Breaking News

Daily Archives: ಅಕ್ಟೋಬರ್ 14, 2024

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ ಆಪ್ತ ನಾಪತ್ತೆ

ಬಸವಕಲ್ಯಾಣ : ಕೆಲವು ದಿನಗಳ ಹಿಂದೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿ ಬಳಿಕ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಆಪ್ತ ಸಂಜುಕುಮಾರ್ ಸುಗರೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಂಜುಕುಮಾರ್ ಶಾಸಕ ಶರಣು ಸಲಗಾರ್ ಪರಮಾಪ್ತ ಎಂದೇ ಹೇಳಲಾಗುತ್ತಿದೆ. ನಿನ್ನೆ ಬೆಳಿಗ್ಗೆ ಸಂಜುಕುಮಾರ್ ಅವರು, ಬಸವಕಲ್ಯಾಣದ ಜೈಶಂಕರ …

Read More »

ಹಾವೇರಿ: ನರೇಗಾ ಯೋಜನೆ ಜಾಗೃತಿ ರಥಕ್ಕೆ ಚಾಲನೆ

ಹಾವೇರಿ: ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಕಲ್ಪಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮಾಹಿತಿ ಹಾಗೂ ಆಯವ್ಯಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ರಥ ಯಾತ್ರೆ ರೂಪಿಸಲಾಗಿದೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ ‘ನರೇಗಾ ಜಾಗೃತಿ ರಥ’ಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಚಾಲನೆ ನೀಡಿ, ಜಾಗೃತಿಯ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಅಕ್ಷಯ್ ಶ್ರೀಧರ್ ಮಾತನಾಡಿ, ‘ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ …

Read More »

ರಾಜ್ಯದಲ್ಲಿ ನಾಳೆ ಭಾರಿ ಮಳೆ

ಬೆಂಗಳೂರು: ರಾಜ್ಯದ ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ …

Read More »

ಅತ್ಯಾಚಾರ ಕೇಸ್ : ಸಂತ್ರಸ್ತೆ ಮಹಿಳೆಯ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು!

ಹುಬ್ಬಳ್ಳಿ : ಮಹಿಳಾ ರೈತ ಮುಖಂಡೆಯ ಮೇಲೆ ಶಾಸಕ ವಿನಯ ಕುಲಕರ್ಣಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು.ಇದೀಗ ವಿನಯ್ ಕುಲಕರ್ಣಿ ಅವರ ಆಪ್ತ ಸಂತ್ರಸ್ತೆ ಮಹಿಳೆಯ ವಿರುದ್ಧವೇ ಪ್ರತಿ ದೂರು ದಾಖಲಿಸಿದ್ದಾರೆ. ಹೌದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತ ಅರ್ಜುನ್ ಗುಡ್ಡದ …

Read More »

ಮುಂಬೈ | ಟೋಲ್‌ ಶುಲ್ಕ ರದ್ದು: ಕಾರು, ಮಿನಿ ಗೂಡ್ಸ್‌ ವಾಹನಗಳಿಗೆ ಅನ್ವಯ

ಮುಂಬೈ: ಮುಂಬೈ ಪ್ರವೇಶಿಸುವ ಮತ್ತು ನಿರ್ಗಮಿಸುವ ಎಲ್ಲ ಐದು ಹೆದ್ದಾರಿಗಳಲ್ಲಿ ಟೋಲ್‌ ಶುಲ್ಕ ಅನ್ನು ‘ಮಹಾಯುತಿ’ ಸರ್ಕಾರ ರದ್ದುಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಸರ್ಕಾರದ ಈ ನಿರ್ಧಾರ ಮಹತ್ವ ಪಡೆದಿದೆ.   ಮುಂಬೈಗೆ ಪ್ರವೇಶಿಸುವುದಕ್ಕಾಗಲೀ ಅಥವಾ ಮುಂಬೈನಿಂದ ನಿರ್ಗಮಿಸುವುದಕ್ಕಾಗಲೀ ಲಘು ಮೋಟಾರ್‌ ವಾಹನಗಳಿಗೆ ಇದುವರೆಗೆ ವಿಧಿಸುತ್ತಿದ್ದ ₹45 ಟೋಲ್‌ ಶುಲ್ಕವನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಸಚಿವ ಸಂಪುಟ ಸೋಮವಾರ ನಿರ್ಧರಿಸಿದೆ. ಕಾರು, …

Read More »

ಕೆನಡಾ ಆರೋಪ ‘ಅಸಂಬದ್ಧ’: ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಭಾರತ ತಿರುಗೇಟು

