Breaking News

Monthly Archives: ಅಕ್ಟೋಬರ್ 2024

ಪ್ರಕಾಶ್ ಅಂಬೇಡ್ಕರ್‌ಗೆ ಎದೆ ನೋವು; ಆಸ್ಪತ್ರೆಗೆ ದಾಖಲು

ಮುಂಬೈ: ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಸಂಸ್ಥಾಪಕ ಪ್ರಕಾಶ್‌ ಅಂಬೇಡ್ಕರ್‌ (70) ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಪುಣೆಯ ಆಸ್ಪತ್ರೆಗೆ ಗುರುವಾರ ಮುಂಜಾನೆ ದಾಖಲಿಸಲಾಗಿದೆ. ಪ್ರಕಾಶ್‌ ಅಂಬೇಡ್ಕರ್‌ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಮೊಮ್ಮಗ. ವೃತ್ತಿಯಿಂದ ವಕೀಲ, ಸಾಮಾಜಿಕ ಹೋರಾಟಗಾರ ಮತ್ತು ರಾಜಕಾರಣಿಯೂ ಆಗಿರುವ ಅವರು ‘ಬಾಳಾ ಸಾಹೇಬ್‌ ಅಂಬೇಡ್ಕರ್‌’ ಎಂದು ಜನಪ್ರಿಯ. ಅವರು, ಅಕೋಲ ಕ್ಷೇತ್ರದಿಂದ ಎರಡು ಬಾರಿ ಸಂಸದ ಮತ್ತು …

Read More »

ದೀಪಾವಳಿ ಬಂದರೆ ಸಾಕು ಭರ್ಜರಿ ಖಾದ್ಯಗಳ ರಸದೌತಣ

ದೀಪಾವಳಿ ಬಂದರೆ ಸಾಕು ಭರ್ಜರಿ ಖಾದ್ಯಗಳ ರಸದೌತಣ. ಬಗೆಬಗೆಯ ತಿನುಸುಗಳ ಸೊಗಸೂ ಇರುತ್ತದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಗಡಿ ಜಿಲ್ಲೆಗಳಲ್ಲಿ ಕನ್ನಡ- ಮರಾಠಿ ಮಿಶ್ರ ಸಂಸ್ಕೃತಿ ಖಾದ್ಯಗಳನ್ನು ಸವಿಯುವುದೇ ಸಡಗರ. ಸಿಹಿಯೂ, ಖಾರವೂ, ಕರಿದ ಪದಾರ್ಥಗಳೂ, ಬೇಕರಿ ತಿನಿಸುಗಳೂ… ಒಂದೇ ಎರಡೇ. ತಿಂಡಿಪ್ರಿಯರಿಗಂತೂ ಇದು ಹೇಳಿ ಮಾಡಿಸಿದ ಹಬ್ಬ. ‘ಬಲೀಂದ್ರ ಪೂಜೆ’ ಅಮಾವಾಸ್ಯೆಯ ವಿಶೇಷ. ಈ ದಿನದಿಂದಲೇ ವಿಕ್ರಮ ಸಂವತ್ಸರ ಆರಂಭವಾಗುತ್ತದೆ. ವರ್ತಕರು, ಉದ್ಯಮಿಗಳಿಗೆ ಈ ದಿನ ಅತ್ಯಂತ …

Read More »

