Breaking News

Daily Archives: ಅಕ್ಟೋಬರ್ 20, 2024

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿ ನೋಂದಣಿ ಮಸೂದೆ’ಗೆ ರಾಷ್ಟ್ರಪತಿ ಅಂಕಿತ!

ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು.   ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ …

Read More »

ಕಿಚ್ಚನಿಗೆ ಮಾತೃ ವಿಯೋಗ

ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ (ಅ.20) ನಿಧನರಾಗಿದ್ದಾರೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ …

Read More »

ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

ವಿಜಯಪುರ: ವಿಚಿತ್ರವಾದ ಆಕಳು ಕರುವೊಂದು ಜನಿಸಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನಡೆದಿದೆ. ಈ ಕರುವಿಗೆ ಒಂದು ಮುಖ, ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳು ಇವೆ. ರೈತ ಮಹಿಳೆ ಸಾವಿತ್ರಿ ನಾಗೂರಿ ಎಂಬುವರ ತೋಟದ ಮನೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡಿದೆ. ಈ ಕರುವಿಗೆ ಎರಡು, ನಾಲಿಗೆ, ಮೂರು ಕಣ್ಣು ಇರುವುದನ್ನು ಕಂಡು ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹ …

Read More »