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್‌ ಅವರನ್ನೂ ತನಿಖೆಗೆ ಒಳಪಡಿಸುವ ಕೆನಡಾ ಸರ್ಕಾರದ ಪ್ರಯತ್ನವನ್ನು ಭಾರತ ಬಲವಾಗಿ ವಿರೋಧಿಸಿದೆ. ಭಾರತದ ಹೈಕಮಿಷನರ್‌ ಸಂಜಯ್‌ ಕುಮಾರ್‌ ವರ್ಮಾ ಅವರ ವಿರುದ್ಧ ಮಾಡಿರುವ ಆರೋಪಗಳನ್ನು ಭಾರತವು ‘ಅಸಂಬದ್ಧ’ ಎಂದು ತಿರಸ್ಕರಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ‘ಈ ಅರೋಪವು ಜಸ್ಟಿನ್‌ ಟ್ರುಡೊ ಸರ್ಕಾರದ ರಾಜಕೀಯ ಕಾರ್ಯಸೂಚಿಯ ಒಂದು ಭಾಗ’ ಎಂದು ತಿರುಗೇಟು ನೀಡಿದೆ. ‘ಭಾರತವು …

Read More »

ಕೆಪಿಟಿಸಿಎಲ್‌ನ 2,975 ಹುದ್ದೆ ಭರ್ತಿಗೆ ಅಧಿಸೂಚನೆ: ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 2,542 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಸೇರಿ ಒಟ್ಟು 2,975 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 215 ಕಲ್ಯಾಣ ಕರ್ನಾಟಕ ಜಿಲ್ಲೆಗಳ ಹುದ್ದೆಗಳು ಮತ್ತು 2,760 ಉಳಿದ ಜಿಲ್ಲೆಗಳ ಅಭ್ಯರ್ಥಿಗಳದ್ದಾಗಿದೆ. ಅರ್ಹ ಅಭ್ಯರ್ಥಿಗಳು ಅ.21ರಿಂದ ನ.20ರವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೆಪಿಟಿಸಿಎಲ್, ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ …

Read More »

ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಕಮಿಷನರ್ ನೇತೃತ್ವದಲ್ಲಿ ರೇಡ್

ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ …

Read More »

ಪರಮಾನಂದವಾಡಿ | ನವರಾತ್ರಿ: ಗಮನಸೆಳೆದ ಮೆರವಣಿಗೆ

ಪರಮಾನಂದವಾಡಿ: ‘ದುರ್ಗಾದೇವಿ ಮಹಿಮೆಯನ್ನು ಜನರಿಗೆ ತಿಳಿಸುವುದೇ ದೇವಿ ಪುರಾಣದ ಉದ್ದೇಶ’ ಎಂದು ಸುಟ್ಟಟ್ಟಿಯ ಜ್ಞಾನಯೋಗ ವನಶ್ರೀ ಆಶ್ರಮದ ಕಲ್ಮೇಶ್ವರ ಮಹಾರಾಜರು ಹೇಳಿದರು. ಸಮೀಪದ ನಿಲಜಿಯ ದುರ್ಗಾದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ದೇವಿ ಪಾರಾಯಣ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.   ದುರ್ಗಾದೇವಿ ಮೂರ್ತಿ ಮೆರವಣಿಗೆ ಗಮನಸೆಳೆಯಿತು. ದೇವಿ ಅವತಾರದಲ್ಲಿದ್ದ 108 ಮಹಿಳೆಯರ ಪಾದಪೂಜೆ ಮಾಡಿ, ಉಡಿ ತುಂಬಲಾಯಿತು. ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶ್ರೀಮಂತ ಬಿರಡಿ, ತಮ್ಮಣ್ಣ ದೇವಮಾನೆ, ನೀಲಪ್ಪ ಕಾಂಬಳೆ, …

Read More »

ವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.

ಬೆಳಗಾವಿ: ಈ ವರ್ಷ ಗಾಣದ ಎಣ್ಣೆ ದರ ದುಬಾರಿಯಾದರೂ ಭಕ್ತರ ಭಕ್ತಿ ಕುಂದಿಲ್ಲ. ನವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.   ನವರಾತ್ರಿ ವೇಳೆ ಎರಡೂ ದೇವಾಲಯಗಳಲ್ಲಿ ದೀಪಗಳಿಗೆ ಎಣ್ಣೆ ಹಾಕುವ ಸಂಪ್ರದಾಯವಿದೆ. ಕಳೆದ ವರ್ಷ ಎಣ್ಣೆ ದರ ಕೆ.ಜಿಗೆ ₹ 105 ರಿಂದ …

Read More »