ಬೆಳಕಿನ ಹಬ್ಬಕ್ಕೆ ‍ಪಗಡೆಯಾಟದ ಸಡಗರ

ದೀಪಾವಳಿ ಹಬ್ಬ ಬರುತ್ತಿದ್ದಂತೆ ಮೂಡಲಗಿ ತಾಲ್ಲೂಕಿನ ಹಳ್ಳಿಗಳಲ್ಲಿ ಪಗಡೆ ಆಟ ಆಡುವುದಕ್ಕೆ ಸಜ್ಜಾಗುತ್ತಾರೆ. ದೀಪಾವಳಿಗೆ ಉತ್ತರ ಕರ್ನಾಟಕದ ಬಹುತೇಕ ಗ್ರಾಮಗಳಲ್ಲಿ ಪಗಡೆ ಆಟದ ಸಂಭ್ರಮ ತುಂಬಿಕೊಳ್ಳುತ್ತದೆ. ಕೈಯಲ್ಲಿ ಪಗಡೆ ಹಾಸು, ಕವಡೆ ಕಾಯಿಗಳನ್ನು ಹಿಡಿದುಕೊಂಡು ಗ್ರಾಮದ ಅಗಸಿ ಕಟ್ಟೆ, ಪಂಚಾಯಿತಿ ಕಟ್ಟೆ, ದೇವಸ್ಥಾನದ ಕಟ್ಟೆಗೋ ಹೊರಟರೆಂದರೆ ದೀಪಾವಳಿ ಮೈದುಂಬಿಕೊಂಡಿದೆ ಎಂದರ್ಥ.   ದೀಪಾವಳಿಯ ಸುತ್ತ ಐದು ದಿನಗಳ ವರೆಗೆ ಪಗಡೆ ಆಟದ ರಂಗು ಏರುತ್ತದೆ. ಊರುಗಳಲ್ಲಿ ಆಕಾಶಬುಟ್ಟಿ ಮತ್ತು ಹಣತೆಗಳ …

Read More »

ವೈವಿಧ್ಯಮಯ ವಿನ್ಯಾಸಗಳ ಆಕಾಶಬುಟ್ಟಿಗಳು

ವೈವಿಧ್ಯಮಯ ವಿನ್ಯಾಸಗಳ ಆಕಾಶಬುಟ್ಟಿಗಳು ಬೆಳಗಾವಿ ಮಾರುಕಟ್ಟೆಯ ಬಣ್ಣವನ್ನು ಆಕರ್ಷಕಗೊಳಿಸಿದೆ. ತರಕಾರಿ, ಹಣ್ಣು-ಹಂಪಲುಗಳ ರಾಶಿ ಕಾಣಿಸುತ್ತಿದ್ದ ರಸ್ತೆಗಳಲ್ಲಿ ಏಕಾಏಕಿ ಕಾಮನಬಿಲ್ಲಿನಂಥ ಲೋಕ ಸೃಷ್ಟಿಯಾಗಿದೆ. ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಸಾಮಾನ್ಯ ಮಾರುಕಟ್ಟೆ ಈಗ ವರ್ಣರಂಜಿತ ರೂಪ ಪಡೆದು ಕಂಗೊಳಿಸುತ್ತಿದೆ. ಜನರಿಂದ ಕಿಕ್ಕಿರಿದು ಸೇರಿರುವ ಮಾರುಕಟ್ಟೆಗೆ ಕಾಲಿಟ್ಟರೆ ಸಾಕು; ಹೂಮಾಲೆಗಳು, ನಕ್ಷತ್ರಗಳು, ಬಗೆಬಗೆಯ ವಿನ್ಯಾಸಗಳ ಆಭರಣಗಳು, ಬಟ್ಟೆಗಳು, ವಿದ್ಯುದ್ದೀಪಗಳು ಚುಂಬಕಶಕ್ತಿಯಂತೆ ಸೆಳೆಯುತ್ತಿವೆ. ವರ್ಣರಂಜಿತ ಶಿವನಬುಟ್ಟಿಗಳಂತೂ ಒಂದಕ್ಕಿಂತ ಮತ್ತೊಂದು ಸುಂದರವಾಗಿವೆ. ಅವುಗಳ ಖರೀದಿಗೆ …

Read More »

ಸಾಂಪ್ರದಾಯಿಕ ಹಣತೆಗಳು, ಬೇಕಿದೆ ಸರ್ಕಾರದ ನೆರವು

ಚಿಕ್ಕೋಡಿ: ದೀಪಾವಳಿ ಬಂದರೆ ಸಾಕು; ತಾಲ್ಲೂಕಿನ ಕೋಥಳಿ ಗ್ರಾಮದಲ್ಲಿ ಸಡಗರ ಇಮ್ಮಡಿಯಾಗುತ್ತಿತ್ತು. ಮಣ್ಣಿನ ಹಣತೆಗಳನ್ನು ಮಾಡಲು ನಾಲ್ಕು ತಿಂಗಳು ಮೊದಲು ಸಿದ್ಧತೆ ನಡೆಯುತ್ತಿದ್ದವು. ಇಲ್ಲಿನ 30ಕ್ಕೂ ಹೆಚ್ಚು ಕುಂಬಾರ ಕುಟುಂಬಗಳು ಈ ಹಬ್ಬಕ್ಕಾಗಿ ಕಾಯುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಕುಂಬಾರರಿಗೂ ದೀಪಾವಳಿಗೆ ಸಂಬಂಧವೇ ಇಲ್ಲ ಎಂಬಷ್ಟು ಸಮಸ್ಯೆ ತಲೆದೋರಿದೆ. ಜೇಡಿಮಣ್ಣಿನ ಹಣತೆಗೆ ಬೇಡಿಕೆ ಇಲ್ಲದೇ ಕುಂಬಾರರು ಕುಂಬಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ದೀಪಾವಳಿ ಹಬ್ಬದಲ್ಲಿ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿಸುವುದು ಸಾಮಾನ್ಯವಾಗಿತ್ತು. ಆದರೆ ಇಂದು …

