Daily Archives: ಅಕ್ಟೋಬರ್ 23, 2024

ಬಹುಮಾನ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ

ಗೋಕಾಕ: ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿ.ಪಿ.ಎಲ್. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ರಾಯಲ್ ಚಾಲೆಂಜರ್ಸ್ ಗೋಕಾಕ ತಂಡ ಪ್ರಥಮ ಸ್ಥಾನ ಪಡೆಯಿತು. ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ₹ 75 ಸಾವಿರ ನಗದು ಬಹುಮಾನ ಗೋಕಾಕ್‌ ತಂಡಕ್ಕೆ ನೀಡಲಾಯಿತು. ರನ್ನರ್ಸ್ ಅಪ್ ಆಗಿ ಗೋಕಾಕ ರಾಯಲ್ಸ್ ತಂಡ ₹ 45 ಸಾವಿರ ನಗದು ಬಹುಮಾನ ಪಡೆಯಿತು. ಲಖನ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಸದಾನಂದ …

Read More »

45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ

ಮುಂಬೈ: ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವು ಗುರುವಾರ ತಡರಾತ್ರಿ 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರು, ಠಾಣೆಯ ಕೊಪ್ರಿ-ಪಂಚಪಖಾಡಿ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದು, ಅರ್ಧ ಡಜನ್‌ಗೂ ಅಧಿಕ ಸಂಪುಟ ಸದಸ್ಯರು ಈ ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲೇ ಟಿಕೆಟ್ ಪಡೆದಿದ್ದಾರೆ. 2022ರ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಿಡಿದು ಹೊರಬಂದ ಏಕನಾಥ ಶಿಂದೆ …

Read More »

ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಕನ್ನಡ ನಾಡು‌‌ ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡ‌ಪರ …

Read More »