಗು ರಕ್ಷಿಸಿದ ಆಟೋ ಚಾಲಕ!

ಹಾವೇರಿ: ರಾಜ್ಯಾದ್ಯಂತ ಮತ್ತೆ ವರುಣನ (Rain) ಆರ್ಭಟ ಮುಂದುವರೆದಿದೆ. ಕೆಲ ದಿನಗಳಷ್ಟು ಬಿಡುವು ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದ್ದು, ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗುತ್ತಿದೆ. ಇನ್ನು ಗುಡುಗು (Thunder) ಸಹಿತ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಜೊತೆಗೆ ವಿಪರೀತ ಗಾಳಿ ಬೀಸುತ್ತಿರುವುದರಿಂದ ಮರಗಳು (Tree) ಧರೆಗುರುಳಿದೆ. ಮಳೆ ರಾಯನ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಇನ್ನು ರಾಜ್ಯದ ಹಲವೆಡೆ ಮಳೆ ಧಾರಾಕಾರ ಹೊಯ್ಯುತ್ತಿದ್ದು, ಇದರ ಕಂಪ್ಲೀಟ್ …

Read More »

ಬಿಜೆಪಿ ಅವಧಿಯಲ್ಲಿ ‘KSRTC ಬಸ್’ಗಳ ಆಯುಧ ಪೂಜೆಗೆ ರೂ.30 ಕೊಡ್ತಿತ್ತು, ನಾವು 250ಕ್ಕೆ ಹೆಚ್ಚಿಸಿದ್ದೇವೆ-ರಾಮಲಿಂಗಾರೆಡ್ಡಿ

ಬೆಂಗಳೂರು: 2009ರ ಬಿಜೆಪಿಯ ಅವಧಿಯಿಂದಲೂ ಕೆ ಎಸ್ ಆರ್ ಟಿ ಸಿಯ ಬಸ್ಸುಗಳಿಗೆ ಆಯುಧ ಪೂಜೆ ಮಾಡೋದಕ್ಕೆ ರೂ.30 ನೀಡಲಾಗುತ್ತಿತ್ತು. ಅದನ್ನು ರೂ.50, ಆನಂತ್ರ 100, ಈಗ ರೂ.250ಕ್ಕೆ ಹೆಚ್ಚಿಸಿದ್ದು ಕಾಂಗ್ರೆಸ್ ಸರ್ಕಾರ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.   ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ಅವರಿಗೆ ಸಾರಿಗೆ ಸಂಸ್ಥೆಗಳ‌ ಬಗ್ಗೆ ಮಾತನಾಡಬೇಕಾದರೆ ಸ್ವಲ್ಪವಾದರೂ ಮಾಹಿತಿ‌ ಸಂಗ್ರಹಿಸಿ ಟ್ಟೀಟ್ ಮಾಡಲು ಯಾರಾದರೂ ಪ್ರಜ್ಞಾವಂತರು …

Read More »

ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು …

Read More »

ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು. ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು …

Read More »

ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹೋಮ ಮಾಡಿಸ್ತಿದ್ದಾರೆ,

ಬೆಂಗಳೂರು: ಕಾಂಗ್ರೆಸ್​ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್​. ಅಶೋಕ್​ (R. Ashok) ಟಾಂಗ್​ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ …

Read More »