Read More »

ಬಯಲು ನಾಡ’ಲ್ಲಿ ಬೆಳಕಿನ ಹಬ್ಬ: ಖರೀದಿ ಭರಾಟೆ ಜೋರು, ತರಹೇವಾರಿ ಖಾದ್ಯದ ಘಮಲು

ಬೈಲಹೊಂಗಲ: ಇದೀಗ ತಾನೆ ಚನ್ನಮ್ಮನ ವಿಜಯೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಬೈಲಹೊಂಗಲ ಜನರಿಗೆ ಮತ್ತೊಂದು ಸಡಗರ ಬಂದಿದೆ. ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲೆಡೆ ಈಗ ದೀಪಾವಳಿಯ ಸಂಭ್ರಮ ಮನೆಮಾಡಿದೆ. ತೋರಣ, ಕಬ್ಬು, ಕಾರ್ತಿಕ ಬುಟ್ಟಿ, ಹೊಸ ಬಟ್ಟೆ ಖರೀದಿ ಜೋರಾಗಿದೆ. ದೀಪಾವಳಿಯ ಹಬ್ಬದ ಉಡುಗೊರೆಯಾಗಿ ಕಳೆದ ಒಂದು ತಿಂಗಳ ಹಿಂದೆ ಸುರಿದ ದೊಡ್ಡ ಮಳೆಯಿಂದ ರೈತರು, ವ್ಯಾಪಾರಸ್ಥರು ಖುಷಿಯಾಗಿದ್ದಾರೆ. ದೀಪಾವಳಿ ಸಂಭ್ರಮ ಮನೆಮನೆಗಳಲ್ಲಿ ತುಪ್ಪದ ಘಮಲು ಬೀರುವಂತೆ ಮಾಡಿದೆ. ಭರ್ಜರಿ ಹೋಳಿಗೆ, ವಡೆ, …

Read More »

ರಿವಾಲ್ವರ್ ಇಟ್ಟುಕೊಂಡ ಆಂಜನೇಯ

ಚಿಕ್ಕೋಡಿ: ದೇವರ ಆಯುಧಗಳು ಎಂದರೆ, ಗದೆ, ಬಿಲ್ಲು, ಖಡ್ಗ, ತ್ರಿಶೂಲ, ಶಂಖ, ಚಕ್ರ ನೋಡಿರುತ್ತೀರಿ. ಆದರೆ, ಪಿಸ್ತೂಲ್‌ ಅನ್ನೇ ಆಯುಧವಾಗಿಸಿಕೊಂಡ ದೇವರನ್ನು ನೋಡಬೇಕಾದರೆ ತಾಲ್ಲೂಕಿನ ಜಾಗನೂರಿಗೆ ಬರಬೇಕು. ಇಲ್ಲಿನ ಆಂಜನೇಯ ತನ್ನ ಸೊಂಟಕ್ಕೆ ಪಿಸ್ತೂಲ್ ಇಟ್ಟುಕೊಂಡಿರುವುದು ಕಂಡುಬರುತ್ತದೆ. ಜಾತ್ರೆ, ಉತ್ಸವ, ಹನುಮ ಜಯಂತಿ, ರಾಮನವಮಿ ಸೇರಿ ವಿಶೇಷ ಸಂದರ್ಭ ಹನುಮಾನ ದೇವರ ಮೂರ್ತಿ ಅಲಂಕರಿಸುವಾಗ, ಪಿಸ್ತೂಲ್ ಇರಿಸುವ ಪರಿಪಾಠ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ದೀಪಾವಳಿ ಪ್ರಯುಕ್ತ ನ.1, 2ರಂದು ವೈಭವದಿಂದ …

Read More »

ದೀಪಾವಳಿಗೆ ಆಕಾಶಬುಟ್ಟಿ ಹೊಳಪು

ಧಾರವಾಡ: ‘ಬೆಳಕಿನ ಹಬ್ಬ’ ದೀಪಾವಳಿಗೆ ಕಣ್ಣು ಕೋರೈಸುವ `ದೇಸಿ ಆಕಾಶಬುಟ್ಟಿ’ಗಳು ಮತ್ತು ತರಹೇವಾರಿ `ಮಣ್ಣಿನ ಹಣತೆ’ಗಳು ನಗರದ ಮಾರುಕಟ್ಟೆಗೆ ಬಂದಿದ್ದು, ಗ್ರಾಹಕರಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಿವೆ. ಬಟ್ಟೆ, ಕಟ್ಟಿಗೆ, ಮಿಂಚಿನ ಹಾಳೆ, ಉಲನ್ ದಾರದಿಂದ ತಯಾರಿಸಿದ ವಿಭಿನ್ನ ಶೈಲಿಯ ಆಕಾಶಬುಟ್ಟಿಗಳನ್ನು ನೋಡುಗರ ಗಮನ ಸೆಳೆಯುತ್ತಿವೆ. ಸ್ಟಾರ್, ಗಣಪ, ಲಕ್ಷ್ಮೀ ಬಣ್ಣದ ಬಟ್ಟೆಗಳು ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಬಗೆಯ ಆಕಾಶಬುಟ್ಟಿಗಳು ಮಾರುಕಟ್ಟೆಯಲ್ಲಿ ಸಿಗುತ್ತಿವೆ. ಪ್ರತಿ ವರ್ಷ ಚೀನಾದ ಆಕಾಶಬುಟ್ಟಿಗಳು ಮಾರುಕಟ್ಟೆಗೆ …

Read More »

‘ಹಸಿರು’ ದೀಪಾವಳಿಗೆ ಇರಲಿ ಆದ್ಯತೆ

ಹುಬ್ಬಳ್ಳಿ: ದೀಪಾವಳಿ ಹಬ್ಬವೆಂದರೆ ಎಲ್ಲೆಡೆ ಸಡಗರ. ಹಬ್ಬದಲ್ಲಿ ದೀಪಗಳಿಗೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವವನ್ನು ಜನರು ಪಟಾಕಿಗಳಿಗೂ ನೀಡುತ್ತಾರೆ. ಪಟಾಕಿಗಳೆಂದರೆ ಮಕ್ಕಳಿಂದ ಹಿಡಿದು ಎಲ್ಲರಿಗೂ ಅಚ್ಚುಮೆಚ್ಚು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ಅ.31ರಿಂದ ನ.2ರವರೆಗೆ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿಗಳನ್ನು ಹಾರಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದೆ. ಪಟಾಕಿ ಹಚ್ಚಿದಾಗ ಬರುವ ಶಬ್ದ, ವಿವಿಧ ಬಣ್ಣ, …

Read More »

ದೀಪಾವಳಿ, ಸಾಲು ಸಾಲು ರಜೆಗೆ ಊರಿಗೆ ಹೊರಟ ಭಾರೀ ಜನ: ಬೆಂಗಳೂರಲ್ಲಿ ಟ್ರಾಫಿಕ್ ಜಾಮ್: ಬಸ್ ಸೀಟ್ ಗಾಗಿ ನೂಕುನುಗ್ಗಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಜನ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದು, ಟೌನ್ ಹಾಲ್ ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜೇಸಿ ರಸ್ತೆ, ಮೈಸೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗಾಂಧಿನಗರ ಸುತ್ತಮುತ್ತ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ 2 ಗಂಟೆಯಿಂದಲೂ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದೆ. ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ಎಲ್ಲೆಂದರಲ್ಲಿ ಬೈಕ್ ಸವಾರರು ಯುಟರ್ನ್ ತೆಗೆದುಕೊಳ್ಳುತ್ತಿದ್ದಾರೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಎಐ ಸಿಗ್ನಲ್ ಗಳು ಕೆಲಸಕ್ಕೆ ಬಾರದಂತಾಗಿದೆ. ವಾಹನಗಳ …

Read More »